Bharat Scouts and Guides ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ 25 ವರ್ಷಗಳಿಂದ ನಿರಂತರವಾಗಿ ವಿವಿಧ ಪ್ರಮುಖ ಹುದ್ದೆಯಲ್ಲಿ ಸೇವೆ ಸಲ್ಲಿಸಿ ವೃತ್ತಿಯಲ್ಲಿ ಪ್ರಸಿದ್ಧ ವಕೀಲರಾಗಿ ಸೇವೆ ಸಲ್ಲಿಸುತ್ತಿರುವ ಶಕುಂತಲಾ ಚಂದ್ರಶೇಖರ್ ಅವರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಮುಖ್ಯ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದರು.
ಶಿವಮೊಗ್ಗ ನಗರದ ಸ್ಕೌಟ್ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂತನ ಜಿಲ್ಲಾ ಮುಖ್ಯ ಆಯುಕ್ತೆ ಶಕುಂತಲಾ ಚಂದ್ರಶೇಖರ್ ಮಾತನಾಡಿ, ಮಹತ್ತರ ಜವಾಬ್ದಾರಿ ವಹಿಸಿಕೊಂಡಿದ್ದು, ಎಲ್ಲ ಹಿರಿಯರ ಸಲಹೆ ಸಹಕಾರದೊಂದಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ನ ಎಲ್ಲ ಕಾರ್ಯಕ್ರಮಗಳನ್ನು ಕ್ರೀಯಾಶೀಲವಾಗಿ ನಡೆಸಿಕೊಂಡು ಹೋಗಲು ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಮಾಜಿ ಆಯುಕ್ತ ಎಚ್.ಡಿ.ರಮೇಶ್ ಶಾಸ್ತ್ರಿ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯನ್ನು ಸಾಕಷ್ಟು ಜನ ಹಿರಿಯರು ಕಟ್ಟಿ ಬೆಳೆಸಿದ್ದು, ತನ್ನದೇ ಆದ ಇತಿಹಾಸ ಹೊಂದಿದೆ. ಸಂಸ್ಥೆಯಲ್ಲಿ ತರಬೇತಿ ಪಡೆದವರು ರಾಜ್ಯ, ರಾಷ್ಟ್ರಮಟ್ಟದಲ್ಲಿ ಉನ್ನತ ಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜ್ಯದಲ್ಲೇ ಸಂಸ್ಥೆಯು ಮಾದರಿ ಸಂಸ್ಥೆಯಾಗಿದೆ ಎಂದರು.
ಇದೇ ಸಂದರ್ಭದಲ್ಲಿ ನೂತನ ಜಿಲ್ಲಾ ಮುಖ್ಯ ಆಯುಕ್ತರಾದ ಶಕುಂತಲಾ ಚಂದ್ರಶೇಖರ್ ಅವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಪದಗ್ರಹಣ ಸಮಾರಂಭದಲ್ಲಿ ಸ್ಕೌಟ್ ಆಯುಕ್ತ ಎಸ್.ಜಿ.ಆನಂದ್, ಕೆ.ರವಿ, ಕಾರ್ಯದರ್ಶಿ ಚಂದ್ರಶೇಖರಯ್ಯ, ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯಕುಮಾರ್, ಪ್ರೊ. ಎ.ಎಸ್.ಚಂದ್ರಶೇಖರ್, ಭಾರತಿ ಚಂದ್ರಶೇಖರ್, ರಾಜೇಶ್ ಅವಲಕ್ಕಿ, ವೈ.ಆರ್.ವೀರೇಶಪ್ಪ, ಪರಮೇಶ್ವರ್, ರಾಘವೇಂದ್ರ, ಮಲ್ಲಿಕಾರ್ಜುನ ಕಾನೂರ್, ಚೂಡಾಮಣಿ ಇ.ಪವಾರ್, ದೇವಪ್ಪ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
Bharat Scouts and Guides ಶಿವಮೊಗ್ಗದ ಸ್ಕೌಟ್ & ಗೈಡ್ಸ್ ಜಿಲ್ಲಾ ಆಯುಕ್ತರಾಗಿ ಶಕುಂತಲಾ ಚಂದ್ರಶೇಖರ್
Date: