Tuesday, January 20, 2026
Tuesday, January 20, 2026

JDS ಓಟ್ ಬ್ಯಾಂಕ್ ಹೆಸರಿನಲ್ಲಿ ಅಲ್ಪಸಂಖ್ಯಾತ ಸಮುದಾಯದ ವಿಭಜನೆ ಯತ್ನ- ಜೆಡಿಎಸ್ ನ ರಾಕೇಶ್ ಡಿಸೋಜಾ

Date:

JDS ಅಲ್ಪಸಂಖ್ಯಾತ ಸಮುದಾಯವನ್ನು ಓಟ್‌ಬ್ಯಾಂಕ್ ಹೆಸರಿನಲ್ಲಿ ವಿಭಜನೆ ಮಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರದ ಧೋರಣೆ ಜೆಡಿಎಸ್ ರಾಜ್ಯ ಕಾರ್ಯದರ್ಶಿ ರಾಕೇಶ್ ಡಿಸೋಜ ಖಂಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಕಾಮಗಾರಿಯಲ್ಲಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಲು ಹೊರಟಿರುವ ತುಷ್ಟೀಕರಣದ ಧೋರಣೆಯ ನಿರ್ಧಾರ ಕೈಬಿಡಬೇಕೆಂದು ಆಗ್ರಹಿಸಿದ್ದಾರಲ್ಲದೇ, ಅಲ್ಪಸಂಖ್ಯಾತರಲ್ಲಿ ತಾರತಮ್ಯ ಧೋರಣ ಸಲ್ಲದು ಎಂದಿದ್ದಾರೆ.

ಕಾಂಗ್ರೆಸ್ ಸರ್ಕಾರಕ್ಕೆ ಅಲ್ಪಸಂಖ್ಯಾತರು ಎಂದರೆ ಮುಸ್ಲಿಮರು ಮಾತ್ರ ಕಾಣುತ್ತಾರೆ ಹೊರತು ನೈಜ ಅಲ್ಲಸಂಖ್ಯಾತರಾದ ಕ್ರೈಸ್ತ, ಬೌದ್ಧ, ಜೈನ ಸೇರಿದಂತೆ ಇನ್ನಿತರ ಸಮುದಾಯಗಳು ಕಾಣುವುದೇ ಇಲ್ಲ, ಓಟ್ ಬ್ಯಾಂಕ್ ಆಧಾರದಲ್ಲಿ ಬಹುಸಂಖ್ಯೆ ಹೊಂದಿರುವ ಮುಸ್ಲಿಂ ಸಮುದಾಯಕ್ಕೆ ಮಾತ್ರ ಆದ್ಯತೆ ನೀಡುವುದು ಖಂಡನೀಯ ಎಂದಿದ್ದಾರೆ.

JDS ದಶಕಗಳ ಹಿಂದೆ ಅಲ್ಪಸಂಖ್ಯಾತರಾಗಿದ್ದ ಮುಸ್ಲಿಮರು ಇಂದು ಸಂಘಟಿತವಾಗಿ ಮುಂಚೂಣಿಯಲ್ಲಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಓಟ್ ಬ್ಯಾಂಕ್ ಆಗಿ ಗುರುತಿಸಿಕೊಂಡಿರುವ ಕಾರಣಕ್ಕೆ ಮುಸ್ಲಿಮರಿಗೆ ಮಾತ್ರ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಧರ್ಮದ ಹೆಸರಿನಲ್ಲಿ ಉದ್ಯೋಗ ಹಾಗೂ ಶೈಕ್ಷಣಿಕ ಮೀಸಲಾತಿ ನೀಡಲಾಗಿದೆ, ಇದೀಗ ಸರ್ಕಾರಿ ಕಾಮಗಾರಿಗಳಲ್ಲೂ ಶೇ. ೪ ರಷ್ಟು ಮೀಸಲಾತಿ ಕಲ್ಪಿಸಲು ಮುಂದಾಗಿ ನಿಯಮ ರೂಪಿಸಲು ಹೊರಟಿರುವುದು ಮುಸ್ಲಿಂ ಓಲೈಕೆಯ ಪರಮಾವಧಿಯಾಗಿದೆ ಎಂದು ಕಿಡಿಕಾರಿದ್ದಾರೆ.

ಮುಸ್ಲಿಮರೂ ಸೇರಿದಂತೆ ನಾಡಿನ ಎಲ್ಲ ಅಲ್ಪಸಂಖ್ಯಾತ ಸಮುದಾಯಗಳ ಕುರಿತು ಯಾವುದೇ ಕಲ್ಯಾಣ ಕಾರ್ಯಕ್ರಮಗಳನ್ನು ಕೈಗೊಂಡರೆ ನಾವು ಅದನ್ನು ಆಕ್ಷೇಪಿಸುವುದಿಲ್ಲ. ಆದರೆ ಕೇವಲ ಮುಸ್ಲಿಮರನ್ನು ಮಾತ್ರ ಪ್ರತ್ಯೇಕಿಸಿ ಓಲೈಸುವುದನ್ನು ಬಲವಾಗಿ ಖಂಡಿಸುವುದಾಗಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police 33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಪತ್ತೆ‌ಮಾಡಿದ ಶಿವಮೊಗ್ಗ ಪೊಲೀಸ್ ಇಲಾಖೆ.

Shivamogga Police ಸಾಗರ ಪೇಟೆ ಪೊಲೀಸ್ ಠಾಣಾ ಗುನ್ನೆ ಸಂಖ್ಯೆ 29/1985...

MESCOM ಜನವರಿ 21. ಮಾಚೇನಹಳ್ಳಿ ಸುತ್ತಮುತ್ತ ವಿದ್ಯುತ್ ನಿಲುಗಡೆ. ಮೆಸ್ಕಾಂ ಪ್ರಕಟಣೆ

MESCOM ಶಿವಮೊಗ್ಗ ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ...

ಅಲ್ಲಿ “ಬಿಗ್ ಬಾಸ್” .”ಗಿಲ್ಲಿ “ಫುಲ್ ಪಾಸ್

"ಬಿಗ್ ಬಾಸ್ " ನೋಡುತ್ತಿರುವವರು ಈವರೆಗೂ ಒಂದು ರೀತಿ ಇದೇನು ಮಾಧ್ಯಮ...

Klive Special Article ಭೂಗೋಲದ ಸುತ್ತ. ಆತಂಕಗಳ ಹುತ್ತ… ...

Klive Special Article ಯುದ್ಧ ಮತ್ತು ಶಾಂತಿ: ಇಂದಿನ ಅಗತ್ಯತೆ೨೦೨೬ರ ಆರಂಭವೇ...