Thursday, June 18, 2026
Thursday, June 18, 2026

Tarunodaya Shivamogga ನಿಸರ್ಗದಾನಂದ ಸವಿಯ ಬೇಕೆಂದರೆ ಚಾರಣ ಹೋಗಲೇ ಬೇಕು- ಜಿ.ವಿಜಯ ಕುಮಾರ್

Date:

Tarunodaya Shivamogga ಜರಿ, ತೊರೆ, ಹಕ್ಕಿ ಪಕ್ಷಿಗಳ ಕಲರವ, ಪ್ರಕೃತಿ ಮಾತೆಯ ಸುಂದರ ನೋಟ ಸವಿಯ ಬೇಕಾದವರು ಚಾರಣಕ್ಕೆ ಹೋಗಲೇಬೇಕು ಎಂದು
ತರುಣೋದಯ ಮಾಜಿ ರಾಜ್ಯ ಘಟಕದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಹೇಳಿದರು.

ತರುಣೋದಯ ಘಟಕ ಆಯೋಜಿಸಿದ ಮತ್ತಿಘಟ್ಟ ಫಾಲ್ಸ್ ಚಾರಣಕ್ಕೆ ಹೊರಟ ಚಾರಣಿಗರಿಗೆ ಶುಭ ಹಾರೈಸಿ ಮಾತನಾಡಿದ ಅವರು, ಈ ರೀತಿ ಚಾರಣಕ್ಕೆ ಮನೆ ಮಂದಿಯೆಲ್ಲ ಹೋದಾಗ ಒಂದು ರೀತಿ ಸಂತೋಷ ಸಿಗುತ್ತದೆ. ಹೊಸ ಸದಸ್ಯರೊಂದಿಗೆ ಸ್ನೇಹ ಬೆಳೆಸಲು ಇಂತಹ ಚಾರಣ ಸಹಕಾರಿ. ದಿನವಿಡೀ ಜೊತೆಗೆ ಇದ್ದು, ಊಟ, ತಿಂಡಿ, ಚಾರಣದ ಸಮಯದಲ್ಲಿ ಒಬ್ಬರನ್ನೊಬ್ಬರು ಪರಿಚಯ ಮಾಡಿಕೊಂಡು, ತಮಾಷೆಯಾಗಿ ಸಮಯ ಕಳೆಯುವುದನ್ನು ವರ್ಣಿಸಲು ಸಾಧ್ಯವಿಲ್ಲ ಎಂದರು.

ಛೇರ್ಮನ್ ವಾಗೇಶ್ ಮಾತನಾಡಿ, ನಾವು ಸಂತೋಷ ಪಡಲು ಪ್ರವಾಸ ಹೋಗುವುದು ಸಾಮಾನ್ಯ, ಆದರೆ ಇತರರ ಸಂತೋಷಕ್ಕೆ ಚಾರಣ ಕಳೆದುಕೊಂಡು ಹೋಗುವುದು ಸಾಹಸದ ಕೆಲಸವೆ ಸರಿ. ಬಂದವರನ್ನು ಎಲ್ಲಾ ರೀತಿಯಲ್ಲಿ ಸಮಾಧಾನ ಪಡಿಸುವುದು ಕಷ್ಟಾಸಾಧ್ಯ ಎಂದರು.

Tarunodaya Shivamogga ಕಾರ್ಯದರ್ಶಿ ಸುರೇಶ್ ಕುಮಾರ್ ಮಾತನಾಡಿ, ಹೊಸ ಹೊಸ ಪ್ರದೇಶಗಳನ್ನು ಗುರುತಿಸಿ, ಅಲ್ಲಿಯ ವ್ಯವಸ್ಥೆಗಳನ್ನು ನೋಡಿಕೊಂಡು ಚಾರಣ ಮಾಡುತ್ತೇವೆ. ಚಾರಣಿಗರಿಗೆ ಉತ್ತಮ ಆಹಾರ ಒದಗಿಸಲು ಕ್ರಮ ತೆಗೆದುಕೊಳ್ಳುತ್ತೇವೆ ಹಾಗೂ ಎಲ್ಲಾ ರೀತಿಯ ಮುನ್ನೆಚ್ಚರಿಕೆ ತೆಗೆದು ಕೊಳ್ಳುತ್ತೇವೆ. ಇಂದು ಹಲವು ಹೊಸ ಸದಸ್ಯರು ಆಗಮಿಸಿದ್ದು ಚಾರಣದ ನಂತರ ತಮ್ಮ ಅನಿಸಿಹಂಚಿಕೊಳ್ಳಬೇಕಾಗಿ ಕೋರಿದರು.

ಈ ವೇಳೆ ಉಪಾಧ್ಯಕ್ಷೆ ಡಾ. ಪ್ರಕೃತಿ, ನಿರ್ದೇಶಕರಾದ ನಾಗರಾಜ್, ಭಾರತಿ, ಗಿರೀಶ್, ಹರೀಶ್, ರಜನಿ, ಬಸವಪ್ಪ, ವೀರಭದ್ರಪ್ಪ ಸೇರಿದಂತೆ ಎಪ್ಪತ್ತೇಳರಿಂದ ಐದು ವರ್ಷದ ಮಗುವರೆಗೂ ಒಟ್ಟು ಐವತ್ತು ಸದಸ್ಯರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...