Saturday, August 8, 2026
Saturday, August 8, 2026

Bhadravathi Surveyor Lokayukta ಭದ್ರಾವತಿ ಭೂಮಾಪನಾ ಪರಿವೀಕ್ಷಕ ಲೋಕಾಯುಕ್ತ ಬಲೆಗೆ!

Date:

Bhadravathi Surveyor Lokayukta ಬಸವರಾಜಪ್ಪ.ಎಂ.ಹೆಚ್ ಬಿನ್ ಲೇಟ್ ಹನುಮಂತಪ್ಪ, ಮತ್ತಿಘಟ್ಟ ಗ್ರಾಮ. ಭದ್ರಾವತಿ ತಾಲ್ಲೂಕು ರವರ ಹೆಸರಿನಲ್ಲಿದ್ದ ಸ.ನಂ.56/10 ರಲ್ಲಿನ 1 ಎಕರೆ 20 ಗುಂಟೆ ಜಮೀನಿನ ಪಕ್ಕ ಪೋಡಿ ದುರಸ್ಥಿ ಮಾಡಿಕೊಡುವ ಬಗ್ಗೆ ಭದ್ರಾವತಿ ತಾಲ್ಲೂಕು ಎ.ಡಿ.ಎಲ್.ಆರ್ ಕಛೇರಿಯ ಭೂಮಾಪನಾ ಪರಿವೀಕ್ಷಕ ಟಿ.ಮಲ್ಲಿಕಾರ್ಜುನಯ್ಯ ಎಂಬುವವರು ಲಂಚದ ಹಣಕ್ಕೆ ಬೇಡಿಕೆ ಇಟ್ಟ ಬಗ್ಗೆ ಶಿವಮೊಗ್ಗ ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿರುತ್ತಾರೆ.

ದಿನಾಂಕ:23/07/2013 ರಂದು ಸದರಿ ಅಪಾದಿತ ಅಧಿಕಾರಿ ಪಿರ್ಯಾದುದಾರರಿಂದ 15,000/- ರೂ ಲಂಚದ ಹಣವನ್ನು ಶಿವಮೊಗ್ಗ ನಗರ ವಿನೋಬನಗರ ಬಡಾವಣೆಯ ಕೆಂಚಪ್ಪ ಲೇಔಟ್ ನ ಆಪಾದಿತರ ವಾಸದ ಮನೆಯಲ್ಲಿ ಕೇಳಿ ಪಡೆದುಕೊಳ್ಳುವಾಗ ಟ್ರ‍್ಯಾಪ್ ಮಾಡಲಾಗಿರುತ್ತದೆ. ಕೆ.ಸಿ.ಪುರುಷೋತ್ತಮ, ಪೊಲೀಸ್ ಇನ್ಸ್ಪೆಕ್ಟರ್, ಕ.ಲೋ.ಶಿವಮೊಗ್ಗ ರವರು ಪ್ರಕರಣವನ್ನು ತನಿಖೆ ಕೈಗೊಂಡು ಆಪಾದಿತರ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿರುತ್ತಾರೆ.

ಈ ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆ ನಡೆದು ದಿನಾಂಕ:28/02/2025 ರಂದು ಶಿವಮೊಗ್ಗದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಮರುಳಸಿದ್ದಾರಾದ್ಯ ಹೆಚ್.ಜೆ. ರವರು ಆರೋಪಿ ಟಿ.ಮಲ್ಲಿಕಾರ್ಜುನಯ್ಯ ಇವರಿಗೆ ಒಂದು ವರ್ಷ ಆರು ತಿಂಗಳು ಕಾರಾಗೃಹ ಶಿಕ್ಷೆ ಮತ್ತು 30,000/- ರೂ ದಂಡ ವಿಧಿಸಿ ಆದೇಶಿಸಿರುತ್ತಾರೆ.
ಸರ್ಕಾರದ ಪರವಾಗಿ ವಿಶೇಷ ಸಾರ್ವಜನಿಕ ಅಭಿಯೋಜಕರಾದ ಎಂ.ಡಿ.ಸುಂದರ್ ರಾಜ್ ರವರು ವಾದ ಮಂಡಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...

Car Accident ಸಿಗಂದೂರಿಗೆ ಹೊರಟ ಪ್ರವಾಸಿಗರ ಕಾರು ಚೋರಡಿ ಸೇತುವೆ ಬಳಿ ಪಲ್ಟಿ: ಆರು ಮಂದಿಗೆ ಗಾಯ.

Car Accident  ಶಿವಮೊಗ್ಗ ಜಿಲ್ಲೆಯ ಚೋರಡಿ ಬ್ರಿಡ್ಜ್ ಸಮೀಪ ಈ ಭೀಕರ...