Wednesday, March 25, 2026
Wednesday, March 25, 2026

Kuvempu University ಸ್ವೀಕರಿಸಿದ 160 ದೂರುಗಳ‌‌ ಪೈಕಿ ಸ್ಥಳದಲ್ಲೇ 35 ಅಹವಾಲಿಗೆ ಪರಿಹಾರ ನೀಡಿದ ಉಪಲೋಕಾಯುಕ್ತರು

Date:

Kuvempu University ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಜನರು ಸರ್ಕಾರಿ ಅಧಿಕಾರಿಗಳ ವಿರುದ್ದ, ಸರ್ಕಾರಿ ಕೆಲಸ ಪಡೆಯುವಲ್ಲಿ ಆಗುತ್ತಿರುವ ವಿಳಂಬ ಇತರೆ ಕುರಿತು ಮಾನ್ಯ ನ್ಯಾಯಮೂರ್ತಿಗಳು ಹಾಗೂ ಉಪ ಲೋಕಾಯುಕ್ತರಾದ ಕೆ.ಎನ್.ಫಣೀಂದ್ರ ಇವರಿಗೆ ನೇರವಾಗಿ ದೂರು ಸಲ್ಲಿಸಿದರು.

“ಸಾರ್ವಜನಿಕರಿಂದ ಕುಂದುಕೊರತೆಗಳ ಬಗ್ಗೆ ದೂರು ಸ್ವೀಕಾರ, ವಿಚಾರಣೆ ಹಾಗೂ ವಿಲೇವಾರಿ ಸಭಾ ಕಾರ್ಯಕ್ರಮದಲ್ಲಿ ಬುಧವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರವೆಗೆ ವಿವಿಧ ಸರ್ಕಾರಿ ಇಲಾಖೆಗಳು, ಸಂಸ್ಥೆಗಳಿಗೆ ಸಂಬಂಧಿಸಿದಂತೆ ಸುಮಾರು 160 ದೂರುಗಳು ಸ್ವೀಕೃತಗೊಂಡಿದ್ದು, ವಿಚಾರಣೆ ಕೈಗೊಂಡು, 35 ಅರ್ಜಿಗಳನ್ನು ಮಾನ್ಯ ಉಪ ಲೋಕಾಯುಕ್ತರು ವಿಲೇವಾರಿ ಮಾಡಿದರು.

ಮಹಾನಗರಪಾಲಿಕೆ, ಕಂದಾಯ ಇಲಾಖೆ, ಗ್ರಾ.ಪಂ ಗಳು, ಕುವೆಂಪು ವಿಶ್ವವಿದ್ಯಾಲಯ, ಅರಣ್ಯ ಇಲಾಖೆ, ಪಿಡಬ್ಲ್ಯೂಡಿ, ಸಹಕಾರ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ವಿರುದ್ದ ಅರ್ಜಿದಾರರು ದೂರನ್ನು ಸಲ್ಲಿಸಿದರು.

ಉಪ ಲೋಕಾಯುಕ್ತರು ಸದರಿ ದೂರುಗಳ ವಿಚಾರಣೆ ನಡೆಸಿ, ಮಧ್ಯಾಹ್ನದ ಹೊತ್ತಿಗೆ ಸ್ಥಳದಲ್ಲೇ 35 ಅರ್ಜಿಗಳನ್ನು ವಿಲೇವಾರಿ ಮಾಡಿದರು. ತಮ್ಮ ವ್ಯಾಪ್ತಿಗೆ ಒಳಪಡದ ಪ್ರಕರಣಗಳಿಗೆ ಎಲ್ಲಿ ಹೋಗಬೇಕೆಂದು ಮಾರ್ಗದರ್ಶನ ಮಾಡಿದರು.

ರೂ.3 ಲಕ್ಷದೊಳಗಿನ ಆದಾಯ ಇರುವ ದೂರುದಾರರಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಉಚಿತ ಕಾನೂನು ನೆರವು ಪಡೆಯಲು ಸಲಹೆ ನೀಡಿದರು.

ಶಿವಮೊಗ್ಗ ತಾಲ್ಲೂಕಿನ ಭಾಗೀರಥಮ್ಮ ನವರು ಪೌತಿಯಾದ ಪತಿಯ ಮೂರನೇ ಪತ್ನಿಯಾಗಿದ್ದು ತಮ್ಮ ಪತಿಯ ಪಿಂಚಣಿ ಪಡೆಯುವ ಸಂಬಂಧ ಮರಣ ಪ್ರಮಾಣ ಪತ್ರ ಇತರೆ ದಾಖಲೆ ಕೋರಿ ಅರ್ಜಿ ಸಲ್ಲಿಸಿದ ಸಂಬಂಧ ದೂರು ನೀಡಿದ್ದು, ಈ ಕುರಿತು ವಿಚಾರಣೆ ನಡೆಸಿದ ಉಪ ಲೋಕಾಯುಕ್ತರು ಈ ಅರ್ಜಿಯು ತಮ್ಮ ವ್ಯಾಪ್ತಿಗೆ ಒಳಪಡುವುದಿಲ್ಲ, ಎಸಿ ಯವರಿಗೆ ಮೇಲ್ಮನವಿ ಸಲ್ಲಿಸುವಂತೆ ತಿಳಿಸಿದರು.

ಭದ್ರಾವತಿ ತಾಲ್ಲೂಕಿನ ಸಿದ್ಲೀಪುರ ಗ್ರಾಮದ ರವಿ ಆರ್ ಎಂಬುವವರು ಭದ್ರಾವತಿ ತಹಶೀಲ್ದಾರರು, ಎಡಿಎಲ್‌ಆರ್ ವಿರುದ್ದ ದೂರು ಸಲ್ಲಿಸಿ, ಪೋಡಿ ಮಾಡಿಕೊಡುವಂತೆ ಕೋರಿದರು.

ಉಪ ಲೋಕಾಯುಕ್ತರು, ದೂರುದಾರರಿಗೆ ನಿಯಮಾನುಸಾರ ಪೋಡಿಗೆ ಅರ್ಜಿ ಸಲ್ಲಿಸುವಂತೆ ತಿಳಿಸಿದರು. ಕುವೆಂಪು ವಿವಿ ಯ ಪ್ರೊ. ರವೀಂದ್ರ ಅವರು ಹಳೆ ಪಿಂಚಣಿಯನ್ನು ಮುಂದುವರೆಸುವಂತೆ ಕುವೆಂಪು ವಿವಿಯ ಕುಲಪತಿಗಳಾದ ಪ್ರೊ.ಶರತ್ ಅನಂತಮೂರ್ತಿ ವಿರುದ್ದ ದೂರು ಸಲ್ಲಿಸಿದ್ದು, ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ, ವಿಶ್ವವಿದ್ಯಾಲಯದಲ್ಲೇ ಈ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳಲು ತಿಳಿಸಿದರು.

Kuvempu University ವಿನೋಬನಗರದ ಎಸ್.ಸಿ.ಪ್ರಕಾಶ್‌ರವರು ಕಟ್ಟಡದಲ್ಲಿ ಬಹು ಮಹಡಿಗಳನ್ನು ಕಟ್ಟುತ್ತಲೇ ಹೋಗುತ್ತಿರುವ ಬಗ್ಗೆ ಪಾಲಿಕೆಯ ಆಯುಕ್ತರ ವಿರುದ್ಧ ದೂರು ನೀಡಿದಾಗ, ಲೋಕಾಯುಕ್ತರು ಈ ಕುರಿತಂತೆ ಸಂಬಂಧಿಸಿದ ಪಾಲಿಕೆ ಆಯುಕ್ತರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದರು.

ವಿದ್ಯಾನಗರದ ಜಿ.ಪಿ.ಚಂದ್ರಶೇಖರಪ್ಪ ಸರ್ವೇ ನಂ 8 ರಲ್ಲಿ ನಿರ್ಮಾಣವಾಗಿರುವ ಕಾಲುವೆ ತರೆವುಗೊಳಿಸುವಂತೆ ಪಾಲಿಕೆಯ ಆಯುಕ್ತರ ವಿರುದ್ಧ ದೂರ ಸಲ್ಲಿಸಿದ್ದು, ಲೋಕಾಯುಕ್ತರು ಈ ಕಾಲವೆಯ ಸ್ಥಳ ಪರಿಶೀಲನೆ ಮಾಡಲು ಸೂಚಿಸಿ, ಒಂದು ವೇಳೆ ಕಾಲುವೆ ಅವರ ಜಾಗದಲ್ಲಿ ಹೋಗಿದ್ದರೆ ಅದಕ್ಕೆ ಸೂಕ್ತ ಪರಿಹಾರ ಒದಗಿಸಬೇಕೆಂದು ತಿಳಿಸಿದರು.

ಕಾರ್ಗಲ್‌ನ ಸೀತಾಕಟ್ಟೆ ಜೋಗದ ಶಂಕರ್ ರವರು ಕಾರ್ಗಲ್‌ನ ವಲಯ ಅರಣ್ಯಾಧಿಕಾರಿಗಳು ತಮ್ಮ ಅರ್ಜಿ ಬಾಕಿ ಇರುವಾಗಲೆ ಕಾನೂನು ಬಾಹಿರವಾಗಿ ಜಮೀನಿನಿಂದ ನಮ್ಮನ್ನು ಒಕ್ಕಲೆಬ್ಬಿಸಿದ್ದಾರೆ ಎಂದು ದೂರು ನೀಡಿದ್ದು, ಲೋಕಾಯುಕ್ತರು ಇದನ್ನು ಪರಿಶೀಲಿಸಿ ಕಾನೂನುಬಾಹಿರವಾಗಿ ಒಕ್ಕಲೆಬ್ಬಿಸಿದ್ದರೆ ಸೂಕ್ತ ಪರಿಹಾರ ನೀಡಬೇಕೆಂದು ಅರಣ್ಯ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರಿನ ಗಣೇಶ್ ರವರು ಗ್ರಾ. ಪಂ ಒಂದರ ಸದಸ್ಯರು ಪಿಡಿಓ ಸಹಿಯನ್ನು ನಕಲಿ ಮಾಡಿದ್ದು ಈ ಸಂಬಂಧ ಜಿ.ಪಂ ಸಿಇಓ ಹೇಮಂತ್ ಅವರ ವಿರುದ್ಧ ದೂರು ನೀಡಿದ್ದು, ಲೋಕಾಯುಕ್ತರು ಇದು ರೆಗ್ಯುಲರ್ ದೂರು ಆಗಿರುವುದರಿಂದ ನೀವು ಪೊಲೀಸರಿಗೆ ದೂರು ನೀಡಿ ಎಂದ ಅವರು ಜಿ.ಪಂ. ಸಿಇಓ ಗೆ ಪೂರ್ವಭಾವಿ ವರದಿ ನೀಡಿ ಎಂದು ತಿಳಿಸಿದರು.

ಶಿವಮೊಗ್ಗ ಅಶೋಕನಗರದ ಎ.ಸುಮತಿ ಮತ್ತು ಎ.ಸರೋಜರವರು ಪ್ರತ್ಯೇಕವಾಗಿ ವಾರ್ಡ್ ನಂ 31 ರ ವಿಷಯ ನಿರ್ವಾಹಕ ಗುರುಮೂರ್ತಿಯವರ ಕುರಿತು ಮನೆ ಖಾತೆ ವಿಚಾರವಾಗಿ ಪಾಲಿಕೆ ಆಯುಕ್ತರ ವಿರುದ್ಧ ದೂರು ನೀಡಿದರು. ಈ ದೂರಿನ ವಿಚಾರಣೆ ನಡೆಸಿ ಸ್ಥಳದಲ್ಲೇ ವಿಲೇವಾರಿ ಮಾಡಿ ದೂರುದಾರರಿಗೆ ಖಾತೆಗಳನ್ನು ನೀಡಲಾಯಿತು.

ಆದರ್ಶ ಪ್ರಾವಿಜನ್ ಸ್ಟೋರ್ ಮಾಲೀಕರು ಎಪಿಎಂಸಿಯ ಕಾರ್ಯದರ್ಶಿ ನಾಗರಾಜ ವಿರುದ್ಧ ದೂರು ನೀಡಿದ್ದು, ವಿಚಾರಣೆ ಕೈಗೊಂಡ ಉಪ ಲೋಕಾಯುಕ್ತರು ಇದು ಸಿವಿಲ್ ನ್ಯಾಯಾಲಯ ವ್ಯಾಪ್ತಿಗೆ ಬರುವುದರಿಂದ ಅಲ್ಲಿ ಪ್ರಕರಣ ದಾಖಲಿಸಲು ತಿಳಿಸಿದರು.

ಶಿವಮೊಗ್ಗ ಗೋಪಿ ಸರ್ಕಲ್‌ನ ಎಂ.ಎಸ್. ಅರುಂಧತಿ, ನಮ್ಮ ಕೈಗಾರಿಕಾ ಜಾಗದಲ್ಲಿ ಇತರೆ ವ್ಯಕ್ತಿ ಕಟ್ಟಡ ಕಟ್ಟಿಕೊಂಡಿದ್ದಾರೆ ಅದನ್ನು ಬಿಡಿಸಿಕೊಡಬೇಕೆಂದು ಪಾಲಿಕೆ ಆಯುಕ್ತ ವಿರುದ್ಧ ದೂರು ನೀಡಿದ್ದು, ಇದು ಖಾಸಗಿ ವ್ಯಕ್ತಿಗಳ ನಡುವಿನ ವಿವಾದವಾದ್ದರಿಂದ ಇದನ್ನು ಕೋರ್ಟ್ ಮೂಲಕ ಬಗೆಹರಿಸಿಕೊಳ್ಳಬೇಕೆಂದು ಲೋಕಾಯುಕ್ತರು ಸೂಚನೆ ನೀಡಿದರು.

ಶಿವಮೊಗ್ಗದ ಬಿ.ಮಂಜುನಾಥ್ ತಮ್ಮ ಜಮೀನಿನಲ್ಲಿ ರಸ್ತೆ ನಿರ್ಮಾಣವಾಗಿದ್ದು ಅದನ್ನು ತೆರವುಗೊಳಿಸುವಂತೆ ಕೋರಿದರು. ಉಪ ಲೋಕಾಯುಕ್ತರು ಸದರಿ ರಸ್ತೆ ಸರ್ಕಾರಿ ಅಥವಾ ಖಾಸಗಿ ಜಮೀನಿನಲ್ಲಿ ಇದೆಯಾ ಎಂದು ಪರಿಶೀಲಿಸಿ ವರದಿ ನೀಡುವಂತೆ ತಿಳಿಸಿದರು.

ಗೀತ ಮತ್ತು ಗ್ರಾಮಸ್ಥರು ಮೋಜಪ್ಪನ ಹೊಸೂರು ಅಬ್ಬಲಗೆರೆ ಇವರು ಗ್ರಾಮ ಆಡಳಿತ ಅಧಿಕಾರಿ ಯೋಗೇಶ್ ನಾಯಕ್ ವಿರುದ್ದ ಸಲ್ಲಿಸಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿವಿಲ್ ಪ್ರಕರಣ ನ್ಯಾಯಾಲಯದಲ್ಲಿ ಬಾಕಿ ಇದ್ದು, ಇತ್ಯರ್ಥವಾದ ನಂತರ ಅರ್ಜಿ ಸಲ್ಲಿಸುವಂತೆ ತಿಳಿಸಿದರು.

ಬೆಳಿಗ್ಗೆಯಿಂದಲೇ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತದ ವತಿಯಿಂದ ಪ್ರತ್ಯೇಕ ಕೌಂಟರ್‌ಗಳನ್ನು ತೆರೆದು ಸಾರ್ವಜನಿಕರಿಂದ ಕುಂದು ಕೊರತೆಗಳ ದೂರು ಅರ್ಜಿಗಳನ್ನು ಸ್ವೀಕರಿಸಿ ಅವರಿಗೆ ಟೋಕನ್ ನಂ. ನೀಡಿ ಸಭೆ ಸರಾಗವಾಗಿ ಜರುಗುವಂತೆ ವ್ಯವಸ್ಥೆ ಮಾಡಲಾಗಿತ್ತು.
ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ, ಜಿ.ಪಂ. ಸಿಇಓ ಎನ್. ಹೇಮಂತ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಜಿ.ಕೆ. ಮಿಥುನ್ ಕುಮಾರ್, ಜಿಲ್ಲಾ ನ್ಯಾಯಾಧೀಶರು ಮತ್ತು ಕರ್ನಾಟಕ ಲೋಕಾಯುಕ್ತದ ಅಪರ ನಿಬಂಧಕರು ಹಾಗೂ ವಿಚಾರಣೆಗಳು-14 ರ ಎನ್.ಆರ್. ಲೋಕಪ್ಪ, ಜಿಲ್ಲಾ ನ್ಯಾಯಾಧೀಶರು ಮತ್ತು ಕರ್ನಾಟಕ ಲೋಕಾಯುಕ್ತದ ಅಪರ ನಿಬಂಧಕರು ಹಾಗೂ ವಿಚಾರಣೆಗಳು-05 ರ ಜಿ.ವಿ. ವಿಜಯನಂದ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದÀ ಸದಸ್ಯ ಕಾರ್ಯದರ್ಶಿಯಾದ ಎಂ.ಎಸ್ ಸಂತೋಷ್, ಸಿವಿಲ್ ನ್ಯಾಯಾಧೀಶರು ಮತ್ತು ಉಪ ಲೋಕಾಯುಕ್ತರ ಆಪ್ತ ಕಾರ್ಯದರ್ಶಿಯಾದ ಕಿರಣ್ ಪಿ.ಎಂ. ಪಾಟೀಲ್, ಲೋಕಾಯುಕ್ತ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಮಂಜುನಾಥ್ ಚೌದರಿ, ಜಿಲ್ಲಾ ಅರಣ್ಯಾಧಿಕಾರಿ ಶಿವಶಂಕರ್, ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...