Department of Social Welfare Karnataka ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಶುಲ್ಕ ಮರುಪಾವತಿ ಕಾರ್ಯಕ್ರಮ ಸೌಲಭ್ಯ ನೀಡಲು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ಕೋರ್ಸುಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಹಾಗೂ ವೃತ್ತಿಪರ ಸ್ನಾತಕೋತ್ತರ ಪದವಿ ಮತ್ತು ನರ್ಸಿಂಗ್ ಕೋರ್ಸುಗಳಿಗೆ https://ssp.postmartic.karnataka.gov.in ವೆಬ್ಸೈಟ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಮಾ.31 ರವರೆಗೆ ವಿಸ್ತರಿಸಲಾಗಿದೆ.
Department of Social Welfare Karnataka ಹೆಚ್ಚಿನ ಮಾಹಿತಿ ಹಾಗೂ ಕಾರ್ಯಕ್ರಮಗಳ ವಿವರ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ www.bcwd.karnataka.gov.in, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್ postmatrichelp@karnataka.gov.in, ದೂ.ಸಂ.: 1902, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ದೂ.ಸಂ.: 08182-222129 ಅಥವಾ ಸಹಾಯವಾಣಿ 8050770005 ಗಳನ್ನು ಸಂಪರ್ಕಿಸಬಹುದೆಂದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.