Shivamogga Police ಶಿವಮೊಗ್ಗದ ಸಾಗರ ರಸ್ತೆ ವಾಜಪೇಯಿ ಬಡಾವಣೆ ಬಳಿ ಮರಕ್ಕೆ ಬೈಕ್ ಡಿಕ್ಕಿ ಹೊಡೆದು ನಂತರ ಬೈಕ್ ಸಹಿತ ಚರಂಡಿಗೆ ಬಿದ್ದು ರಾಜು ಎಂಬುವವರು ಸಾವನ್ನಪ್ಪಿದ್ದಾರೆ.
ಕೂಲಿ ಕೆಲಸ ಮಾಡಿಕೊಂಡಿದ್ದ ಸಿದ್ದರಹಳ್ಳಿ ರಾಜು ಅವರ ಸಾವಿಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಇದು ಅಪಘಾತವಲ್ಲ ಬದಲಿಗೆ ಕೊಲೆ ಎಂದು ಆರೋಪಿಸುತ್ತಿದ್ದಾರೆ. ಮೃತ ರಾಜುವಿನ ಕಣ್ಣುಗುಡ್ಡೆಗಳು ಹೊರಕ್ಕೆ ಬಿದ್ದಿದ್ದು ಅಪಘಾತ ಸಂಭವಿಸಿದ್ದರೆ ಕಣ್ಣುಗುಂಡಿಗಳು ಹೊರಗೆ ಯಾಕೆ ಬರುತ್ತವೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಇದಲ್ಲದೆ ರಾಜವಿನ ಮೊಬೈಲ್ ಹೊರಗೆ ಕಟ್ಟೆ ಮೇಲೆ ಕಾಣಿಸಿಕೊಂಡಿದೆ. ಪತಿ ಮೃತನಾದರೂ ಪತ್ನಿ ಸಾವಿಗೆ ಬಂದಿಲ್ಲದಿರುವುದು ಹಲವು ಅನುಮಾನಕ್ಕೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
Shivamogga Police ಮತ್ತೊಂದು ಪ್ರಕರಣದಲ್ಲಿ ಸುರೇಶ್ ಎಂಬಾತ ಸುಬ್ಬಯ್ಯ ಮೆಡಿಕಲ್ ಆಸ್ಪತ್ರೆಯ ರಸ್ತೆಯಲ್ಲಿ ಮೃತಪಟ್ಟಿದ್ದು ತುಂಗಾ ನಗರ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.