Wednesday, March 25, 2026
Wednesday, March 25, 2026

S.N Channabasappa ಶಾಸಕರ ಅಮಾನತು, ವಿಪಕ್ಷಗಳ ಧ್ವನಿ ಹತ್ತಿಕ್ಕುವ ಹುನ್ನಾರ- ಅಮಾನಾತಾದ ಶಾಸಕ ಚೆನ್ನಿ ಹೇಳಿಕೆ

Date:

S.N Channabasappa ಪ್ರಜಾಪ್ರಭುತ್ವದ ಹೆಸರಿನಲ್ಲಿ ‘ತುಘಲಕ್‌’ ಸರ್ಕಾರ ನಡೆಯುತ್ತಿರುವ ದಬ್ಬಾಳಿಕೆಗೆ ನಮ್ಮ ಧಿಕ್ಕಾರ!!! ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಬಾರದು ಎಂಬುದು ಭಾರತ ಸಂವಿಧಾನದ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸ್ಪಷ್ಟ ನಿಲುವು. ಆದರೂ, ಕಾಂಗ್ರೆಸ್ ಸರ್ಕಾರ ತನ್ನ ಮತ ಬ್ಯಾಂಕ್‌ ರಾಜಕೀಯದ ಅನುಕೂಲಕ್ಕಾಗಿ ತುಷ್ಟೀಕರಣ ರಾಜಕಾರಣ ನಡೆಸುತ್ತಾ, ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಹಂತದಲ್ಲೂ ಮೀಸಲಾತಿ ನೀಡುವ ಅಸಂವಿಧಾನಿಕ ನಡೆ ಕೈಗೊಂಡಿರುವುದು ತೀವ್ರ ಖಂಡನೀಯ! ಇದು ದೇಶದ ಸಮಾನತೆ ತತ್ವದ ವಿರುದ್ಧವಾಗಿದ್ದು, ಸಮಾಜದಲ್ಲಿ ಭಿನ್ನತೆ ಉಂಟುಮಾಡಿ ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡುವ ದಿಕ್ಕಿನ ಹೆಜ್ಜೆಯಾಗಿದೆ.

ಇದೆಲ್ಲದರ ಜೊತೆಗೆ, 40ಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರ ಮೇಲೆ ಹನಿಟ್ರ್ಯಾಪ್ ಪ್ರಕರಣಗಳ ಆರೋಪಗಳು ಕೇಳಿ ಬಂದಿದ್ದು, ಇಂತಹ ಗಂಭೀರ ಪ್ರಕರಣಗಳ ತನಿಖೆಗೆ ಆದ್ಯತೆ ನೀಡದೆ, ಕಾಂಗ್ರೆಸ್ ಸರ್ಕಾರ ಜನರ ಗಮನವನ್ನು ಬೇರೆಡೆ ಹರಿಸುತ್ತಿರುವುದು ಕಾಂಗ್ರೆಸ್ ಪಕ್ಷದ ನೀತಿಯನ್ನು ಎತ್ತಿ ತೋರುತ್ತಿದೆ.

ಸಿದ್ಧರಾಮಯ್ಯ ಸರ್ಕಾರ ನಡೆಸುತ್ತಿರುವ ಅನ್ಯಾಯ ಮತ್ತು ಅಕ್ರಮಗಳನ್ನು ವಿರೋಧಿಸಿ, ಸಿಬಿಐ ತನಿಖೆಗೆ ಒತ್ತಾಯಿಸಿದ್ದ ವಿರೋಧಪಕ್ಷದ 18 ಶಾಸಕರನ್ನು 6 ತಿಂಗಳ ಕಾಲ ಅಮಾನತು ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ ಕೇವಲ ವಿರೋಧ ಪಕ್ಷದ ಧ್ವನಿಯನ್ನು ಅಡಗಿಸುತ್ತಿರುವುದಲ್ಲದೆ, ಪ್ರಜಾಪ್ರಭುತ್ವದ ಮೂಲ ತತ್ವಗಳನ್ನೇ ತುಳಿಯುತ್ತಿದೆ. ಈ ಕ್ರಮ ಟಿಪ್ಪು ಸರ್ಕಾರದ ಸರ್ವಾಧಿಕಾರಿ ನಿಲುವನ್ನು ನೆನಪಿಸುತ್ತಿದೆ.

S.N Channabasappa ಈ ಅಮಾನತನ್ನು ಪಕ್ಷಪಾತಿ ವಿಧಾನಸಭೆಯ ಸ್ಪೀಕರ್, ಶ್ರೀ ಯು.ಟಿ. ಖಾದರ್ ತಕ್ಷಣವೇ ಹಿಂಪಡೆಯಬೇಕು, ಇಲ್ಲದಿದ್ದರೆ ಸೋ ಕಾಲ್ಡ್ ಬಂಧುಗಳ ಬಕೆಟ್ ಹಿಡಿಯುತ್ತಿರುವ ಸರ್ಕಾರದ ವಿರುದ್ಧ ಹಾಗೂ ಸಮಾಜದ ನ್ಯಾಯ ಮತ್ತು ಶಾಸಕರ-ವಿಧಾನಸಭೆಯ ಘನತೆಯನ್ನು ಮತ್ತು ರಾಜ್ಯದ ಮರ್ಯಾದೆಯನ್ನು ಉಳಿಸುವ ನಿಟ್ಟಿನಲ್ಲಿ ನಮ್ಮ ಹೋರಾಟ ಸದಾ ಮುಂದುವರಿಯುತ್ತದೆ…!

ಎಸ್ ಎನ್ ಚನ್ನಬಸಪ್ಪ (ಚೆನ್ನಿ)
ಶಾಸಕರು, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...