Monday, August 31, 2026
Monday, August 31, 2026

CM Siddaramaiah ಡಾ.ರಾಜ್ ಕುಮಾರ್ ಅಭಿನಯದ ಸಿನಿಮಾಗಳ ಮೌಲ್ಯ,ಘನತೆ ಇಂದಿನ ಸಿನಿಮಾಗಳಲ್ಲಿ ಕಾಣುತ್ತಿಲ್ಲ- ಸಿದ್ಧರಾಮಯ್ಯ.

Date:

CM Siddaramaiah ವಿಶ್ವದರ್ಜೆಯ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ.
ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲ ಅವಕಾಶಗಳನ್ನು ಸೃಷ್ಟಿಸಬಹುದು. ಇದಕ್ಕಾಗಿ ವಿಶ್ವ ದರ್ಜೆಯ ಅತ್ಯುನ್ನತ ಗುಣಮಟ್ಟದ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತಿದ್ದೇವೆ. ತಂತ್ರಜ್ಞಾನದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಸೆಯುವ ಸಿನಿಮಾಗಳನ್ನು ವಿಶ್ವದರ್ಜೆಯ ಗುಣಮಟ್ಟದಲ್ಲಿ ಇಲ್ಲಿ ನಿರ್ಮಾಣ ಆಗಬೇಕು ಮುಖ್ಯಮಂತ್ರಿ ಸಿದ್ಧರಾಮಯ್ಯ ಕರೆಕೊಟ್ಟಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯನವರು ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್‌ಗಳ‌ ಮೇಲೆ ಆಯೋಜಿಸಿದ್ದ ವರ್ಣರಂಜಿತ ಕಾರ್ಯಕ್ರಮದಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಉದ್ಘಾಟಿಸಿ, ಮಾತನಾಡುತ್ತಿದ್ದರು.

ಅಂತಾರಾಷ್ಟ್ರೀಯ ಚಿತ್ರೋತ್ಸವ ವಿಶ್ವ ಸಮುದಾಯದ ಸಂಸ್ಕೃತಿಯ ಪ್ರತಿಬಿಂಬ. ಇದನ್ನು ನೋಡುಗರು ಸದುಪಯೋಗಪಡಿಸಿಕೊಳ್ಳಬೇಕು.
ನಮ್ಮಲ್ಲಿ ಅಸಹನೆ ಹೆಚ್ಚುತ್ತಿರುವುದರಿಂದ ಸಮಾಜದಲ್ಲಿ ಅಸಂತೋಷ ಹೆಚ್ಚುತ್ತಿದೆ. ಸಂಪತ್ತಿನ ಅಸಮಾನ ಹಂಚಿಕೆ ಈ ಅಸಂತೋಷಕ್ಕೆ ಕಾರಣ. ದೇಶದ 1% ಜನರ ಕೈಯಲ್ಲಿ ದೇಶದ 50% ಸಂಪತ್ತು ಸೇರಿಕೊಂಡಿದೆ. ಇದಕ್ಕೆ ಕಲಾ ಮಾಧ್ಯಮ ಆಗಿರುವ ಸಿನಿಮಾಗಳು ಪರಿಹಾರ ಹುಡುಕಬೇಕು. ಸಮಾಜವನ್ನು ಕಲಾ ಮಾಧ್ಯಮದ ಮೂಲಕ ಬೆಸೆಯಬೇಕು.

ಡಾ.ರಾಜ್ ಕುಮಾರ್ ಅವರ ಸಿನಿಮಾಗಳಲ್ಲಿದ್ದ ಮೌಲ್ಯಗಳು ಮತ್ತು ಘನತೆ ಈಗಿನ ಸಿನಿಮಾಗಳಲ್ಲಿ ಕಾಣುತ್ತಿಲ್ಲ. ರಾಜ್ ಕುಮಾರ್ ಸಿನಿಮಾಗಳಲ್ಲಿ ಸೌಹಾರ್ದ ಮತ್ತು ಮಾನವೀಯ ಮೌಲ್ಯಗಳು ತುಂಬಿರುತ್ತಿದ್ದವು. ಹೀಗಾಗಿ ಸರ್ವರಿಗೂ ಅವರ ಸಿನಿಮಾಗಳು ಇಷ್ಟ ಆಗುತ್ತಿದ್ದವು.

CM Siddaramaiah ಮೌಡ್ಯಗಳನ್ನು ಬಿತ್ತುವ, ಸಂವಿಧಾನದ ಮೌಲ್ಯಗಳಿಗೆ ವಿರುದ್ಧವಾದ ಸಿನಿಮಾಗಳು ಸಮಾಜಕ್ಕೆ ಒಳ್ಳೆಯದಲ್ಲ. ಬಸವಣ್ಣನವರು ಕರ್ಮ ಸಿದ್ಧಾಂತವನ್ನು ತಿರಸ್ಕರಿಸಿದ್ದರು. ಸಿನಿಮಾಗಳು ಮತ್ತೆ ಮೌಡ್ಯಗಳನ್ನು ಬಿತ್ತುವುದಕ್ಕೆ ಹೋಗಬಾರದು.
ಈಗ ತಂತ್ರಜ್ಞಾನ ಬೆಳೆದು ಕೃತಕ ಬುದ್ದಿಮತ್ತೆವರೆಗೂ ಬೆಳೆದು ಬಂದಿದೆ. ನಮ್ಮ ಬದುಕನ್ನು ಪ್ರತಿಬಿಂಬಿಸುವ, ನಮ್ಮ ತಳಮಳಗಳಿಗೆ ಪರಿಹಾರ ಹುಡುಕುವ ಸಿನಿಮಾಗಳು ಬಂದಾಗ ಅಂತಹ ಸಿನಿಮಾಗಳು ಶಾಶ್ವತವಾಗಿ ಸಮಾಜದಲ್ಲಿ ಉಳಿಯುತ್ತವೆ.

ಬೆಂಗಳೂರು, ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲವೂ ಇದೆ. ತಂತ್ರಜ್ಞಾನದ ಅವಕಾಶಗಳನ್ನು ಬಳಸಿಕೊಂಡು ಉತ್ತಮ‌ ಸಿನಿಮಾಗಳನ್ನು ಮಾಡಿದರೆ ಸಮಾಜಕ್ಕೆ ಒಳ್ಳೆಯದಾಗುತ್ತದೆ. ಸಿನಿಮಾ ಕ್ಷೇತ್ರವೂ ಪ್ರಗತಿ ಕಾಣುತ್ತದೆ. ಈ ದಿಕ್ಕಿನಲ್ಲಿ ಸಿನಿಮಾ ಜಗತ್ತು ಮಾನವೀಯಗೊಳ್ಳಲಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...

Shivamogga News ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡಾ ಸ್ಫೂರ್ತಿ ರೂಢಿಸಿಕೊಳ್ಳಬೇಕು: ಶ್ರೀ ಚಂದ್ರಪ್ಪ ಎಸ್. ಗುಂಡಪಲ್ಲಿ

Shivamogga News ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡಾ...