Thursday, March 19, 2026
Thursday, March 19, 2026

Thawar Chand Gehlot ರಾಜಭವನದಲ್ಲಿ ಸಂಭ್ರಮಿಸಿದ “ಚಂದನ” ದ ಚೈತ್ರಾಂಜಲಿ, ಯುಗಾದಿ ಶುಭಾಶಯ ಕೋರಿದ ರಾಜ್ಯಪಾಲ‌ ಗೆಹ್ಲೋಟ್

Date:

Thawar Chand Gehlot ಬೆಂಗಳೂರು 22.03.2025: ಹಿಂದುಗಳ ಹೊಸ ವರ್ಷವೆಂದೇ ಕರೆಯಲ್ಪಡುವ ಯುಗಾದಿ ಹಬ್ಬವನ್ನು ಚೈತ್ರ ಮಾಸದಲ್ಲಿ ಆಚರಿಸಲಾಗುವುದು. ಚೈತ್ರ ಮಾಸದಲ್ಲಿ ಎಲ್ಲಾ‌ ಮರಗಳು ತಮ್ಮ ಹಳೆಯ ತನವನ್ನು ಕಳೆದುಕೊಂಡು ಹೊಸ‌ ಚಿಗುರಿನೊಂದಿಗೆ ಯುಗಾದಿ ಹಬ್ಬವನ್ನು ಬರ ಮಾಡಿಕೊಳ್ಳುವುದು. ಯುಗಾದಿಯ ಆಗಮನದ ದಿನ ಎಲ್ಲೆಲ್ಲೂ ಸಿಹಿ-ಕಹಿ ಸವಿದು ಒಂದಾಗಿ ಮುನ್ನಡೆಯೋಣ ಎಂಬ ಸಂದೇಶದೊಂದಿಗೆ ದೂರದರ್ಶನ ಕೇಂದ್ರ, ಬೆಂಗಳೂರು ಚಂದನ ವಾಹಿನಿ ವತಿಯಿಂದ ರಾಜಭವನದ ಗಾಜಿನಮನಯಲ್ಲಿ ಆಯೋಜಿಸಿದ್ದ ಯುಗಾದಿಯ ವಿಶೇಷ “ಚೈತ್ರಾಂಜಲಿ” ಕಾರ್ಯಕ್ರಮವನ್ನು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಉದ್ಘಾಟಿಸಿದರು.

“ಎಲ್ಲರಿಗೂ ನಮಸ್ಕಾರ, ತಮ್ಮೆಲ್ಲರನ್ನು ಹಾರ್ದಿಕವಾಗಿ ಸ್ವಾಗತಿಸುತ್ತೇನೆ, ಸರ್ವರಿಗೂ ಯುಗಾದಿ ಹಬ್ಬದ ಶುಭಾಶಯಗಳು” ಎಂದು ಕನ್ನಡ ಭಾಷೆಯಲ್ಲಿ ಶುಭ ಕೋರಿದ ಗೌರವಾನ್ವಿತ ರಾಜ್ಯಪಾಲರು, ಇಡೀ ದೇಶದಲ್ಲಿ ಮಾರ್ಚ್ 30ರಂದು ಹೊಸ ವರ್ಷ ಆರಂಭವಾಗಲಿದೆ. ಯುಗಾದಿಯ ಹಬ್ಬ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ದೂರದರ್ಶನದ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ದೇಶದ ಸಂಸ್ಕೃತಿ, ದೇಶದ ಧರ್ಮಾ, ದೇಶದ ಸಭ್ಯತೆ, ದೇಶದ ಹಬ್ಬಗಳ ಬಗ್ಗೆ ಇಂದಿನ ಯುವಪೀಳಿಗೆಗೆ ಮನದಟ್ಟು ಮಾಡಿಕೊಡಲು ಇಂತಹ ಕಾರ್ಯಕ್ರಮಗಳ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ದೂರದರ್ಶನ ಕೇಂದ್ರ ಚಂದನ ವಾಹಿನಿ ಈ ಕಾರ್ಯಕ್ರಮವನ್ನು ಆಯೋಜಿಸಿರುವುದು ಶ್ಲಾಘನೀಯ. ಈ ಸಂಭ್ರಮದಲ್ಲಿ ಭಾಗಿಯಾಗಿರುವ ಸಿನೆಮಾ ತಾರೆಯರು, ಗಣ್ಯರು, ಅಧಿಕಾರಿಗಳು, ಮಕ್ಕಳು, ಯುವಕರು ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಈ ಹೊಸ ವರ್ಷವು ಎಲ್ಲರಿಗೂ ಸಂತೋಷ, ಸಮೃದ್ಧಿ, ಹೊಸತನ್ನು ತರಲಿ ಎಂದು ಪ್ರಾರ್ಥಿಸುತ್ತೇನೆಂದರು.

ಮನಸೂರೆಗೊಳಿಸಿದ ನೃತ್ಯ, ಗಾನ ಸುಧೆ
ರಾಷ್ಟ್ರಗೀತೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಭಾಗ್ಯಶ್ರೀ ಅವರು ಪ್ರಾರ್ಥನೆ ಸಲ್ಲಿಸಿದರು. ಅದೇ ಸಮಯಲ್ಲಿ ಕಲಾವಿದೆ ವಿಜಯಶ್ರೀ ಅವರಿಂದ ಪ್ರಕೃತಿ ಮಾತೆಯ ಚಿತ್ತಾರ ಮೂಡಿಬಂತು. ನಂತರ ಶ್ರೀ ಸುಂದರೇಶ್.ಸಿ ಮತ್ತು ತಂಡದವರು ಡೊಳ್ಳು ಕುಣಿತ, ಕಂಸಾಳೆ, ವೀರಗಾಸೆ, ನಂದಿಕೋಲು ಕುಣಿತವನ್ನೊಳಗೊಂಡ ಜಾನಪದ ನೃತ್ಯ ನೆರದಿದ್ದವರ ಮನಸೂರೆಗೊಳಿಸಿತು.
ನಂತರ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರು, ಸಿನೆಮಾ ನಟ ಹಾಗೂ ನಿರ್ದೇಶಕರಾದ ಎಸ್, ನಾರಾಯಣ್ ಅವರು ಯುಗಾದಿ ಹಬ್ಬದ ಆಚರಣೆ ಬಗ್ಗೆ ಹಳೆಯದನ್ನು ಮೆಲುಕು ಹಾಕಿ, ಸಂಬಂಧ ಮಹತ್ವದ ಮತ್ತು ಅನುಭವದ ಬಗ್ಗೆ ಹಂಚಿಕೊಂಡರು. ನಟಿ ಅನುಪ್ರಭಾಕರ್, ನಟಿ ಸುಧಾ ಬೆಳವಾಡಿ, ಸಂಯುಕ್ತ ಬೆಳವಾಡಿ ಸೇರಿದಂತೆ ಮುಂತಾದ ಗಣ್ಯರು ಯುಗಾದಿ ಹಬ್ಬದ ಶುಭಾಶಯಗಳನ್ನು ಕೋರಿ, ವಿಶೇಷ ಕಾರ್ಯಕ್ರಮ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

Thawar Chand Gehlot ನಂತರ ಶ್ರೀ ಪಂಚಮ್ ಹಳಿಬಂಡಿ ಮತ್ತು ತಂಡದವರು ಯುಗಾದಿ ಕುರಿತು ರೆಟ್ರೋ ಟು ಮೆಟ್ರೋ ಎಂಬ ಶೈಲಿಯಲ್ಲಿ ಕನ್ನಡ ಹಾಡುಗಳ ಮಿಶ್ರಣದಲ್ಲಿ ಗೀತಗುಚ್ಛ ಪ್ರಸ್ತುತಿ ಪಡಿಸಿದರು. “ಎಲ್ಲೆಲ್ಲೂ ಹಬ್ಬ ಹಬ್ಬ ಬಂತು ಯುಗಾದಿ ಹಬ್ಬ”, “ಯುಗಾ ಯುಗಾದಿ ಕಳೆದರೂ” ಈ ಹಸಿರ ಸಿರಿಯಲಿ, ಹೊಸಬೆಳಕು ಮೂಡುತಿದೆ, ನೇಸರ ನೋಡು, ದೀಪದಿಂದ ದೀಪವ, ಇಂದು ಬಾನೆಗೆಲ್ಲ ಹಬ್ಬ, ಸೇರಿದಂತೆ ಅನೇಕ ಗೀತೆಗೆಳು ಸುಮಧುರವಾಗಿ ಮೂಡಿಬಂದು, ನೆರೆದಿದ್ದವರು ಚಪ್ಪಾಳೆ ಮೂಲಕ ಹುರಿದುಂಬಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...