Wednesday, March 25, 2026
Wednesday, March 25, 2026

CM Siddharamaih ಕುರ್ಚಿ ಉಳಿಸಿಕೊಳ್ಳುವ ಯತ್ನದಲ್ಲಿ ಸಿದ್ಧರಾಮಯ್ಯನವರ ಬಜೆಟ್…!

Date:

CM Siddharamaih ಕರ್ನಾಟಕದ ಅಭಿವೃದ್ಧಿಗೆ ಪೂರಕವೇ ಅಥವಾ ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ ಪೂರಕವೇ?
ನೀವೇ ಉತ್ತರಿಸಬೇಕು!!

ಕರ್ನಾಟಕದ ಇತಿಹಾಸದಲ್ಲಿಯೇ ಅತ್ಯಂತ ಸಾಲದ ಒತ್ತಡ ಇರುವ ಬಜೆಟ್ ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ್ದು, ಈ ‘ಅಸಮರ್ಥ ಬಜೆಟ್’ ಇದಾಗಿದೆ. ‘ಅಹಿಂದ’ ಹೆಸರಿನಲ್ಲಿ ಅಧಿಕಾರಕ್ಕೆ ಬಂದು, ಇವತ್ತು ಯಾವುದೇ ಹಿಂದುಳಿದವರ್ಗಗಳ ಕಲ್ಯಾಣಕ್ಕಾಗಿ ಏನನ್ನೂ ನೀಡದೆ, ಸರ್ವಜನಾಂಗದ ಶಾಂತಿಯ ತೋಟ ಎಂದು ಹೇಳಿಕೊಂಡು ಬಂದಂತಹ ಕರ್ನಾಟಕದ ಅಭಿವೃದ್ಧಿಗೊ ಅಥವಾ ಮುಸ್ಲಿಂ ಸಮುದಾಯದ ಅಭಿವೃದ್ಧಿಗೊ ಎಂಬ ಪ್ರಶ್ನೆ ಹುಟ್ಟು ಹಾಕುವಂತಿದೆ! ಎಂದು ಶಿವಮೊಗ್ಗ ಶಾಸಕರಾದ ಎಸ್ಎನ್ ಚೆನ್ನಬಸಪ್ಪ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹಿಂದೂ ಧಾರ್ಮಿಕ ಸಂಸ್ಥೆಗಳ ನಿರ್ವಹಣೆ, ಅಭಿವೃದ್ಧಿ ಹಾಗೂ ಸಂರಕ್ಷಣೆಗೆ ಪ್ರಮುಖ ಪಾತ್ರ ವಹಿಸುವ ಮುಜರಾಯಿ ಇಲಾಖೆಗೆ ಈ ಬಜೆಟ್‌ನಲ್ಲಿ ಈ ವಿಭಾಗಕ್ಕೆ ಯಾವುದೇ ವಿಶೇಷ ಅನುದಾನ ನೀಡಿಲ್ಲ. ಜೊತೆಗೆ ರಾಜ್ಯ ಸರ್ಕಾರವು ಶಿವಮೊಗ್ಗವನ್ನು ಪರೋಕ್ಷ ನಿರ್ಲಕ್ಷ್ಯ ತೋರಿಸಿರುವುದು ಬಹಳ ವಿಷಾದನೀಯ. ಈ ಬಜೆಟ್‌ನಲ್ಲಿ ನಮ್ಮ ಶಿವಮೊಗ್ಗಕ್ಕೆ ಪ್ರತ್ಯೇಕ ಯೋಜನೆಗಳನ್ನು ಘೋಷಿಸದೆ, ರಾಜ್ಯ ಸರ್ಕಾರ ಸಂಪೂರ್ಣವಾಗಿ ಕಡೆಗಣಿಸಿರುವುದು ಖಂಡನೀಯ.ರಾಜ್ಯದ ಆದಾಯ ಹೆಚ್ಚಿಸುವ ಯಾವುದೇ ಸ್ಪಷ್ಟ ಯೋಜನೆಗಳಿಲ್ಲದ ಅಭಿವೃದ್ಧಿಹೀನ ಈ ಬಜೆಟ್ ಕೇವಲ ರಾಜ್ಯದ ಜನತೆಯ ಸಾಲದ ಹೊರೆ ಹೆಚ್ಚಿಸಿದೆ ಎಂದಿದ್ದಾರೆ.

CM Siddharamaih ರಾಜ್ಯದ ಎಲ್ಲ ವರ್ಗದ ಜನತೆಗೆ ಸಮನ್ಯಾಯತೆ ನೀಡುವ ಬದಲು, ಮುಸ್ಲಿಮರಿಗೆ ಧರ್ಮಾಧಾರಿತ ಮೀಸಲಾತಿ ನೀಡುವ ಮೂಲಕ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮೂಲಭೂತ ಆದರ್ಶಗಳಿಗೆ ವಿರುದ್ಧವಾಗಿದೆ. ಇದರ ಜೊತೆ ಸಂವಿಧಾನಾತ್ಮಕ ಪ್ರಜಾಪ್ರಭುತ್ವದ ತತ್ವಗಳಿಗೆ ಪೂರಕವಲ್ಲ ಎಂಬುದನ್ನು ಎತ್ತಿ ತೋರುತ್ತಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...