Monday, February 2, 2026
Monday, February 2, 2026

CM Siddharamaih ಕುರ್ಚಿ ಉಳಿಸಿಕೊಳ್ಳುವ ಯತ್ನದಲ್ಲಿ ಸಿದ್ಧರಾಮಯ್ಯನವರ ಬಜೆಟ್…!

Date:

CM Siddharamaih ಕರ್ನಾಟಕದ ಅಭಿವೃದ್ಧಿಗೆ ಪೂರಕವೇ ಅಥವಾ ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ ಪೂರಕವೇ?
ನೀವೇ ಉತ್ತರಿಸಬೇಕು!!

ಕರ್ನಾಟಕದ ಇತಿಹಾಸದಲ್ಲಿಯೇ ಅತ್ಯಂತ ಸಾಲದ ಒತ್ತಡ ಇರುವ ಬಜೆಟ್ ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ್ದು, ಈ ‘ಅಸಮರ್ಥ ಬಜೆಟ್’ ಇದಾಗಿದೆ. ‘ಅಹಿಂದ’ ಹೆಸರಿನಲ್ಲಿ ಅಧಿಕಾರಕ್ಕೆ ಬಂದು, ಇವತ್ತು ಯಾವುದೇ ಹಿಂದುಳಿದವರ್ಗಗಳ ಕಲ್ಯಾಣಕ್ಕಾಗಿ ಏನನ್ನೂ ನೀಡದೆ, ಸರ್ವಜನಾಂಗದ ಶಾಂತಿಯ ತೋಟ ಎಂದು ಹೇಳಿಕೊಂಡು ಬಂದಂತಹ ಕರ್ನಾಟಕದ ಅಭಿವೃದ್ಧಿಗೊ ಅಥವಾ ಮುಸ್ಲಿಂ ಸಮುದಾಯದ ಅಭಿವೃದ್ಧಿಗೊ ಎಂಬ ಪ್ರಶ್ನೆ ಹುಟ್ಟು ಹಾಕುವಂತಿದೆ! ಎಂದು ಶಿವಮೊಗ್ಗ ಶಾಸಕರಾದ ಎಸ್ಎನ್ ಚೆನ್ನಬಸಪ್ಪ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹಿಂದೂ ಧಾರ್ಮಿಕ ಸಂಸ್ಥೆಗಳ ನಿರ್ವಹಣೆ, ಅಭಿವೃದ್ಧಿ ಹಾಗೂ ಸಂರಕ್ಷಣೆಗೆ ಪ್ರಮುಖ ಪಾತ್ರ ವಹಿಸುವ ಮುಜರಾಯಿ ಇಲಾಖೆಗೆ ಈ ಬಜೆಟ್‌ನಲ್ಲಿ ಈ ವಿಭಾಗಕ್ಕೆ ಯಾವುದೇ ವಿಶೇಷ ಅನುದಾನ ನೀಡಿಲ್ಲ. ಜೊತೆಗೆ ರಾಜ್ಯ ಸರ್ಕಾರವು ಶಿವಮೊಗ್ಗವನ್ನು ಪರೋಕ್ಷ ನಿರ್ಲಕ್ಷ್ಯ ತೋರಿಸಿರುವುದು ಬಹಳ ವಿಷಾದನೀಯ. ಈ ಬಜೆಟ್‌ನಲ್ಲಿ ನಮ್ಮ ಶಿವಮೊಗ್ಗಕ್ಕೆ ಪ್ರತ್ಯೇಕ ಯೋಜನೆಗಳನ್ನು ಘೋಷಿಸದೆ, ರಾಜ್ಯ ಸರ್ಕಾರ ಸಂಪೂರ್ಣವಾಗಿ ಕಡೆಗಣಿಸಿರುವುದು ಖಂಡನೀಯ.ರಾಜ್ಯದ ಆದಾಯ ಹೆಚ್ಚಿಸುವ ಯಾವುದೇ ಸ್ಪಷ್ಟ ಯೋಜನೆಗಳಿಲ್ಲದ ಅಭಿವೃದ್ಧಿಹೀನ ಈ ಬಜೆಟ್ ಕೇವಲ ರಾಜ್ಯದ ಜನತೆಯ ಸಾಲದ ಹೊರೆ ಹೆಚ್ಚಿಸಿದೆ ಎಂದಿದ್ದಾರೆ.

CM Siddharamaih ರಾಜ್ಯದ ಎಲ್ಲ ವರ್ಗದ ಜನತೆಗೆ ಸಮನ್ಯಾಯತೆ ನೀಡುವ ಬದಲು, ಮುಸ್ಲಿಮರಿಗೆ ಧರ್ಮಾಧಾರಿತ ಮೀಸಲಾತಿ ನೀಡುವ ಮೂಲಕ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮೂಲಭೂತ ಆದರ್ಶಗಳಿಗೆ ವಿರುದ್ಧವಾಗಿದೆ. ಇದರ ಜೊತೆ ಸಂವಿಧಾನಾತ್ಮಕ ಪ್ರಜಾಪ್ರಭುತ್ವದ ತತ್ವಗಳಿಗೆ ಪೂರಕವಲ್ಲ ಎಂಬುದನ್ನು ಎತ್ತಿ ತೋರುತ್ತಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...