Monday, August 31, 2026
Monday, August 31, 2026

Karnataka Union Of Working Journalists Association ಶಿವಮೊಗ್ಗ ಪತ್ರಿಕಾ ಭವನಕ್ಕೆ ಆಡಳಿತಾಧಿಕಾರಿ ನೇಮಕ ಆದೇಶಕ್ಕೆ ರಾಜ್ಯ ಕಾರ್ಯನಿರತ ಪತ್ರಕರ್ತರ ‌ಸಂಘದ ಸ್ವಾಗತ

Date:

Karnataka Union Of Working Journalists Association ಶಿವಮೊಗ್ಗ ನಗರದ ಆರ್.ಟಿ.ಓ. ಕಚೇರಿ ರಸ್ತೆಯಲ್ಲಿರುವ ಪತ್ರಿಕಾ ಭವನಕ್ಕೆ ಜಿಲ್ಲಾಡಳಿತದಿಂದ ಆಡಳಿತಾಧಿಕಾರಿಯನ್ನು ನೇಮಕ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ಕಾರ್ಯನಿತರ ಪತ್ರಕರ್ತರ ಧ್ವನಿ ಸಂಘಟನೆಯ ಶಿವಮೊಗ್ಗ ಘಟಕದ ವತಿಯಿಂದ ನಡೆಸಿದ ಪ್ರತಿಭಟನೆ ಮತ್ತು ಮನವಿಗಳಿಗೆ ಸ್ಪಂದಿಸಿರುವ ಶಿವಮೊಗ್ಗ ಜಿಲ್ಲಾಧಿಕಾರಿ ಶ್ರೀಯುತ ಗುರುತ್ತ ಹೆಗಡೆಯವರು ಈ ವಿಚಾರದಲ್ಲಿ ಸಮಗ್ರ ತನಿಖೆ ನಡೆಸಿ, ವರದಿ ಸಲ್ಲಿಸುವಂತೆ ನಿವೃತ್ತ ನ್ಯಾಯಾಧೀಶರನ್ನು ನೇಮಕ ಮಾಡಿದ್ದು, ಜಿಲ್ಲಾಧಿಕಾರಿಗಳ ಆದೇಶವನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯು ಸ್ವಾಗತಿಸಿದೆ.
ಕಳೆದ ಹಲವು ವರ್ಷಗಳಿಂದ ಶಿವಮೊಗ್ಗದಲ್ಲಿ ಸರ್ಕಾರದ ಅನುದಾನ, ಜನಪ್ರತಿನಿಧಿಗಳ ಅನುದಾನದ ಹಣದಲ್ಲಿ ಕಟ್ಟಿದ್ದ ಸರ್ಕಾರದ ಕಟ್ಟಡವಾದ ಪತ್ರಿಕಾ ಭವನವನ್ನು ಪ್ರೆಸ್ ಟ್ರಸ್ಟ್ ಹೆಸರಿನಲ್ಲಿ ನಿರ್ವಹಣೆ ಮಾಡುತ್ತಾ ಬಂದಿದ್ದು, ಸುದ್ದಿಗೋಷ್ಠಿ ಮತ್ತು ಪ್ರೆಸ್‍ನೋಟ್, ಕಾರ್ಯಕ್ರಮದ ಹೆಸರಿನಲ್ಲಿ ಸಾರ್ವಜನಿಕರಿಂದ ಹಣ ವಸೂಲು ಮಾಡುತ್ತಿದ್ದು, ಇದು ಕಾನೂನು ಬಾಹಿರವಾಗಿದೆ ಎಂದು ಆಕ್ಷೇಪಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಶಿವಮೊಗ್ಗ ಘಟಕದ ವತಿಯಿಂದ ಹಲವಾರು ಬಾರಿ ಜಿಲ್ಲಾಧಿಕಾರಿಗಳಿಗೆ ಮತ್ತು ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ನೀಡಲಾಗಿತ್ತು. ಜನವರಿ 30ರಂದು ಪತ್ರಿಕಾಭವನಕ್ಕೆ ಬೀಗ ಹಾಕಿ ಜಿಲ್ಲಾಡಳಿತಕ್ಕೆ ಬೀಗದ ಕೀ ಕೊಡುವ ಚಳುವಳಿಯನ್ನು ಸಹ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಡಳಿತ ಅದಕ್ಕೂ ಎಚ್ಚೆತ್ತುಕೊಳ್ಳದಿದ್ದಾಗ ಮಾ.20ರಂದು ಪತ್ರಿಕಾ ಭವನದ ಆವರಣದಲ್ಲಿ ಸಾವಿರಾರು ಪತ್ರಕರ್ತರೊಂದಿಗೆ ಅಹೋರಾತ್ರಿ ಪ್ರತಿಭಟನೆಗೆ ನಿರ್ಧಾರ ಕೈಗೊಳ್ಳಲಾಗಿತ್ತು. ಈ ಬಗ್ಗೆ ಅನುಮತಿ ಕೋರಿ ಜಿಲ್ಲಾಡಳಿತಕ್ಕೆ ಮತ್ತು ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಲಾಗಿತ್ತು.
ಇದರಿಂದ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ ಈ ವಿಚಾರವಾಗಿ ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ನಿವೃತ್ತ ನ್ಯಾಯಾಧೀಶ ರವೀಂದ್ರನಾಥ್ ಹೆಚ್.ಬಿ. ಇವರನ್ನು ನೇಮಕ ಮಾಡಿ ಆದೇಶ ಸಂಖ್ಯೆ: ಎಸ್‍ಎಂಡಿಸಿ.ಎಂಎಜಿ4/ಪ್ರೆಸ್/1/2025/584503 ದಿನಾಂಕ: 28-02-2025ರಂತೆ ಆದೇಶ ಹೊರಡಿಸಿದೆ. (ಆದೇಶದ ಪ್ರತಿಯನ್ನು ಮಾಹಿತಿಗಾಗಿ ಲಗತ್ತಿಸಿದೆ.)
ಈ ಸಂಬಂಧ ಇಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಸಭೆ ಕರೆದಿದ್ದು, ಈ ಸಭೆಯಲ್ಲಿ ಸದಸ್ಯರೆಲ್ಲರೂ ಒಕ್ಕೊರಲಿನಿಂದ ಜಿಲ್ಲಾಧಿಕಾರಿಗಳ ಆದೇಶವನ್ನು ಸ್ವಾಗತಿಸಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಜಿಲ್ಲಾಧ್ಯಕ್ಷರಾದ ಡಿ.ಜಿ. ನಾಗರಾಜ್‍ರವರು ಸಭೆಯನ್ನುದ್ದೇಶಿಸಿ ಮಾತನಾಡಿ, ಜಿಲ್ಲಾಧಿಕಾರಿಗಳ ಆದೇಶ ಸ್ವಾಗತಾರ್ಹ. ಇದು ಸಂಘಟಿತ ಹೋರಾಟಕ್ಕೆ ಸಿಕ್ಕ ಮೊದ ಜಯ. ತನಿಖೆಗೆ ನೇಮಕಗೊಂಡಿರುವ ಗೌರವಾನ್ವಿತ ನಿವೃತ್ತ ನ್ಯಾಯಾಧೀಶರು ನಿಷ್ಪಕ್ಷಪಾತ ಹಾಗೂ ಪಾರದರ್ಶಕ ತನಿಖೆ ನಡೆಸಿ ವರದಿ ನೀಡುವರೆಂಬ ವಿಶ್ವಾಸ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಪತ್ರಿಕಾಭನವಕ್ಕೆ ಆಡಳಿತಾಧಿಕಾರಿ ನೇಮಿಸುವುದು ನಿಶ್ಚಿತ ಮತ್ತು ಆ ಪತ್ರಿಕಾ ಭವನ ಎಲ್ಲ ಸಮಾನ ಮನಸ್ಕ ಪತ್ರಕರ್ತರ ಪತ್ರಿಕಾ ಭವನವಾಗಲಿದೆ. ಸಂಘ-ಸಂಸ್ಥೆಗಳು ಕಡಿಮೆ ದರದಲ್ಲಿ ಪತ್ರಿಕಾಗೋಷ್ಠಿ ನಡೆಸಲು ಅವಕಾಶವಾಗಲಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿಗಳು ತನಿಖೆಗೆ ಆದೇಶಿಸಿರುವುದರಿಂದ ಮಾರ್ಚ್ 20ರಂದು ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿ, ತನಿಖಾ ವರದಿ ಬರುವವರೆಗೆ ಮತ್ತು ಜಿಲ್ಲಾಧಿಕಾರಿಗಳು ನಿರ್ಧಾರ ಪ್ರಕಟಿಸುವರೆಗೆ ಕಾದು ನೋಡಲು ಸಭೆಯಲ್ಲಿ ತೀರ್ಮಾನಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...

Shivamogga News ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡಾ ಸ್ಫೂರ್ತಿ ರೂಢಿಸಿಕೊಳ್ಳಬೇಕು: ಶ್ರೀ ಚಂದ್ರಪ್ಪ ಎಸ್. ಗುಂಡಪಲ್ಲಿ

Shivamogga News ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡಾ...