Karnataka Newspaper Distributors Federation ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ 2022 ಜುಲೈ 7ರಂದು ಪ್ರವಾಸಿ ಮಂದಿರದ ಸಮೀಪದಲ್ಲಿ ಪತ್ರಿಕೆ ವಿತರಣೆ ಮಾಡುತ್ತಿದ್ದ ಗಣೇಶ್ ಎಂಬಾತನಿಗೆ ಎನ್ ಡಬ್ಲ್ಯೂ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ ಆದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿದ್ದ ಪತ್ರಿಕಾ ವಿತರಕ ಗಣೇಶ್ ಕುಟುಂಬಕ್ಕೆ ಪರಿಹಾರ ನೀಡದ ಬಸ್ಸನ್ನು ವಶಪಡಿಸಲು ಆದೇಶ ನೀಡಿದ ನ್ಯಾಯಾಲಯಕ್ಕೆ ಧನ್ಯವಾದ ತಿಳಿಸುತ್ತಿರುವ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಇಡೀ ದೇಶದಲ್ಲಿ ಇದು ಒಂದು ಮಹತ್ತರವಾದ ಆದೇಶವಾಗಿದ್ದು ಒಬ್ಬ ಸಾಮಾನ್ಯ ಪತ್ರಿಕೆ ವಿತರಕನಿಗೂ ನ್ಯಾಯ ದೊರಕುತ್ತದೆ ಎಂಬುದಕ್ಕೆ ಇದೊಂದು ಉದಾಹರಣೆ .
ಈತನ ಕುಟುಂಬಕ್ಕೆ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರು ಒಕ್ಕೂಟ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಅಂದಿನ ಕಾರ್ಮಿಕ ಸಚಿವರ ಗಮನ ಸೆಳೆದು ಬಡ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರ ಕೊಡಿಸುವಲ್ಲಿ ಯಶಸ್ವಿಯಾಗಿದ್ದು ಇಡೀ ದೇಶದಲ್ಲಿ ಪ್ರಥಮ ಪತ್ರಿಕಾ ವಿತರಕನ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ ಯಶಸ್ವಿಯಾದ ರಾಜ್ಯ ಒಕ್ಕೂಟ ಹಾಗೂ ಕಾನಿಪ ಸಂಘ ಹಾಗೂ ಇದೇ ಸಂದರ್ಭದಲ್ಲಿ ನ್ಯಾಯಾಲಯದ ಆದೇಶವನ್ನು ಸ್ವಾಗತಿಸುತ್ತಾ ಶೀಘ್ರವೇ ಕುಟುಂಬಕ್ಕೆ ಪರಿಹಾರ ಸಿಗಲಿ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ವಿನಂತಿಸುತ್ತದೆ.
Karnataka Newspaper Distributors Federation ಮೃತರ ಕುಟುಂಬಕ್ಕೆ ಪರಿಹಾರ ನೀಡದ ವಾಯುವ್ಯ ಸಾರಿಗೆ ಸಂಸ್ಥೆ ಬಸ್ ಜಪ್ತಿ. ಪತ್ರಿಕಾ ವಿತರಕರ ಸಂಘದ ಪ್ರತಿಕ್ರಿಯೆ
Date: