Friday, May 8, 2026
Friday, May 8, 2026

Bapuji Institute of Engineering & Technology ವೇದಾದಿ ಸನಾತನ ಸಾಹಿತ್ಯಗಳ ಅಧ್ಯಯನದಿಂದ “ಸಚ್ಚಿದಾನಂದ” ಲಭ್ಯ- ಡಾ.ಎಚ್.ಬಿ.ಮಂಜುನಾಥ್

Date:

Bapuji Institute of Engineering & Technology ಭಾರತ ಎಂಬುದು ಕೇವಲ ಒಂದು ದೇಶದ ಹೆಸರಲ್ಲ, ಇದು ಜ್ಞಾನವನ್ನು ಪ್ರೀತಿಸುವ, ಆರಾಧಿಸುವ ದ್ಯೋತಕವಾಗಿದೆ ಎಂದು ಹಿರಿಯ ಪತ್ರಕರ್ತ ಡಾ.ಎಚ್ ಬಿ ಮಂಜುನಾಥ ಹೇಳಿದರು. ದಾವಣಗೆರೆ ನಗರದ ಬಾಪೂಜಿ ತಾಂತ್ರಿಕ ಮಹಾವಿದ್ಯಾಲಯದ ಎಸ್ ಎಸ್ ಮಲ್ಲಿಕಾರ್ಜುನ ಸಾಂಸ್ಕೃತಿಕ ಕೇಂದ್ರದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ನಿರ್ದೇಶನದ ಮೇರೆಗೆ ನೆರವೇರಿದ ಭಾರತೀಯ ಜ್ಞಾನವಿಧಾನದಲ್ಲಿ ವೇದಗಳ ಸಮಗ್ರತೆ ಎಂಬ ವಿಷಯವಾಗಿ ಮಾತನಾಡುತ್ತಾ ‘ಭ’ ಎಂದರೆ ‘ಬೆಳಕು’, ‘ರತಿ’ ಅಥವಾ ‘ರತ’ ಎಂದರೆ ಪ್ರೀತಿಸುವುದು, ‘ಭಾರತ’ ಎಂದರೆ ಜ್ಞಾನ ಪ್ರಕಾಶವನ್ನು ಗೌರವಿಸುವುದು ಎಂದು ಆಗುತ್ತದೆ. ವಿಶ್ವದ ಅತ್ಯಂತ ಪ್ರಾಚೀನ ವಾಜ್ಞಯವಾದ ವೇದ ವೇದಾಂತಗಳು ಜೀವ ಜಗತ್ತಿನ ಸ್ವಾಸ್ಥ್ಯದ ಕುರಿತಾಗಿ ಕರ್ಮಕಾಂಡದಲ್ಲಿಯೂ ಜೀವನ್ ಮುಕ್ತಿಯ ಬಗ್ಗೆ ಜ್ಞಾನ ಕಾಂಡದಲ್ಲಿಯೂ ಹೇಳಿದ್ದು ಮತ ಭೇದವಿಲ್ಲದೆ ಎಲ್ಲರಿಗೂ ಇದು ಅನ್ವಯ ಯೋಗ್ಯವಾಗಿದೆ ಎಂಬುದನ್ನು ಸ್ವಾರಸ್ಯಕರ ಉದಾಹರಣೆಗಳ ಮೂಲಕ ಪ್ರತಿಪಾದಿಸಿದರು. ಪರಿಪೂರ್ಣ ಅಸ್ತಿತ್ವವು ‘ಸತ್’ ಆದರೆ ಪರಿಪೂರ್ಣ ಅರಿವು ‘ಚಿತ್’ ಆಗುತ್ತದೆ, ಪರಿಪೂರ್ಣ ಅನುಭವವು ‘ಆನಂದ’ವಾಗುತ್ತದೆ, ಈ ಸತ್ ಚಿತ್ ಆನಂದವೇ ‘ಸಚ್ಚಿದಾನಂದ’, ಇದು ವೇದಾದಿ ಸನಾತನ ಸಾಹಿತ್ಯಗಳ ಅಧ್ಯಯನದಿಂದ ಸಾಧ್ಯ,ಸನಾತನ ಎಂದರೆ ಪ್ರಾಚೀನವಾದದ್ದು ಶಾಶ್ವತವಾದದ್ದು ಎಂದರ್ಥವೆಂದರು. ಕಾಲೇಜಿನ ನಿರ್ದೇಶಕ ಪ್ರೊ. ವೈ.ವೃಷಭೇಂದ್ರಪ್ಪನವರ ಉಪಸ್ಥಿತಿಯಲ್ಲಿ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಶ್ರೀನಿಧಿ ಕುಲಕರ್ಣಿ ಸ್ವಾಗತಿಸಿದರು. ಸಂಜನಾ ಪರಿಚಯ ನುಡಿಗಳ ನಾಡಿದರು. ಜವಳಿ ವಿಭಾಗದ ಪ್ರಾಧ್ಯಾಪಕ ಎಸ್.ಎಮ್. ಚಂದ್ರಶೇಖರ್ ಪ್ರಾಸ್ತಾವಿಕ ನುಡಿಗಳ ನಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga police ಅನಾಮಧೇಯ ಮೃತವ್ಯಕ್ತಿ ಪತ್ತೆ. ಕೋಟೆ ಪೊಲೀಸ್ ಠಾಣೆ ಪ್ರಕಟಣೆ.

Shivamogga police ಮೇ. 04 ರಂದು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಲಷ್ಕರ್...

Shikaripura Station ಶಿಕಾರಿಪುರ ಠಾಣೆಯಲ್ಲಿ ವಿವಿಧ ವಸ್ತುಗಳ ಹರಾಜು.

Shikaripura Station ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ತನಿಖೆಯ...

Youth Hostel Association ಸರ್ ಪಾಸ್ ಹಿಮಾಲಯ ಚಾರಣವು ಪ್ರತಿಯೊಬ್ಬರಿಗೂ ಸಂತಸ ಹೆಚ್ಚಿಸುತ್ತದೆ- ಎಸ್.ಎಸ್.ವಾಗೀಶ್.

Youth Hostel Association ಚಾರಣಿಗರ ಸ್ವರ್ಗ ಹಿಮಾಲಯ ಪ್ರದೇಶ. ಪ್ರತಿ ದಿನ ಪ್ರಾಕೃತಿಕ...