Wednesday, March 12, 2025
Wednesday, March 12, 2025

Tarunodaya Shivamogga ನಿಸರ್ಗದಾನಂದ ಸವಿಯ ಬೇಕೆಂದರೆ ಚಾರಣ ಹೋಗಲೇ ಬೇಕು- ಜಿ.ವಿಜಯ ಕುಮಾರ್

Date:

Tarunodaya Shivamogga ಜರಿ, ತೊರೆ, ಹಕ್ಕಿ ಪಕ್ಷಿಗಳ ಕಲರವ, ಪ್ರಕೃತಿ ಮಾತೆಯ ಸುಂದರ ನೋಟ ಸವಿಯ ಬೇಕಾದವರು ಚಾರಣಕ್ಕೆ ಹೋಗಲೇಬೇಕು ಎಂದು
ತರುಣೋದಯ ಮಾಜಿ ರಾಜ್ಯ ಘಟಕದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಹೇಳಿದರು.

ತರುಣೋದಯ ಘಟಕ ಆಯೋಜಿಸಿದ ಮತ್ತಿಘಟ್ಟ ಫಾಲ್ಸ್ ಚಾರಣಕ್ಕೆ ಹೊರಟ ಚಾರಣಿಗರಿಗೆ ಶುಭ ಹಾರೈಸಿ ಮಾತನಾಡಿದ ಅವರು, ಈ ರೀತಿ ಚಾರಣಕ್ಕೆ ಮನೆ ಮಂದಿಯೆಲ್ಲ ಹೋದಾಗ ಒಂದು ರೀತಿ ಸಂತೋಷ ಸಿಗುತ್ತದೆ. ಹೊಸ ಸದಸ್ಯರೊಂದಿಗೆ ಸ್ನೇಹ ಬೆಳೆಸಲು ಇಂತಹ ಚಾರಣ ಸಹಕಾರಿ. ದಿನವಿಡೀ ಜೊತೆಗೆ ಇದ್ದು, ಊಟ, ತಿಂಡಿ, ಚಾರಣದ ಸಮಯದಲ್ಲಿ ಒಬ್ಬರನ್ನೊಬ್ಬರು ಪರಿಚಯ ಮಾಡಿಕೊಂಡು, ತಮಾಷೆಯಾಗಿ ಸಮಯ ಕಳೆಯುವುದನ್ನು ವರ್ಣಿಸಲು ಸಾಧ್ಯವಿಲ್ಲ ಎಂದರು.

ಛೇರ್ಮನ್ ವಾಗೇಶ್ ಮಾತನಾಡಿ, ನಾವು ಸಂತೋಷ ಪಡಲು ಪ್ರವಾಸ ಹೋಗುವುದು ಸಾಮಾನ್ಯ, ಆದರೆ ಇತರರ ಸಂತೋಷಕ್ಕೆ ಚಾರಣ ಕಳೆದುಕೊಂಡು ಹೋಗುವುದು ಸಾಹಸದ ಕೆಲಸವೆ ಸರಿ. ಬಂದವರನ್ನು ಎಲ್ಲಾ ರೀತಿಯಲ್ಲಿ ಸಮಾಧಾನ ಪಡಿಸುವುದು ಕಷ್ಟಾಸಾಧ್ಯ ಎಂದರು.

Tarunodaya Shivamogga ಕಾರ್ಯದರ್ಶಿ ಸುರೇಶ್ ಕುಮಾರ್ ಮಾತನಾಡಿ, ಹೊಸ ಹೊಸ ಪ್ರದೇಶಗಳನ್ನು ಗುರುತಿಸಿ, ಅಲ್ಲಿಯ ವ್ಯವಸ್ಥೆಗಳನ್ನು ನೋಡಿಕೊಂಡು ಚಾರಣ ಮಾಡುತ್ತೇವೆ. ಚಾರಣಿಗರಿಗೆ ಉತ್ತಮ ಆಹಾರ ಒದಗಿಸಲು ಕ್ರಮ ತೆಗೆದುಕೊಳ್ಳುತ್ತೇವೆ ಹಾಗೂ ಎಲ್ಲಾ ರೀತಿಯ ಮುನ್ನೆಚ್ಚರಿಕೆ ತೆಗೆದು ಕೊಳ್ಳುತ್ತೇವೆ. ಇಂದು ಹಲವು ಹೊಸ ಸದಸ್ಯರು ಆಗಮಿಸಿದ್ದು ಚಾರಣದ ನಂತರ ತಮ್ಮ ಅನಿಸಿಹಂಚಿಕೊಳ್ಳಬೇಕಾಗಿ ಕೋರಿದರು.

ಈ ವೇಳೆ ಉಪಾಧ್ಯಕ್ಷೆ ಡಾ. ಪ್ರಕೃತಿ, ನಿರ್ದೇಶಕರಾದ ನಾಗರಾಜ್, ಭಾರತಿ, ಗಿರೀಶ್, ಹರೀಶ್, ರಜನಿ, ಬಸವಪ್ಪ, ವೀರಭದ್ರಪ್ಪ ಸೇರಿದಂತೆ ಎಪ್ಪತ್ತೇಳರಿಂದ ಐದು ವರ್ಷದ ಮಗುವರೆಗೂ ಒಟ್ಟು ಐವತ್ತು ಸದಸ್ಯರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಜೆಸಿಐ ನಲ್ಲಿ ತೊಡಗಿಸಿಕೊಂಡರೆ ಪರಿಪೂರ್ಣ ವ್ಯಕ್ತಿತ್ವ ಬೆಳವಣಿಗೆ- ಸೂರ್ಯ ನಾರಾಯಣ ವರ್ಮ

JCI Shivamogga ಸಮಾಜಮುಖಿ ಚಟುವಟಿಕೆಗಳ ಜತೆಯಲ್ಲಿ ಸದೃಢ ಸಮಾಜ ನಿರ್ಮಾಣ ಮಾಡುವಲ್ಲಿ...

Karnataka Lokayukta ಮಾರ್ಚ್ 18 ರಿಂದ 21 ವರೆಗೆ ರಾಜ್ಯ ಉಪಲೋಕಾಯುಕ್ತ ನ್ಯಾ.ಕೆ.ಫಣೀಂದ್ರ ಅವರ ಜಿಲ್ಲಾ ಕಾರ್ಯಕ್ರಮಗಳ ಮಾಹಿತಿ

Karnataka Lokayukta ಕರ್ನಾಟಕ ಉಪಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಅವರು ಮಾ. 18...

CM Siddharamaih ಕುರ್ಚಿ ಉಳಿಸಿಕೊಳ್ಳುವ ಯತ್ನದಲ್ಲಿ ಸಿದ್ಧರಾಮಯ್ಯನವರ ಬಜೆಟ್…!

CM Siddharamaih ಕರ್ನಾಟಕದ ಅಭಿವೃದ್ಧಿಗೆ ಪೂರಕವೇ ಅಥವಾ ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ...

Guarantee Scheme ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ.‌ ಊಹಾಪೋಹಗಳಿಗೆ ಬೆಲೆಕೊಡಬೇಡಿ- ಸಿ.ಎಸ್.ಚಂದ್ರಭೂಪಾಲ್

Guarantee Scheme ಕರ್ನಾಟಕ ಸರ್ಕಾರದ ಮಹತ್ವದ ಐದು ಗ್ಯಾರಂಟಿ ಯೋಜನೆಗಳಾದ ಶಕ್ತಿ,...