Saturday, April 26, 2025
Saturday, April 26, 2025

Bapuji Institute of Engineering & Technology ವೇದಾದಿ ಸನಾತನ ಸಾಹಿತ್ಯಗಳ ಅಧ್ಯಯನದಿಂದ “ಸಚ್ಚಿದಾನಂದ” ಲಭ್ಯ- ಡಾ.ಎಚ್.ಬಿ.ಮಂಜುನಾಥ್

Date:

Bapuji Institute of Engineering & Technology ಭಾರತ ಎಂಬುದು ಕೇವಲ ಒಂದು ದೇಶದ ಹೆಸರಲ್ಲ, ಇದು ಜ್ಞಾನವನ್ನು ಪ್ರೀತಿಸುವ, ಆರಾಧಿಸುವ ದ್ಯೋತಕವಾಗಿದೆ ಎಂದು ಹಿರಿಯ ಪತ್ರಕರ್ತ ಡಾ.ಎಚ್ ಬಿ ಮಂಜುನಾಥ ಹೇಳಿದರು. ದಾವಣಗೆರೆ ನಗರದ ಬಾಪೂಜಿ ತಾಂತ್ರಿಕ ಮಹಾವಿದ್ಯಾಲಯದ ಎಸ್ ಎಸ್ ಮಲ್ಲಿಕಾರ್ಜುನ ಸಾಂಸ್ಕೃತಿಕ ಕೇಂದ್ರದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ನಿರ್ದೇಶನದ ಮೇರೆಗೆ ನೆರವೇರಿದ ಭಾರತೀಯ ಜ್ಞಾನವಿಧಾನದಲ್ಲಿ ವೇದಗಳ ಸಮಗ್ರತೆ ಎಂಬ ವಿಷಯವಾಗಿ ಮಾತನಾಡುತ್ತಾ ‘ಭ’ ಎಂದರೆ ‘ಬೆಳಕು’, ‘ರತಿ’ ಅಥವಾ ‘ರತ’ ಎಂದರೆ ಪ್ರೀತಿಸುವುದು, ‘ಭಾರತ’ ಎಂದರೆ ಜ್ಞಾನ ಪ್ರಕಾಶವನ್ನು ಗೌರವಿಸುವುದು ಎಂದು ಆಗುತ್ತದೆ. ವಿಶ್ವದ ಅತ್ಯಂತ ಪ್ರಾಚೀನ ವಾಜ್ಞಯವಾದ ವೇದ ವೇದಾಂತಗಳು ಜೀವ ಜಗತ್ತಿನ ಸ್ವಾಸ್ಥ್ಯದ ಕುರಿತಾಗಿ ಕರ್ಮಕಾಂಡದಲ್ಲಿಯೂ ಜೀವನ್ ಮುಕ್ತಿಯ ಬಗ್ಗೆ ಜ್ಞಾನ ಕಾಂಡದಲ್ಲಿಯೂ ಹೇಳಿದ್ದು ಮತ ಭೇದವಿಲ್ಲದೆ ಎಲ್ಲರಿಗೂ ಇದು ಅನ್ವಯ ಯೋಗ್ಯವಾಗಿದೆ ಎಂಬುದನ್ನು ಸ್ವಾರಸ್ಯಕರ ಉದಾಹರಣೆಗಳ ಮೂಲಕ ಪ್ರತಿಪಾದಿಸಿದರು. ಪರಿಪೂರ್ಣ ಅಸ್ತಿತ್ವವು ‘ಸತ್’ ಆದರೆ ಪರಿಪೂರ್ಣ ಅರಿವು ‘ಚಿತ್’ ಆಗುತ್ತದೆ, ಪರಿಪೂರ್ಣ ಅನುಭವವು ‘ಆನಂದ’ವಾಗುತ್ತದೆ, ಈ ಸತ್ ಚಿತ್ ಆನಂದವೇ ‘ಸಚ್ಚಿದಾನಂದ’, ಇದು ವೇದಾದಿ ಸನಾತನ ಸಾಹಿತ್ಯಗಳ ಅಧ್ಯಯನದಿಂದ ಸಾಧ್ಯ,ಸನಾತನ ಎಂದರೆ ಪ್ರಾಚೀನವಾದದ್ದು ಶಾಶ್ವತವಾದದ್ದು ಎಂದರ್ಥವೆಂದರು. ಕಾಲೇಜಿನ ನಿರ್ದೇಶಕ ಪ್ರೊ. ವೈ.ವೃಷಭೇಂದ್ರಪ್ಪನವರ ಉಪಸ್ಥಿತಿಯಲ್ಲಿ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಶ್ರೀನಿಧಿ ಕುಲಕರ್ಣಿ ಸ್ವಾಗತಿಸಿದರು. ಸಂಜನಾ ಪರಿಚಯ ನುಡಿಗಳ ನಾಡಿದರು. ಜವಳಿ ವಿಭಾಗದ ಪ್ರಾಧ್ಯಾಪಕ ಎಸ್.ಎಮ್. ಚಂದ್ರಶೇಖರ್ ಪ್ರಾಸ್ತಾವಿಕ ನುಡಿಗಳ ನಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM siddharamaih ಪಹಲ್ಗಾಮ್ ದುರ್ಘಟನೆ‌ ಗುಪ್ತಚರ ವ್ಯವಸ್ಥೆಯ ವೈಫಲ್ಯ- ಮುಖ್ಯಮಂತ್ರಿ ಸಿದ್ಧರಾಮಯ್ಯ

CM siddharamaih ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ...

Dr. Rajkumar ಡಾ.ರಾಜ್ ಅವರಿಗಿದ್ದಷ್ಟು ಅಭಿಮಾನಿಗಳು ಬೇರೆ ಯಾವ ನಟರಿಗೂ ಇಲ್ಲ: ವಿ.ಮೂರ್ತಿ

Dr. Rajkumar ವರನಟ ನಟಸಾರ್ವಭೌಮ ಕನ್ನಡದ ಮೇರು ನಟ ಡಾಕ್ಟರ್ ರಾಜಕುಮಾರ್...

Acharya Tulsi National College of Commerce ರಕ್ತದಾನಿಗಳು ಸಮಾಜದ ನೈಜ ಹೀರೋಗಳು- ಡಾ.ಪಿ.ನಾರಾಯಣ್

Acharya Tulsi National College of Commerce ಎಲ್ಲಾ ದಾನಗಳಿಗಿಂತ ರಕ್ತದಾನ...