Wednesday, December 17, 2025
Wednesday, December 17, 2025

Karnataka Lokayukta ಮಾರ್ಚ್ 18 ರಿಂದ 21 ವರೆಗೆ ರಾಜ್ಯ ಉಪಲೋಕಾಯುಕ್ತ ನ್ಯಾ.ಕೆ.ಫಣೀಂದ್ರ ಅವರ ಜಿಲ್ಲಾ ಕಾರ್ಯಕ್ರಮಗಳ ಮಾಹಿತಿ

Date:

Karnataka Lokayukta ಕರ್ನಾಟಕ ಉಪಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಅವರು ಮಾ. 18 ರಿಂದ 21 ರವರೆಗೆ ಶಿವಮೊಗ್ಗ ನಗರಕ್ಕೆ ಭೇಟಿ ನೀಡಿ, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು ಅಲ್ಲದೇ ಇದೇ ಅವಧಿಯಲ್ಲಿ ವಿವಿಧ ಸಭೆ-ಸಮಾರಂಭ, ತರಬೇತಿ ಕಾರ್ಯಾಗಾರಗಳು, ಸಮಾಲೋಚನಾ ಸಭೆಗಳಲ್ಲಿ ಭಾಗವಹಿಸುವರು.

ಮಾ.18ರಂದು ಸಂಜೆ 7.40ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. ಮಾ.19ರಂ ದು ಬೆಳಿಗ್ಗೆ 10.00 ರಿಂದ ಸಂಜೆ 5.00 ರವರೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು. ಜಿಲ್ಲೆಯಲ್ಲಿ ಯಾವುದೇ ಸಾರ್ವಜನಿಕರಿಗೆ ಸರ್ಕಾರಿ ಅಧಿಕಾರಿ/ನೌಕರರಿಂದ ಕಾನೂನು ರೀತ್ಯಾ ಆಗಬೇಕಾದ ಕೆಲಸದಲ್ಲಿ ವಿಳಂಬನೆಯಾಗಿದ್ದಲ್ಲಿ ಅಥವಾ ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆಕೊಡುವುದು ಅಥವಾ ಇನ್ಯಾವುದೇ ತರಹದ ದುರಾಡಳಿತದಲ್ಲಿ ತೊಡಗಿದ್ದರೆ, ಅದರಿಂದ ತೊಂದರೆಗೊಳಗಾದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಅರ್ಜಿ ನಮೂನೆ 1 ಮತ್ತು 2 ರಲ್ಲಿ ಲಿಖಿತವಾಗಿ ದಾಖಲೆ, ಸಾಕ್ಷ್ಯಾಧಾರಗಳೊಂದಿಗೆ ಸಲ್ಲಿಸಬಹುದಾಗಿದೆ.

Karnataka Lokayukta ಮಾ.20 ರಂದು ಬೆಳಿಗ್ಗೆ 11.00 ರಿಂದ 11.30 ರವರೆಗೆ ನಗರದ ಜಿಲ್ಲಾ ಪಂಚಾಯಿತಿಯ ನಜೀರ್ ಸಾಬ್ ಸಭಾಂಗಣದಲ್ಲಿ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ತನಿಖೆ/ವಿಚಾರಣೆಗೆ ಬಾಕಿ ಇರುವ ಪ್ರಕರಣಗಳನ್ನು ಪರಿಹರಿಸುವ ಕುರಿತು ದೂರುದಾರರು ಮತ್ತು ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತ್ಯಾ ವಿಚಾರಣೆ ನಡೆಸುತ್ತಾರೆ. ಈ ಸಮಯದಲ್ಲಿ ದೂರುದಾರರು ಮತ್ತು ಎದುರುದಾರರ ಹಾಜರಿದ್ದು ಇದರ ಸದುಪಯೋಗಪಡೆದುಕೊಳ್ಳುವಂತೆ ಶಿವಮೊಗ್ಗ ಲೋಕಾಯುಕ್ತ ಇಲಾಖೆಯ ಪೊಲೀಸ್ ಅಧೀಕ್ಷಕ ಮಂಜುನಾಥ ಚೌದರಿ. ಎಂ.ಹೆಚ್. ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...