Sunday, May 17, 2026
Sunday, May 17, 2026

CM Siddharamaih ಪತ್ರಿಕಾ ವಿತರಕರು ಪತ್ರಿಕಾ ಕ್ಷೇತ್ರದ ನರಮಂಡಲ- ಕೆ.ವಿ.ಪ್ರಭಾಕರ್

Date:

CM Siddharamaih ನಿತ್ಯ ಬೆಳಗ್ಗೆ ಕೋಳಿ ಕೂಗುವ ಮೊದಲೇ ಎದ್ದು ಕೆಲಸಕ್ಕೆ ಹೊರಡುವ ಪತ್ರಿಕಾ ವಿತಕರು ಪತ್ರಿಕಾ ಕ್ಷೇತ್ರದ ನರಮಂಡಲ ಇದ್ದಂತೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ನುಡಿದರು.

ರಾಜ್ಯ ಪತ್ರಿಕಾ ವಿತರಕರ ಸಂಘ, ಹಾಸನ ಜಿಲ್ಲಾ ಪತ್ರಿಕಾ ವಿತರಕರ ಸಂಘ, ಚನ್ನರಾಯಪಟ್ಟಣ ತಾಲೂಕು ಪತ್ರಿಕಾ ವಿತರಕರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಹಾಸನ ಜಿಲ್ಲಾ ಪತ್ರಿಕಾ ವಿತರಕರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.

ಪತ್ರಿಕೋದ್ಯಮದ ನರಮಂಡಲ ಇದ್ದಹಾಗೆ. ನರ ಮಂಡಲ ಇದ್ದರಷ್ಟೆ ಮನುಷ್ಯನ ದೇಹ ಕೆಲಸ ಮಾಡುವುದು. ಹಾಗೆಯೇ ಪತ್ರಿಕಾ ವಿತರಕರು ಪತ್ರಿಕಾ ಕ್ಷೇತ್ರದ ನರಮಂಡಲ. ಇಡೀ ದೇಶದ ಬೀದಿ ಬೀದಿಗಳಲ್ಲಿ ಓಡಾಡಿ ಸುದ್ದಿ ವಿತರಣೆ ಮಾಡುವ ವಿತರಕರು ಇಲ್ಲದೆ ಮುದ್ರಣಗೊಂಡ ಪತ್ರಿಕೆಗಳಿಗೆ ಮೋಕ್ಷ ಸಿಗುವುದಿಲ್ಲ ಎಂದು ನುಡಿದರು.

ಈ ನರಮಂಡಲಕ್ಕೆ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದ್ದು ಮಾತೃ ಹೃದಯ. ಈ ಬಾರಿಯ ಬಜೆಟ್ ನಲ್ಲೂ ಪತ್ರಿಕಾ ಕಾರ್ಮಿಕರಿಗೆ ಅನುಕೂಲ ಆಗುವ ಭರವಸೆ ಇದೆ ಎಂದು ತಿಳಿಸಿದರು.

CM Siddharamaih ಕಾರ್ಮಿಕ ಇಲಾಖೆಯಿಂದ ಈಗಾಗಲೇ ಸಾಕಷ್ಟು ಸವಲತ್ತುಗಳು ಸಿಗುತ್ತಿವೆ. ಈಗ ಆರೋಗ್ಯ ವಿಮೆಯ ಬೇಡಿಕೆ ಕೂಡ ಈಡೇರಿದೆ. ವಿತರಕರು ಹೆಚ್ಚೆಚ್ಚು ಸಂಘಟಿತರಾದಷ್ಟೂ ತಮ್ಮ ಬೇಡಿಕೆಗಳಿಗೆ ಶಕ್ತಿ ಬರುತ್ತದೆ ಎಂದು ತಿಳಿಸಿದರು.
ಇದೆ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷರಾದ ಎನ್. ಮಾಲತೇಶ್ ಭದ್ರಾವತಿ ತಾಲೂಕ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಪ್ರಧಾನ ಕಾರ್ಯದರ್ಶಿಯಾದ ಪರಶುರಾಮ್ ರಾವ್ ಅವರಿಗೆ ಗೌರವಿಸಿ ಸನ್ಮಾನಿಸಲಾಯಿತು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...