Monday, March 10, 2025
Monday, March 10, 2025

Canara Bank Rural Self-Employment Training Institute ಹೊಳಲೂರಿನಲ್ಲಿ ಕೆನರಾ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಕೇಂದ್ರದಲ್ಲಿ ಮಹಿಳಾ ದಿನಾಚರಣೆ

Date:

Canara Bank Rural Self-Employment Training Institute ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ ಹೊಳಲೂರಿನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಶ್ರೀಯುತ ಶರತ್ ಗೌಡ ಡಿಡಿಎಂ ನಬಾರ್ಡ್ ಇವರು ಭಾಗವಹಿಸಿ ಶುಭ ಹಾರೈಸುವುದರ ಜೊತೆಗೆ ನಬಾರ್ಡಿನ ಯೋಜನೆಗಳ ಬಗ್ಗೆ ತಿಳಿಸಿದರು ಹಾಗೂ ಕಾರ್ಯಕ್ರಮದಲ್ಲಿ ಡಾ. ಶ್ರೀಧರ್ ಡಿ ಎಚ್ ಓ ಆಫೀಸ್ ಶಿವಮೊಗ್ಗ ಇವರು ಸಹ ಮಾನಸಿಕ ಆರೋಗ್ಯದ ಕುರಿತು ಮಾಹಿತಿಯನ್ನು ನೀಡಿದರು.

Canara Bank Rural Self-Employment Training Institute ಹಾಗೂ ಡಾಕ್ಟರ್ ಚಿನ್ಮಯಿನವರು ಮಹಿಳೆಯರಿಗೆ ಆರೋಗ್ಯದ ಕುರಿತು ಮತ್ತು ತಮ್ಮ ಸ್ವಚ್ಛತೆಯ ಕುರಿತು ಮಾಹಿತಿಯನ್ನು ನೀಡುವುದರ ಜೊತೆಗೆ ಆರೋಗ್ಯ ತಪಾಸಣಾ ಶಿಬಿರವನ್ನು ಸಹ ಹಮ್ಮಿಕೊಳ್ಳಲಾಯಿತು ಹಾಗೂ ಮಹಿಳಾ ದಿನಾಚರಣೆಯ ಅಂಗವಾಗಿ ನಮ್ಮ ತರಬೇತಿ ಸಂಸ್ಥೆಯಲ್ಲಿ ತರಬೇತಿಯನ್ನು ಪಡೆದು ಸ್ವಉದ್ಯೋಗವನ್ನು ಹಾಗೂ ತಮ್ಮ ವೃತ್ತಿ ಜೀವನವನ್ನು ಯಶಸ್ವಿಯಾಗಿ ನಿರ್ವಹಿಸುತ್ತಿರುವ ಅಂತಹ ಶ್ರೀಮತಿ ಅಕ್ಷತಾ – ಬ್ಯೂಟಿ ಪಾರ್ಲರ ಹಾಗೂ ಕುಂಚೇನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಕಾಯಕ ಮಿತ್ರ ಕೆಲಸವನ್ನು ಮಾಡುತ್ತಿದ್ದಾರೆ, ಶ್ರೀಮತಿ ಲತಾ ನಿರಂಜನ್ ಕಾಚಿ ಕೊಪ್ಪ ದಲ್ಲಿ ಹೈನುಗಾರಿಕೆ ಉದ್ಯಮ, ಶ್ರೀಮತಿ ಲತಾ ಮುಖ್ಯ ಪುಸ್ತಕ ಬರಹಗಾರರು, ಭಾಗ್ಯ ಪಶು ಸಖಿ, ನೂರ್ ಜಾನ್ ಎಂಬ್ರಾಯಿಡರಿ ವೃತ್ತಿ, ಶೃತಿ ಕೋಳಿ ಸಾಕಾಣಿಕೆ ವೃತ್ತಿ ನೇತ್ರಾವತಿ ಎಂಬ್ರಾಯ್ಡರಿ ವೃತ್ತಿ ರೂಪ ಅನವೇರಿ ಬ್ಯೂಟಿ ಪಾರ್ಲರ್ ವೃತ್ತಿ , ಈ ಮೇಲ್ ಕಂಡ ಯಶಸ್ವಿ ಶಿಬಿರಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು . ತರಬೇತಿ ಸಂಸ್ಥೆಯ ನಿರ್ದೇಶಕರಾದ ಶ್ರೀಯುತ ಕಾಂತೇಶ್ ಅಂಬಿಗರ್ ರವರು ಎಲ್ಲಾ ಶಿಬಿರಾರ್ಥಿಗಳನ್ನ ಉದ್ದೇಶಿಸಿ ಸಂಸ್ಥೆಯಲ್ಲಿ ನಡೆಯುತ್ತಿರುವ ಮತ್ತು ಮುಂಬರುವ ತರಬೇತಿಗಳ ಬಗ್ಗೆ ಹಾಗೂ ಮಹಿಳೆಯರು ಹೇಗೆ ಉನ್ನತ ಮಟ್ಟಕ್ಕೆ ತಮ್ಮ ಜೀವನವನ್ನು ಕೊಂಡೊಯ್ಯಬೇಕು ಎಂಬುದರ ಬಗ್ಗೆ ಸವಿಸ್ತಾರವಾಗಿ ಮಾಹಿತಿಯನ್ನು ನೀಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿರುತ್ತಾರೆ & ಕಾರ್ಯಕ್ರಮವನ್ನು ಶ್ರೀಮತಿ ದೀಪ ಉಪನ್ಯಾಸಕರು ನೆರವೇರಿಸಿ ಕೊಟ್ಟಿರುತ್ತಾರೆ .

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಜೆಸಿಐ ನಲ್ಲಿ ತೊಡಗಿಸಿಕೊಂಡರೆ ಪರಿಪೂರ್ಣ ವ್ಯಕ್ತಿತ್ವ ಬೆಳವಣಿಗೆ- ಸೂರ್ಯ ನಾರಾಯಣ ವರ್ಮ

JCI Shivamogga ಸಮಾಜಮುಖಿ ಚಟುವಟಿಕೆಗಳ ಜತೆಯಲ್ಲಿ ಸದೃಢ ಸಮಾಜ ನಿರ್ಮಾಣ ಮಾಡುವಲ್ಲಿ...

Karnataka Lokayukta ಮಾರ್ಚ್ 18 ರಿಂದ 21 ವರೆಗೆ ರಾಜ್ಯ ಉಪಲೋಕಾಯುಕ್ತ ನ್ಯಾ.ಕೆ.ಫಣೀಂದ್ರ ಅವರ ಜಿಲ್ಲಾ ಕಾರ್ಯಕ್ರಮಗಳ ಮಾಹಿತಿ

Karnataka Lokayukta ಕರ್ನಾಟಕ ಉಪಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಅವರು ಮಾ. 18...

CM Siddharamaih ಕುರ್ಚಿ ಉಳಿಸಿಕೊಳ್ಳುವ ಯತ್ನದಲ್ಲಿ ಸಿದ್ಧರಾಮಯ್ಯನವರ ಬಜೆಟ್…!

CM Siddharamaih ಕರ್ನಾಟಕದ ಅಭಿವೃದ್ಧಿಗೆ ಪೂರಕವೇ ಅಥವಾ ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ...

Guarantee Scheme ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ.‌ ಊಹಾಪೋಹಗಳಿಗೆ ಬೆಲೆಕೊಡಬೇಡಿ- ಸಿ.ಎಸ್.ಚಂದ್ರಭೂಪಾಲ್

Guarantee Scheme ಕರ್ನಾಟಕ ಸರ್ಕಾರದ ಮಹತ್ವದ ಐದು ಗ್ಯಾರಂಟಿ ಯೋಜನೆಗಳಾದ ಶಕ್ತಿ,...