Tuesday, March 11, 2025
Tuesday, March 11, 2025

Red Cross Sanjeevini Blood Bank ರೆಡ್ ಕ್ರಾಸ್ ವತಿಯಿಂದ ಜೋಗ್ ಫಾಲ್ಸ್ ನಲ್ಲಿ ರಕ್ತದಾನ ಶಿಬಿರ

Date:

Red Cross Sanjeevini Blood Bank 54ನೇ ರಾಷ್ಟೀಯ ಸುರಕ್ಷತಾ ಸಪ್ತಾಹ ಕಾರ್ಯಕ್ರಮದಡಿಯಲ್ಲಿ ಶಂಕರನಾರಾಯಣ ನಿರ್ಮಾಣ ಸಂಸ್ಥೆಯು ರೆಡ್ ಕ್ರಾಸ್ ರಕ್ತನಿಧಿ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ರಕ್ತದಾನ ಶಿಬಿರವನ್ನು ಜೋಗ ಫಾಲ್ಸ್‍ನಲ್ಲಿ ಆಯೋಜಿಸಲಾಯಿತು.

ರಕ್ತದಾನದ ಬಗ್ಗೆ ಅಲ್ಲಿ ಕೆಲಸ ಮಾಡುತ್ತಿರುವ ಹೊರರಾಜ್ಯದಿಂದ ಬಂದಿರುವ ಕಾರ್ಮಿಕರಿಗೆ ರಕ್ತದಾನದ ಮಹತ್ವವನ್ನು ತಿಳಿಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದ್ದು, ರೆಡ್ ಕ್ರಾಸ್ ರಕ್ತನಿಧಿಯ ಪ್ರತಿನಿಧಿಗಳಾದ ಡಿ.ಜೆ.ದಿನಕರ್ ರವರು ರಕ್ತದಾನದ ಮಹತ್ವದ ಬಗ್ಗೆ ಅಲ್ಲಿ ನೆರೆದಿದ್ದ ಎಲ್ಲರಿಗೂ ಸವಿಸ್ತಾರವಾಗಿ ತಿಳಿಸಿದರು.

ಎಸ್‍ಎನ್‍ಸಿ ಸಂಸ್ಥೆಯ ಪ್ರಾಜೆಕ್ಟ್ ಮ್ಯಾನೇಜರ್ ಮಾತನಾಡಿ, ರಕ್ತದಾನದ ಪ್ರಯೋಜನಗಳನ್ನು ತಮ್ಮ ಸಿಬ್ಬಂದಿಗಳಿಗೆ ಹಾಗೂ ಕಾರ್ಮಿಕರಿಗೆ ತಿಳಿಸಿ, ತಾವು ರಕ್ತದಾನ ಮಾಡುವುದರ ಮೂಲಕ ಅಲ್ಲಿ ನೆರೆದಿದ್ದ ಎಲ್ಲರಿಗೂ ರಕ್ತದಾನ ಮಾಡಲು ಪ್ರೋತ್ಸಾಹಿಸಿದರು.

ಎಸ್‍ಎನ್‍ಸಿ ಸಂಸ್ಥೆಯು ಆಯೋಜಿಸಿದ್ದ ಈ ರಕ್ತದಾನ ಶಿಬಿರದಲ್ಲಿ ಸುಮಾರು 43 ಜನರು ರಕ್ತದಾನ ಮಾಡಿದರು. ಈ ಕಾರ್ಯಕ್ರಮದಲ್ಲಿ ಶಂಕರನಾರಾಯಣ ಕನ್ಸ್‍ಟ್ರಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ಪ್ರಾಜೆಕ್ಟ್ ಮ್ಯಾನೇಜರ್ ಸಂದೀಪ್.ಟಿ.ಆರ್, ಅಡ್ಮಿನ್ ಮ್ಯಾನೇಜರ್ ಶಶಿಧರ್ ಶೆಟ್ಟಿ, ಸುರಕ್ಷತಾ ಸಿಬ್ಬಂದಿ ತಬ್ರೇಜ್ ಹಾಗೂ ರೆಡ್ ಕ್ರಾಸ್ ಪ್ರತಿನಿಧಿಗಳಾದ ಡಿ.ಜೆ.ದಿನಕರ್, ಮಂಜುನಾಥ್ ಅಪ್ಪಾಜಿ, ಡಾ. ದಿನಕರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಜೆಸಿಐ ನಲ್ಲಿ ತೊಡಗಿಸಿಕೊಂಡರೆ ಪರಿಪೂರ್ಣ ವ್ಯಕ್ತಿತ್ವ ಬೆಳವಣಿಗೆ- ಸೂರ್ಯ ನಾರಾಯಣ ವರ್ಮ

JCI Shivamogga ಸಮಾಜಮುಖಿ ಚಟುವಟಿಕೆಗಳ ಜತೆಯಲ್ಲಿ ಸದೃಢ ಸಮಾಜ ನಿರ್ಮಾಣ ಮಾಡುವಲ್ಲಿ...

Karnataka Lokayukta ಮಾರ್ಚ್ 18 ರಿಂದ 21 ವರೆಗೆ ರಾಜ್ಯ ಉಪಲೋಕಾಯುಕ್ತ ನ್ಯಾ.ಕೆ.ಫಣೀಂದ್ರ ಅವರ ಜಿಲ್ಲಾ ಕಾರ್ಯಕ್ರಮಗಳ ಮಾಹಿತಿ

Karnataka Lokayukta ಕರ್ನಾಟಕ ಉಪಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಅವರು ಮಾ. 18...

CM Siddharamaih ಕುರ್ಚಿ ಉಳಿಸಿಕೊಳ್ಳುವ ಯತ್ನದಲ್ಲಿ ಸಿದ್ಧರಾಮಯ್ಯನವರ ಬಜೆಟ್…!

CM Siddharamaih ಕರ್ನಾಟಕದ ಅಭಿವೃದ್ಧಿಗೆ ಪೂರಕವೇ ಅಥವಾ ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ...

Guarantee Scheme ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ.‌ ಊಹಾಪೋಹಗಳಿಗೆ ಬೆಲೆಕೊಡಬೇಡಿ- ಸಿ.ಎಸ್.ಚಂದ್ರಭೂಪಾಲ್

Guarantee Scheme ಕರ್ನಾಟಕ ಸರ್ಕಾರದ ಮಹತ್ವದ ಐದು ಗ್ಯಾರಂಟಿ ಯೋಜನೆಗಳಾದ ಶಕ್ತಿ,...