Tuesday, March 4, 2025
Tuesday, March 4, 2025

Shivamogga Union Of Working Journalists Association ವಾರ್ಷಿಕ ದತ್ತಿ ಪುರಸ್ಕಾರ ಪುರಸ್ಕೃತ ಜಿಲ್ಲಾ ಪತ್ರಕರ್ತರಿಗೆ ಅಭಿನಂದನೆ

Date:

Shivamogga Union Of Working Journalists Association ಶಿವಮೊಗ್ಗ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿಯ ಮಿಂಚು ಶ್ರೀನಿವಾಸ್ ಪ್ರಶಸ್ತಿ ಪುರಸ್ಕೃತರಾದ ಶಿವಮೊಗ್ಗೆಯ ಹಿರಿಯ ಪತ್ರಕರ್ತರು, ವಿಜಯವಾಣಿ ಪತ್ರಿಕೆಯ ಸ್ಥಾನಿಕ ಸಂಪಾದಕ ಚಂದ್ರಶೇಖರ್ ಶೃಂಗೇರಿಯವರಿಗೆ, ಎಸ್. ಹೆಚ್. ರಂಗಸ್ವಾಮಿ ಪ್ರಶಸ್ತಿ ಪುರಸ್ಕೃತರಾದ ಹಿರಿಯ ಪತ್ರಕರ್ತ ಗಿರೀಶ್ ಉಮ್ರಾಯ್ ಹಾಗೂ ಗಿರಿಜಮ್ಮ, ರುದ್ರಪ್ಪ ತಾಳಿಕೋಟಿ ಪ್ರಶಸ್ತಿ ಪುರಸ್ಕೃತರಾದ ಸಂಯುಕ್ತ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ್ತಿ ಕವಿತಾರವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆ ಅಭಿನಂದಿಸಿದೆ.

ಈ ಸಂಬಂಧವಾಗಿ ಹೇಳಿಕೆ ನೀಡಿರುವ ಸಂಘದ ಜಿಲ್ಲಾ ಶಾಖೆಯ ಅಧ್ಯಕ್ಷ ಕೆ.ವಿ. ಶಿವಕುಮಾರ್, ರಾಜ್ಯ ಸಮಿತಿ ಸದಸ್ಯ ಎನ್. ರವಿಕುಮಾರ್, ಪ್ರಧಾನ ಕಾರ್ಯದರ್ಶಿ ವಿ. ಟಿ. ಅರುಣ್ ಹಾಗೂ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿ ಶುಭ ಕೋರಿದ್ದಾರೆ.
ಅ. ರಾ. ಶ್ರೀನಿವಾಸ್‌ರಿಗೆ ಅಭಿನಂದನೆ

ಇದೇ ಸಂದರ್ಭದಲ್ಲಿ ಸಾಗರ ತಾಲೂಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿರುವ ಹಿರಿಯ ಪತ್ರಕರ್ತ ಅ. ರಾ. ಶ್ರೀನಿವಾಸ್‌ರವರನ್ನು ಅಭಿನಂದಿಸಿರುವ ಅವರು, ಇದು ಪತ್ರಿಕಾ ಕ್ಷೇತ್ರಕ್ಕೆ ಸಂದ ಗೌರವ ಎಂದು ಶುಭ ಹಾರೈಸಿದ್ದಾರೆ. ಸುದೀರ್ಘ ಕಾಲದವರೆಗೆ ಪತ್ರಕರ್ತರಾಗಿ, ಕತೆ, ಕಾದಂಬರಿ, ರಂಗ ವಿಮರ್ಶಕರಾಗಿ ತಮ್ಮದೇ ಆದ ಛಾಪು ಮೂಡಿಸಿರುವ ಶ್ರೀನಿವಾಸ್‌ರವರ ಸರ್ವಾಧ್ಯಕ್ಷತೆಯಲ್ಲಿ ಸಮ್ಮೇಳನ ಯಶಸ್ವಿಯಾಗುವುದರ ಜೊತೆಗೆ ಮಾದರಿಯಾಗಿ ನಡೆಯಲಿ ಎಂದು ಆಶಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

E-Swathu ಇ -ಸ್ವತ್ತು ಬಗ್ಗೆ ಜನಜಾಗೃತಿ ಮತ್ತು ನಗರಪಾಲಿಕೆಗೆ ಮನವಿ ಸಲ್ಲಿಕೆಗೆ ಬನ್ನಿ – ಕೆ.ವಿ.ವಸಂತಕುಮಾರ್

E-Swathu 04.03.2025, ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಕೆಎಂಡಿಎಸ್ ಸಾಫ್ಟ್‌ವೇರ್ ಮೂಲಕ...

Bharat Scouts and Guides ವಿದ್ಯಾರ್ಥಿಗಳಲ್ಲಿ ಸ್ಕೌಟ್ಸ್ ನಾಯಕತ್ವ ಗುಣ ಬೆಳೆಸುತ್ತದೆ- ಮಂಜುನಾಥ್

Bharat Scouts and Guides ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಪಾಲ್ಗೊಳ್ಳುವುದರಿಂದ...

CM Siddaramaiah ಡಾ.ರಾಜ್ ಕುಮಾರ್ ಅಭಿನಯದ ಸಿನಿಮಾಗಳ ಮೌಲ್ಯ,ಘನತೆ ಇಂದಿನ ಸಿನಿಮಾಗಳಲ್ಲಿ ಕಾಣುತ್ತಿಲ್ಲ- ಸಿದ್ಧರಾಮಯ್ಯ.

CM Siddaramaiah ವಿಶ್ವದರ್ಜೆಯ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ...