Sunday, December 14, 2025
Sunday, December 14, 2025

Sri Adhichunchanagiri Mahasamsthana Math ಮಾರ್ಚ್ 7 ರಿಂದ 15 ವರೆಗೆ ಶ್ರೀಆದಿಚುಂಚನಗಿರಿ ಕ್ಷೇತ್ರದಲ್ಲಿ ರಥೋತ್ಸವ ಮತ್ತು ಜಾತ್ರಾ ಮಹೋತ್ಸವ

Date:

Sri Adhichunchanagiri Mahasamsthana Math ಮಾರ್ಚ್ 7 ರಿಂದ ಮಾರ್ಚ್ 15 ರ ವರೆಗೆ ಮಹಾಸಂಸ್ಥಾನ ಮಠದಲ್ಲಿ ಭಕ್ತಿ, ಜ್ಞಾನ, ಆಧ್ಯಾತ್ಮಿಕ ,ಸಾಮೂಹಿಕ ವಿವಾಹ, ಕೃಷಿ ಜಾಗೃತಿ, ಶ್ರೀ ಗಂಗಾಧರೇಶ್ವರ ಸ್ವಾಮಿ ರಥೋತ್ಸವ ಮತ್ತು ವಿಚಾರಗೋಷ್ಠಿಗಳ ಕಲರವ ನಡೆಯಲಿದೆ.

ಸುಮಾರು 2000 ವರ್ಷಗಳ ಪ್ರಾಚೀನ ಗುರು ಪರಂಪರೆಯನ್ನು ಹೊಂದಿರುವ ಶ್ರೀಕ್ಷೇತ್ರವು ಮಯೂರ ಗಳ ತಾಣವಾಗಿದ್ದು, “ಮಯೂರ ವನ “ಎಂದು ಕರೆಯುವರು.ಪುರಾಣದಲ್ಲಿ ಉಲ್ಲೇಖವಿರುವಂತೆ ಶ್ರೀ ಆದಿಚುಂಚನಗಿರಿ ಪೀಠವು ಸ್ಥಾಪನೆಯಾದುದು ತ್ರೇತ್ರಾಯುಗದಲ್ಲಿ ಪರಮೇಶ್ವರನೇ ಈ ಪೀಠದ ಸ್ಥಾಪಕನು. ಇಲ್ಲಿ ಸಾಕ್ಷಾತ್ ಪರಶಿವನೇ ಶ್ರೀ ಗಂಗಾಧರೇಶ್ವರನಾಗಿ ನೆಲೆ ನಿಂತಿದ್ದಾನೆ. ನಾಥ ಸಂಪ್ರದಾಯದ ದ್ವಾದಶ ಪೀಟಗಳಲ್ಲಿ ಆದಿ ಪೀಠವೇ ಶ್ರೀ ಆದಿಚುಂಚನಗಿರಿ ಪೀಠ. ಶ್ರೀ ಮಠದ ಗುರುಪರಂಪರೆಯು ದೀರ್ಘವಾದುದು,ಇದುವರೆಗೂ 72 ಧರ್ಮಗುರುಗಳು ಮಠಾಧಿಪತಿಗಳಾಗಿದ್ದಾರೆ.

71ನೇ ಪೀಠಾಧ್ಯಕ್ಷರಾದ ಪದ್ಮಭೂಷಣ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಸ್ವಾಮಿಗಳಿಂದಾಗಿ ಸಾಮಾಜಿಕ,ಶೈಕ್ಷಣಿಕ, ಧಾರ್ಮಿಕ, ಸಾಂಸ್ಕೃತಿಕ ಅಲ್ಲದೆ ಮಕ್ಕಳ ವಸತಿ ಶಾಲೆ, ಅನಾಥಾಶ್ರಮ, ವೃದ್ಧಾಶ್ರಮ, ಮಹಿಳಾ ಸೇವಾಶ್ರಮಗಳನ್ನು ಸ್ಥಾಪಿಸಿ, ನಿರ್ಗತಿಕರ ಬಗ್ಗೆ ವಿಶೇಷ ಮಮತೆಯನ್ನು ತೋರಿದ್ದಾರೆ.

ಜಾತ್ರೆ ಎಂದೊಡನೆ ಕಣ್ಮುಂದೆ ಬರುವುದು ಹೋಮ-ಹವನ,ಮೆರವಣಿಗೆ ರಥೋತ್ಸವ ಅನ್ನದಾಸೋಹ ಇತ್ಯಾದಿ ಧಾರ್ಮಿಕ ವಿಧಿ – ವಿಧಾನಗಳೊಂದಿಗೆ ಆದಿಚುಂನಗಿರಿ ಜಾತ್ರೆಯೂ ಮೇಲಿನ ಅಂಶಗಳೊಂದಿಗೆ ವೈಚಾರಿಕತೆ,ಕೃಷಿ ಜಾಗೃತಿ ಮಹತ್ವವನ್ನು ಸಾರುತ್ತಾ ಸಮಾಜ ಮುಖಿಯಾಗಿದೆ. ಇಲ್ಲಿ ಧಾರ್ಮಿಕ ವಿಧಿ ವಿಧಾನಗಳ ಜೊತೆಗೆ ನಾಡಿನ ಜನರಿಗೆ ವೈಚಾರಿಕತೆ ಮೂಡಿಸುವ ಗೋಷ್ಠಿ, ಕೃಷಿ ಮೇಳ, ಸರಳವಿವಾಹ,ಪೌರಾಣಿಕ ನಾಟಕಗಳ ಮಹತ್ವ, ಜ್ಞಾನ-ವಿಜ್ಞಾನ ನಡುವಿನ ಸಂಬಂಧವನ್ನು ತಿಳಿಸುತ್ತದೆ.

ಜಾತ್ರೆಗೆ ಹೊಸ ಭಾಷ್ಯವನ್ನು ಬರೆಯುವ ಮೂಲಕ ಜನಪರ ಜಾತ್ರೆಯನ್ನಾಗಿಸುವ ನಿಟ್ಟಿನಲ್ಲಿ ಪೀಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅವರು ದಿಟ್ಟ ಹೆಜ್ಜೆ ಇಟ್ಟಿದ್ದಾರೆ.ನಾಡಿನ ಪ್ರಮುಖ ಜಾತ್ರೆಗಳಲ್ಲಿ ಒಂದಾಗಿರುವ ಆದಿಚುಂಚನಗಿರಿ ಜಾತ್ರೆಗೆ ವೈಶಿಷ್ಟ ತಂದು ಕೊಡುವರು. ರೈತ ಸಮುದಾಯ,ಇದು ರೈತರ ಜಾತ್ರೆಯೆಂದು ಕರೆಯಿಸಿಕೊಳ್ಳುತ್ತದೆ.

ಆದ್ದರಿಂದಲೇ ಆದಿಚುಂಚನಗಿರಿ ಕ್ಷೇತ್ರದಲ್ಲಿ ಪ್ರತಿ ವರ್ಷವೂ ಜಾತ್ರಾಮಹೋತ್ಸವವನ್ನು ರೈತರ ಹೆಸರಿನಲ್ಲಿ ಭೈರವೈಕ್ಯಬಾಲಗಂಗಾಧರನಾಥ ಸ್ವಾಮೀಜಿ ನಡೆಸುತ್ತಿದ್ದರು. ಅದನ್ನ ಈಗಿನ ಸ್ವಾಮೀಜಿಯವರು ಮುಂದುವರಿಸುವ ಮೂಲಕ ಜಾತ್ರೆಯ ಸೊಬಗನ್ನು ಹೆಚ್ಚಿಸಿದ್ದಾರೆ.

ಇಂದಿಗೂ ಪೂಜ್ಯ ಸ್ವಾಮಿಗಳವರ ಅನುಪಸ್ಥಿತಿಯಲ್ಲಿ ಆ ಎಲ್ಲಾ ಸೇವಾ ಕಾರ್ಯಗಳು ಮುಂದುವರಿಯುತ್ತಿವೆ.ಸ್ವಾಮೀಜಿಯವರು ಇಲ್ಲದಿರಬಹುದು, ಆದರೆ ಶ್ರೀಕ್ಷೇತ್ರದಲ್ಲಿ ಹಮ್ಮಿಕೊಳ್ಳುವ ಪ್ರತಿಯೊಂದು ಕಾರ್ಯದ ಯಶಸ್ಸಿನ ಹಿಂದೆ ಸ್ವಾಮಿಗಳವರ ಉಪಸ್ಥಿತಿಯನ್ನು ಇಂದಿಗೂ ಕಾಣಬಹುದು.

“ಶ್ರೀ ಕ್ಷೇತ್ರಆದಿಚುಂಚನಗಿರಿಯಲ್ಲಿ ಮಾರ್ಚ್ 7ರಿಂದ ಮಾರ್ಚ್ 15ರ ವರೆಗೆ ಜಾತ್ರಾ ಮಹೋತ್ಸವ ಕಾರ್ಯಕ್ರಮಗಳ ವಿವರ”
ಪರಮಪೂಜ್ಯ ಜಗದ್ಗುರು ಶ್ರೀ ಶ್ರೀಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜೀಗಳವರ ದಿವ್ಯ ಸಾನಿಧ್ಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಶ್ರೀಕ್ಷೇತ್ರ ಆದಿಚುಂನಗಿರಿ ಮಹಾಸಂಸ್ಥಾನದಲ್ಲಿ ಮಾರ್ಚ್,7 ರಿಂದ ಮಾರ್ಚ್ 15ರ ವರೆಗೆ 9 ದಿನಗಳ ಕಾಲ ಜಾತ್ರಾ ಮಹೋತ್ಸವ ಪ್ರಾರಂಭವಾಗಲಿದ್ದು,ಈ ಕಾರ್ಯಕ್ರಮದಲ್ಲಿ ವಿವಿಧ ಪೂಜಾ ಕೈಂಕರ್ಯ ಸೇರಿದಂತೆ ಹಲವು ಧಾರ್ಮಿಕ ಮತ್ತು ಅಧ್ಯಾತ್ಮಿಕ ಕಾರ್ಯಕ್ರಮಗಳು ಜರುಗಲಿವೆ.
ಜಾತ್ರಾ ಮಹೋತ್ಸವ ಸುಸೂತ್ರವಾಗಿ ನಡೆಯಲಿ ಎಂಬ ಉದ್ದೇಶದಿಂದ ಮಾರ್ಚ್ 7ರ ಬೆಳಿಗ್ಗೆ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರಿಂದ ನಾಂದಿ ಪೂಜೆ ಹಾಗೂ ಧರ್ಮ ಧ್ವಜಾರೋಹಣ ಮಾಡುವ ಮೂಲಕ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುವುದು. ಮಾರ್ಚ್ 8ರ ಬೆಳಿಗ್ಗೆ 10 ಗಂಟೆಗೆ ದೇಶಿ ಕ್ರೀಡೆಗಳು, ಲಗೋರಿ, ರಂಗೋಲಿ ಸ್ಪರ್ಧೆ ಹಾಗೂ ಮ್ಯಾರಥಾನ್ ಪಂದ್ಯಾವಳಿ ಉದ್ಘಾಟನೆ, ರಾತ್ರಿ 6 ಗಂಟೆಗೆ ಸರ್ವಾಲಂಕೃತ ಶ್ರೀ ಚಂದ್ರಮೌಳೇಶ್ವರ ಸ್ವಾಮಿ ಉತ್ಸವ, ಮಾರ್ಚ್ 9 ರಂದು ಬೆಳಿಗ್ಗೆ,10 ಗಂಟೆಗೆ ಕೃಷಿ ಉಪನ್ಯಾಸ ಮಾಲಿಕೆ, ರಾತ್ರಿ 7:00 ಗಂಟೆಗೆ ಮಲ್ಲೇಶ್ವರ ಸ್ವಾಮಿ ಉತ್ಸವ ನಡೆಯಲಿದೆ. ಮಾರ್ಚ್ 10 ರ ಬೆಳಿಗ್ಗೆ 9.30 ಗಂಟೆಗೆ ಸರಳ ಸಾಮೂಹಿಕ ವಿವಾಹ,ಹಾಗೂ ಹಿರಿಯ ದಂಪತಿಗೆ ಸನ್ಮಾನ ಸಮಾರಂಭ,ಸಂಜೆ 7 ಗಂಟೆಗೆ ಶ್ರೀ ಸಿದ್ದೇಶ್ವರ ಸ್ವಾಮಿ ಉತ್ಸವ ನಡೆಯಲಿದೆ. ಮಾರ್ಚ್ 11 ರ ಬೆಳಿಗ್ಗೆ 7:30 ಕ್ಕೆ ಶ್ರೀ ಕಾಲಭೈರವೇಶ್ವರ ಸ್ವಾಮಿಗೆ ಸುವರ್ಣ ಕವಚ ಅಲಂಕಾರ ಹಾಗೂ ಶ್ರೀ ಗಂಗಾದೇಶ್ವರಸ್ವಾಮಿಗೆ ರಜತ ನಾಗಾಭರಣ ಅಲಂಕಾರ ಪೂಜೆ, ಸಂಜೆ 7 ಗಂಟೆಗೆ ಕಾಲಭೈರವೇಶ್ವರ ಸ್ವಾಮಿಯ ಹೂವಿನ ಪಲ್ಲಕ್ಕಿ ಉತ್ಸವ ಹಾಗೂ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಮುತ್ತಿನ ಪಾಲಕಿ ಉತ್ಸವ ನಡೆಯಲಿದೆ.
ಮಾರ್ಚ್ 13 ರ ಸಂಜೆ 06 ಗಂಟೆಗೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರಿಂದ ಜ್ವಾಲಾ ಪೀಠಾರೋಹಣ, ಸಿದ್ದ ಸಿಂಹಾಸನ ಪೂಜೆ ನಡೆಯುತ್ತದೆ. ರಾತ್ರಿ 8:00 ಗಂಟೆಗೆ ಚಂದ್ರಮಂಡಲೋತ್ಸವ ಪೂಜೆ ನಡೆಯಲಿದೆ .
ಮಾರ್ಚ್ 14ರ ಸಂಜೆ :6:30 ಗಂಟೆಗೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ, ಸರ್ವಧರ್ಮ ಸಮ್ಮೇಳನ ನಡೆಯಲಿದೆ. ರಾತ್ರಿ 08 ಕ್ಕೆ ಕಾಲಭೈರವೇಶ್ವರ ಸ್ವಾಮಿಯ ತಿರುಗಣಿ ಉತ್ಸವ,ಪುಷ್ಕರಣಿಯಲ್ಲಿ ತೆಪ್ಪೋತ್ಸವ ನಂತರ ನಾಟಕ ಪ್ರದರ್ಶನ ಕಾರ್ಯಕ್ರಮಗಳು ನಡೆಯಲಿವೆ.
ಮಾ 14 ರ ಮುಂಜಾನೆ ಬ್ರಾಹ್ಮಿ ಮುಹೂರ್ತದಲ್ಲಿ ಶ್ರೀ ಗಂಗಾಧರೇಶ್ವರ ಸ್ವಾಮಿಯ ಮಹಾರಥೋತ್ಸವ ಹಾಗೂ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮಿಯವರ ಅಡ್ಡಪಾಲಕಿ ಉತ್ಸವ ಬಹಳ ವಿಜ್ರಂಭಣೆಯಿಂದ ಜರುಗಲಿದೆ. ನಾ…

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...