Wednesday, March 25, 2026
Wednesday, March 25, 2026

Bharat Scouts and Guides ಶಿವಮೊಗ್ಗದ ಸ್ಕೌಟ್ & ಗೈಡ್ಸ್ ಜಿಲ್ಲಾ ಆಯುಕ್ತರಾಗಿ ಶಕುಂತಲಾ ಚಂದ್ರಶೇಖರ್

Date:

Bharat Scouts and Guides ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ 25 ವರ್ಷಗಳಿಂದ ನಿರಂತರವಾಗಿ ವಿವಿಧ ಪ್ರಮುಖ ಹುದ್ದೆಯಲ್ಲಿ ಸೇವೆ ಸಲ್ಲಿಸಿ ವೃತ್ತಿಯಲ್ಲಿ ಪ್ರಸಿದ್ಧ ವಕೀಲರಾಗಿ ಸೇವೆ ಸಲ್ಲಿಸುತ್ತಿರುವ ಶಕುಂತಲಾ ಚಂದ್ರಶೇಖರ್ ಅವರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಮುಖ್ಯ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದರು.
ಶಿವಮೊಗ್ಗ ನಗರದ ಸ್ಕೌಟ್ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂತನ ಜಿಲ್ಲಾ ಮುಖ್ಯ ಆಯುಕ್ತೆ ಶಕುಂತಲಾ ಚಂದ್ರಶೇಖರ್ ಮಾತನಾಡಿ, ಮಹತ್ತರ ಜವಾಬ್ದಾರಿ ವಹಿಸಿಕೊಂಡಿದ್ದು, ಎಲ್ಲ ಹಿರಿಯರ ಸಲಹೆ ಸಹಕಾರದೊಂದಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ನ ಎಲ್ಲ ಕಾರ್ಯಕ್ರಮಗಳನ್ನು ಕ್ರೀಯಾಶೀಲವಾಗಿ ನಡೆಸಿಕೊಂಡು ಹೋಗಲು ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಮಾಜಿ ಆಯುಕ್ತ ಎಚ್.ಡಿ.ರಮೇಶ್ ಶಾಸ್ತ್ರಿ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯನ್ನು ಸಾಕಷ್ಟು ಜನ ಹಿರಿಯರು ಕಟ್ಟಿ ಬೆಳೆಸಿದ್ದು, ತನ್ನದೇ ಆದ ಇತಿಹಾಸ ಹೊಂದಿದೆ. ಸಂಸ್ಥೆಯಲ್ಲಿ ತರಬೇತಿ ಪಡೆದವರು ರಾಜ್ಯ, ರಾಷ್ಟ್ರಮಟ್ಟದಲ್ಲಿ ಉನ್ನತ ಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜ್ಯದಲ್ಲೇ ಸಂಸ್ಥೆಯು ಮಾದರಿ ಸಂಸ್ಥೆಯಾಗಿದೆ ಎಂದರು.
ಇದೇ ಸಂದರ್ಭದಲ್ಲಿ ನೂತನ ಜಿಲ್ಲಾ ಮುಖ್ಯ ಆಯುಕ್ತರಾದ ಶಕುಂತಲಾ ಚಂದ್ರಶೇಖರ್ ಅವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಪದಗ್ರಹಣ ಸಮಾರಂಭದಲ್ಲಿ ಸ್ಕೌಟ್ ಆಯುಕ್ತ ಎಸ್.ಜಿ.ಆನಂದ್, ಕೆ.ರವಿ, ಕಾರ್ಯದರ್ಶಿ ಚಂದ್ರಶೇಖರಯ್ಯ, ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯಕುಮಾರ್, ಪ್ರೊ. ಎ.ಎಸ್.ಚಂದ್ರಶೇಖರ್, ಭಾರತಿ ಚಂದ್ರಶೇಖರ್, ರಾಜೇಶ್ ಅವಲಕ್ಕಿ, ವೈ.ಆರ್.ವೀರೇಶಪ್ಪ, ಪರಮೇಶ್ವರ್, ರಾಘವೇಂದ್ರ, ಮಲ್ಲಿಕಾರ್ಜುನ ಕಾನೂರ್, ಚೂಡಾಮಣಿ ಇ.ಪವಾರ್, ದೇವಪ್ಪ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...