Wednesday, June 10, 2026
Wednesday, June 10, 2026

CM Siddharamaih ಕುರ್ಚಿ ಉಳಿಸಿಕೊಳ್ಳುವ ಯತ್ನದಲ್ಲಿ ಸಿದ್ಧರಾಮಯ್ಯನವರ ಬಜೆಟ್…!

Date:

CM Siddharamaih ಕರ್ನಾಟಕದ ಅಭಿವೃದ್ಧಿಗೆ ಪೂರಕವೇ ಅಥವಾ ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ ಪೂರಕವೇ?
ನೀವೇ ಉತ್ತರಿಸಬೇಕು!!

ಕರ್ನಾಟಕದ ಇತಿಹಾಸದಲ್ಲಿಯೇ ಅತ್ಯಂತ ಸಾಲದ ಒತ್ತಡ ಇರುವ ಬಜೆಟ್ ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ್ದು, ಈ ‘ಅಸಮರ್ಥ ಬಜೆಟ್’ ಇದಾಗಿದೆ. ‘ಅಹಿಂದ’ ಹೆಸರಿನಲ್ಲಿ ಅಧಿಕಾರಕ್ಕೆ ಬಂದು, ಇವತ್ತು ಯಾವುದೇ ಹಿಂದುಳಿದವರ್ಗಗಳ ಕಲ್ಯಾಣಕ್ಕಾಗಿ ಏನನ್ನೂ ನೀಡದೆ, ಸರ್ವಜನಾಂಗದ ಶಾಂತಿಯ ತೋಟ ಎಂದು ಹೇಳಿಕೊಂಡು ಬಂದಂತಹ ಕರ್ನಾಟಕದ ಅಭಿವೃದ್ಧಿಗೊ ಅಥವಾ ಮುಸ್ಲಿಂ ಸಮುದಾಯದ ಅಭಿವೃದ್ಧಿಗೊ ಎಂಬ ಪ್ರಶ್ನೆ ಹುಟ್ಟು ಹಾಕುವಂತಿದೆ! ಎಂದು ಶಿವಮೊಗ್ಗ ಶಾಸಕರಾದ ಎಸ್ಎನ್ ಚೆನ್ನಬಸಪ್ಪ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹಿಂದೂ ಧಾರ್ಮಿಕ ಸಂಸ್ಥೆಗಳ ನಿರ್ವಹಣೆ, ಅಭಿವೃದ್ಧಿ ಹಾಗೂ ಸಂರಕ್ಷಣೆಗೆ ಪ್ರಮುಖ ಪಾತ್ರ ವಹಿಸುವ ಮುಜರಾಯಿ ಇಲಾಖೆಗೆ ಈ ಬಜೆಟ್‌ನಲ್ಲಿ ಈ ವಿಭಾಗಕ್ಕೆ ಯಾವುದೇ ವಿಶೇಷ ಅನುದಾನ ನೀಡಿಲ್ಲ. ಜೊತೆಗೆ ರಾಜ್ಯ ಸರ್ಕಾರವು ಶಿವಮೊಗ್ಗವನ್ನು ಪರೋಕ್ಷ ನಿರ್ಲಕ್ಷ್ಯ ತೋರಿಸಿರುವುದು ಬಹಳ ವಿಷಾದನೀಯ. ಈ ಬಜೆಟ್‌ನಲ್ಲಿ ನಮ್ಮ ಶಿವಮೊಗ್ಗಕ್ಕೆ ಪ್ರತ್ಯೇಕ ಯೋಜನೆಗಳನ್ನು ಘೋಷಿಸದೆ, ರಾಜ್ಯ ಸರ್ಕಾರ ಸಂಪೂರ್ಣವಾಗಿ ಕಡೆಗಣಿಸಿರುವುದು ಖಂಡನೀಯ.ರಾಜ್ಯದ ಆದಾಯ ಹೆಚ್ಚಿಸುವ ಯಾವುದೇ ಸ್ಪಷ್ಟ ಯೋಜನೆಗಳಿಲ್ಲದ ಅಭಿವೃದ್ಧಿಹೀನ ಈ ಬಜೆಟ್ ಕೇವಲ ರಾಜ್ಯದ ಜನತೆಯ ಸಾಲದ ಹೊರೆ ಹೆಚ್ಚಿಸಿದೆ ಎಂದಿದ್ದಾರೆ.

CM Siddharamaih ರಾಜ್ಯದ ಎಲ್ಲ ವರ್ಗದ ಜನತೆಗೆ ಸಮನ್ಯಾಯತೆ ನೀಡುವ ಬದಲು, ಮುಸ್ಲಿಮರಿಗೆ ಧರ್ಮಾಧಾರಿತ ಮೀಸಲಾತಿ ನೀಡುವ ಮೂಲಕ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮೂಲಭೂತ ಆದರ್ಶಗಳಿಗೆ ವಿರುದ್ಧವಾಗಿದೆ. ಇದರ ಜೊತೆ ಸಂವಿಧಾನಾತ್ಮಕ ಪ್ರಜಾಪ್ರಭುತ್ವದ ತತ್ವಗಳಿಗೆ ಪೂರಕವಲ್ಲ ಎಂಬುದನ್ನು ಎತ್ತಿ ತೋರುತ್ತಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Municipal Corporation ಅತಿವೃಷ್ಠಿ ತುರ್ತು ನಿರ್ವಹಣೆಗೆ ನಗರಪಾಲಿಕೆಯಿಂದ ಜನರ ಉಪಯೋಗಕ್ಕೆ ಸಹಾಯವಾಣಿ ಸೌಲಭ್ಯ.

Shivamogga Municipal Corporation ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾಗುವ ಸೂಕ್ಷ್ಮ...

Prahlad Joshi ಸಾಗರದ ಎಲ್.ಬಿ.ಕಾಲೇಜಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಭೇಟಿ.

Prahlad Joshi ಮಾನ್ಯ ಕೇಂದ್ರ ಸರ್ಕಾರದ ಮಂತ್ರಿ ಗಳಾದ ಪ್ರಹ್ಲಾದ್ ಜೋಷಿ,...

Chamber of Commerce Shivamogga ಕಾನೂನಿನ ಅರಿವಿನಿಂದ ತೆರಿಗೆ ಸಂಗ್ರಹದಲ್ಲಿ ಗಣನೀಯ ಹೆಚ್ಚಳವಾಗುತ್ತದೆ- ವಿ.ಕುಮಾರ್.

Chamber of Commerce Shivamogga ದಾಖಲೆ ಪ್ರಮಾಣದಲ್ಲಿ ಪ್ರತ್ಯಕ್ಷ ಮತ್ತು ಪರೋಕ್ಷ...