Wednesday, March 25, 2026
Wednesday, March 25, 2026

Shivamogga District Legal Services Authority ಸರ್ಕಾರಿ ಸಿಬ್ಬಂದಿ ಗಳೆಲ್ಲರೂ ತಮಗೆ ಅನ್ವಯಿಸುವ ಕಾನೂನನ್ನ ತಿಳಿದು ಕೊಂಡಿರಬೇಕು- ನ್ಯಾ.ಕೆ.ಎನ್.ಫಣೀಂದ್ರ

Date:

Shivamogga District Legal Services Authority ಕಾನೂನಿನ ಅಜ್ಞಾನಕ್ಕೆ ಕ್ಷಮೆಯಿಲ್ಲ. ಆದ್ದರಿಂದ ತಮಗೆ ಅನ್ವಯಿಸುವ ಕಾನೂನುಗಳನ್ನು ಎಲ್ಲ ಸರ್ಕಾರಿ ಅಧಿಕಾರಿ/ನೌಕರರು ತಿಳಿದುಕೊಂಡಿರಬೇಕು. ಕಠಿಣವಾದ ಕಾಯ್ದೆಯಡಿ ರಕ್ಷಣಾತ್ಮಕ ಕಾನೂನುಗಳೂ ಇದ್ದು ಅವುಗಳನ್ನು ತಿಳಿದುಕೊಳ್ಳಬೇಕೆಂದು ಮಾನ್ಯ ನ್ಯಾಯಮೂರ್ತಿಗಳು ಹಾಗೂ ಉಪ ಲೋಕಾಯುಕ್ತರಾದ ಕೆ.ಎನ್. ಫಣೀಂದ್ರ ರವರು ತಿಳಿಸಿದರು.

ಶಿವಮೊಗ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾ ನ್ಯಾಯಾಂಗ ಘಟಕ, ಜಿಲ್ಲಾಡಳಿತ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಬುಧವಾರ ಕುವೆಂಪು ರಂಗಮಂದಿರದಲ್ಲಿ ಶಿಕ್ಷಣ ಇಲಾಖೆ, ರೇಷ್ಮೆ ಇಲಾಖೆ, ಕೃಷಿ ಮತ್ತು ತೋಟಗಾರಿಕೆ ಇಲಾಖೆ, ನ್ಯಾಯಾಂಗ ನೌಕರರು, ಜಿಲ್ಲಾ ಮತ್ತು ತಾಲ್ಲೂಕು ಹಾಗೂ ಇತರೆ ಇಲಾಖೆ ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ‘ಲೋಕಾಯುಕ್ತ ಕಾಯ್ದೆಯ ಕಾನೂನು ಅರಿವು ಕಾರ್ಯಕ್ರಮವನ್ನು’ ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕ ಲೋಕಾಯುಕ್ತ ಕಾಯ್ದೆಯಲ್ಲಿ ಸಾರ್ವಜನಿಕರ ಹಕ್ಕುಗಳು, ಬಾಧ್ಯತೆಗಳು ಜೊತೆಗೆ ಅಧಿಕಾರಿಗಳಿಗೆ ಯಾವ ಯಾವ ರಕ್ಷಣೆ ಇದೆ ಎಂಬುದನ್ನೂ ತಿಳಿಸಲಾಗಿದೆ. ಎಲ್ಲ ಸಾಧಕ ಬಾಧಕಗಳನ್ನು ನೋಡಿಯೇ ಕಾನೂನು ರೂಪುಗೊಂಡಿರುತ್ತದೆ. ತನಗೆ ಕಾನೂನು ಗೊತ್ತಿಲ್ಲ ಎಂದು ಹೇಳಲು ಬರುವುದಿಲ್ಲ. ಗೊತ್ತಿದೆ ಎನ್ನುವ ಪೂರ್ವ ಭಾವನೆ ಇದ್ದೇ ಕಾನೂನಿನ ಅನುಷ್ಟಾನ ಆಗಿರುತ್ತದೆ. ಆದ್ದರಿಂದ ಸರ್ಕಾರಿ ಅಧಿಕಾರಿ/ನೌಕರರು ತಮಗೆ ಅನ್ವಯವಾಗುವ ಕಾಯ್ದೆ, ಕಾನೂನಿನ ಬಗ್ಗೆ ತಿಳಿದುಕೊಂಡಿರಬೇಕು. ಎಷ್ಟೇ ಕಠಿಣವಾದ ಕಾನೂನು ಇದ್ದರೂ ರಕ್ಷಣಾತ್ಮಕ ಕಲಂ ಗಳು ಇರುತ್ತವೆ. ಅದನ್ನು ತಿಳಿಯಬೇಕು.

ಕೇಂದ್ರ ಸರ್ಕಾರದ ಅಧಿಕಾರಿ/ನೌಕರರು, ಬ್ಯಾಂಕಿಂಗ್ ಪ್ರಾಧಿಕಾರ, ಕಡಿಮೆ ಷೇರು ಇರುವ ಕಂಪೆನಿ, ಖಾಸಗಿ ವ್ಯಕ್ತಿಗಳು ಕರ್ನಾಟಕ ಲೋಕಾಯುಕ್ತ ಕಾಯ್ದೆಯ ಅಡಿಯಲ್ಲಿ ಕ್ರಮ ವಹಿಸಲು ಬರುವುದಿಲ್ಲ.
ಈ ಕಾಯ್ದೆಯಡಿ ಮೂರು ಬಗೆ ದೂರು ತೆಗೆದುಕೊಳ್ಳಲಾಗುತ್ತದೆ.

ದೂರುದಾರರಿಂದ ನೇರವಾಗಿ, ಸ್ವಯಂ ಪ್ರೇರಿತವಾಗಿ ಹಾಘೂ ಸರ್ಕಾರ ವಹಿಸಿಕೊಟ್ಟ ದೂರನ್ನು ಸ್ವೀಕರಿಸಿ ಕ್ರಮ ವಹಿಸಲಾಗುತ್ತದೆ.
ಲೋಕಾಯುಕ್ತ ಆರೋಪಿತರಿಗೆ ನೋಟಿಸ್ ನೀಡಿದ ನಂತರ ಅಧಿಕಾರಿ/ನೌಕರರು ಶೀಘ್ರವಾಗಿ ಕ್ರಮ ತೆಗೆದುಕೊಳ್ಳುವಲ್ಲಿ ವಿಳಂಬ ತೋರುತ್ತಾರೆ. ಅದು ಮಾಡದೇ ವಿವರಣಾತ್ಮಕ ಉತ್ತರ ನೀಡಬೇಕು. ಸೆಕ್ಷನ್ 8, 9 ಓದಿಕೊಳ್ಳಬೇಕು. ಪರ್ಯಾಯ ವ್ಯವಸ್ಥೆ, ಲಿಮಿಟೇಷನ್ ಬಗ್ಗೆ ತಿಳಿದುಕೊಳ್ಳಬೇಕು.
ಆರೋಪಗಳನ್ನು ತನಿಖೆಗೆ ಒಳಪಡಿಸಿ, ವರದಿ ತಯಾರಿಸಿ, ಸರ್ಕಾರಕ್ಕೆ ಹಾಗೂ ಆರೋಪಿಗೆ ಸಲ್ಲಿಸಲಾಗುವುದು. ಪ್ರತಿ ಹಂತದಲ್ಲಿ ಆರೋಪಿಗಳಿಗೆ ಅವಕಾಶಗಳನ್ನು ನೀಡಲಾಗುತ್ತದೆ ಎಂದ ಅವರು ಲೋಕಾಯುಕ್ತ ಕಾಯ್ದೆಯ ಸೆಕ್ಷನ್ 12(1)(3) ಬಗ್ಗೆ ವಿವರಣೆ ನೀಡಿದರು.

Shivamogga District Legal Services Authority ಆರೋಪಿತರು ದಾಖಲೆಗಳನ್ನು, ಸತ್ಯ ವರದಿ ಸಲ್ಲಿಸುವ ಬಗ್ಗೆ ತಿಳಿಸಿದರು. ಗಂಭೀರ ಕರ್ತವ್ಯ ಲೋಪವಾಗಿದ್ದರೆ ಸೆಕ್ಷನ್ 13 ರಡಿ ಉಗ್ರ ಶಿಕ್ಷೆಗೆ ಅವಕಾಶವಿದೆ. ಕರ್ತವ್ಯ ಲೋಪದ ಪ್ರಮಾಣದ ಆಧಾರದ ಮೇಲೆ ಶಿಕ್ಷೆ ನೀಡಲಾಗುವುದು. ಸೆಕ್ಷನ್ 17, 19 ನಿಂದನೆ ಪ್ರಕ್ರಿಯೆ ಜರುಗಿಸುವ ಬಗ್ಗೆ ತಿಳಿಸಿದ ಅವರು ಕಾಯ್ದೆಯಡಿ ರಕ್ಷಣೆಯೂ ಇದೆ. ಎಚ್ಚರಿಕೆಯೂ ಇದೆ ಎಂದರು.

ಒಂದು ವೇಳೆ ಸಾರ್ವಜನಿಕ ದೂರುದಾರರು ಮಾನಹಾನಿ ಮಾಡಿದ್ದಾರೆಂದು ಮನವರಿಕೆ ಆದ ಸಂದರ್ಭದಲ್ಲಿ ನ್ಯಾಯಾಲಯ ದಲ್ಲಿ ದಾವೆ ಹೂಡಬಹುದು ಎಂದು ತಿಳಿಸಿದ ಅವರು ಕಾಯ್ದೆಯ ಮುಖ್ಯವಾದ ಸೆಕ್ಷನ್‌ಗಳ ಬಗ್ಗೆ ತಿಳಿಸಿಕೊಟ್ಟರು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾದ ಅಧ್ಯಕ್ಷರಾದ ಮಂಜುನಾಥ್ ನಾಯಕ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಖ್ಯಅತಿಥಿಗಳಾಗಿ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ, ಜಿ.ಪಂ. ಸಿಇಓ ಎನ್. ಹೇಮಂತ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಜಿ.ಕೆ. ಮಿಥುನ್ ಕುಮಾರ್ ಆಗಮಿಸಲಿದ್ದು, ಜಿಲ್ಲಾ ನ್ಯಾಯಾಧೀಶರು ಮತ್ತು ಕರ್ನಾಟಕ ಲೋಕಾಯುಕ್ತದ ಅಪರ ನಿಬಂಧಕರು ಹಾಗೂ ವಿಚಾರಣೆಗಳು-14 ರ ಎನ್.ಆರ್. ಲೋಕಪ್ಪ, ಜಿಲ್ಲಾ ನ್ಯಾಯಾಧೀಶರು ಮತ್ತು ಕರ್ನಾಟಕ ಲೋಕಾಯುಕ್ತದ ಅಪರ ನಿಬಂಧಕರು ಹಾಗೂ ವಿಚಾರಣೆಗಳು-05ರ ಜಿ.ವಿ. ವಿಜಯನಂದ, ಸಿವಿಲ್ ನ್ಯಾಯಾಧೀಶರು ಮತ್ತು ಉಪ ಲೋಕಾಯುಕ್ತರ ಆಪ್ತ ಕಾರ್ಯದರ್ಶಿಯಾದ ಕಿರಣ್ ಪಿ.ಎಂ. ಪಾಟೀಲ್, ಲೋಕಾಯುಕ್ತ ಜಿಲ್ಲಾ ಪೊಲೀಸ್ ಅಧೀಕ್ಷಕ ಮಂಜುನಾಥ ಚೌದರಿ ಪಾಲ್ಗೊಂಡಿದ್ದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾದ ಎಂ.ಎಸ್ ಸಂತೋಷ್ ಸ್ವಾಗತಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...