Monday, February 2, 2026
Monday, February 2, 2026

Canara Bank Rural Self-Employment Training Institute ಹೊಳಲೂರಿನಲ್ಲಿ ಕೆನರಾ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಕೇಂದ್ರದಲ್ಲಿ ಮಹಿಳಾ ದಿನಾಚರಣೆ

Date:

Canara Bank Rural Self-Employment Training Institute ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ ಹೊಳಲೂರಿನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಶ್ರೀಯುತ ಶರತ್ ಗೌಡ ಡಿಡಿಎಂ ನಬಾರ್ಡ್ ಇವರು ಭಾಗವಹಿಸಿ ಶುಭ ಹಾರೈಸುವುದರ ಜೊತೆಗೆ ನಬಾರ್ಡಿನ ಯೋಜನೆಗಳ ಬಗ್ಗೆ ತಿಳಿಸಿದರು ಹಾಗೂ ಕಾರ್ಯಕ್ರಮದಲ್ಲಿ ಡಾ. ಶ್ರೀಧರ್ ಡಿ ಎಚ್ ಓ ಆಫೀಸ್ ಶಿವಮೊಗ್ಗ ಇವರು ಸಹ ಮಾನಸಿಕ ಆರೋಗ್ಯದ ಕುರಿತು ಮಾಹಿತಿಯನ್ನು ನೀಡಿದರು.

Canara Bank Rural Self-Employment Training Institute ಹಾಗೂ ಡಾಕ್ಟರ್ ಚಿನ್ಮಯಿನವರು ಮಹಿಳೆಯರಿಗೆ ಆರೋಗ್ಯದ ಕುರಿತು ಮತ್ತು ತಮ್ಮ ಸ್ವಚ್ಛತೆಯ ಕುರಿತು ಮಾಹಿತಿಯನ್ನು ನೀಡುವುದರ ಜೊತೆಗೆ ಆರೋಗ್ಯ ತಪಾಸಣಾ ಶಿಬಿರವನ್ನು ಸಹ ಹಮ್ಮಿಕೊಳ್ಳಲಾಯಿತು ಹಾಗೂ ಮಹಿಳಾ ದಿನಾಚರಣೆಯ ಅಂಗವಾಗಿ ನಮ್ಮ ತರಬೇತಿ ಸಂಸ್ಥೆಯಲ್ಲಿ ತರಬೇತಿಯನ್ನು ಪಡೆದು ಸ್ವಉದ್ಯೋಗವನ್ನು ಹಾಗೂ ತಮ್ಮ ವೃತ್ತಿ ಜೀವನವನ್ನು ಯಶಸ್ವಿಯಾಗಿ ನಿರ್ವಹಿಸುತ್ತಿರುವ ಅಂತಹ ಶ್ರೀಮತಿ ಅಕ್ಷತಾ – ಬ್ಯೂಟಿ ಪಾರ್ಲರ ಹಾಗೂ ಕುಂಚೇನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಕಾಯಕ ಮಿತ್ರ ಕೆಲಸವನ್ನು ಮಾಡುತ್ತಿದ್ದಾರೆ, ಶ್ರೀಮತಿ ಲತಾ ನಿರಂಜನ್ ಕಾಚಿ ಕೊಪ್ಪ ದಲ್ಲಿ ಹೈನುಗಾರಿಕೆ ಉದ್ಯಮ, ಶ್ರೀಮತಿ ಲತಾ ಮುಖ್ಯ ಪುಸ್ತಕ ಬರಹಗಾರರು, ಭಾಗ್ಯ ಪಶು ಸಖಿ, ನೂರ್ ಜಾನ್ ಎಂಬ್ರಾಯಿಡರಿ ವೃತ್ತಿ, ಶೃತಿ ಕೋಳಿ ಸಾಕಾಣಿಕೆ ವೃತ್ತಿ ನೇತ್ರಾವತಿ ಎಂಬ್ರಾಯ್ಡರಿ ವೃತ್ತಿ ರೂಪ ಅನವೇರಿ ಬ್ಯೂಟಿ ಪಾರ್ಲರ್ ವೃತ್ತಿ , ಈ ಮೇಲ್ ಕಂಡ ಯಶಸ್ವಿ ಶಿಬಿರಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು . ತರಬೇತಿ ಸಂಸ್ಥೆಯ ನಿರ್ದೇಶಕರಾದ ಶ್ರೀಯುತ ಕಾಂತೇಶ್ ಅಂಬಿಗರ್ ರವರು ಎಲ್ಲಾ ಶಿಬಿರಾರ್ಥಿಗಳನ್ನ ಉದ್ದೇಶಿಸಿ ಸಂಸ್ಥೆಯಲ್ಲಿ ನಡೆಯುತ್ತಿರುವ ಮತ್ತು ಮುಂಬರುವ ತರಬೇತಿಗಳ ಬಗ್ಗೆ ಹಾಗೂ ಮಹಿಳೆಯರು ಹೇಗೆ ಉನ್ನತ ಮಟ್ಟಕ್ಕೆ ತಮ್ಮ ಜೀವನವನ್ನು ಕೊಂಡೊಯ್ಯಬೇಕು ಎಂಬುದರ ಬಗ್ಗೆ ಸವಿಸ್ತಾರವಾಗಿ ಮಾಹಿತಿಯನ್ನು ನೀಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿರುತ್ತಾರೆ & ಕಾರ್ಯಕ್ರಮವನ್ನು ಶ್ರೀಮತಿ ದೀಪ ಉಪನ್ಯಾಸಕರು ನೆರವೇರಿಸಿ ಕೊಟ್ಟಿರುತ್ತಾರೆ .

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...