Monday, December 15, 2025
Monday, December 15, 2025

HD Kumaraswamy ಮುಸ್ಲೀಂ ಮೀಸಲಾತಿ ವಿರುದ್ಧ ರಾಜ್ಯ ಬಿಜೆಪಿಯೊಂದಿಗೆ ಭಿನಾಭಿಪ್ರಾಯವಿಲ್ಲ- ಸಚಿವ ಎಚ್.ಡಿ.ಕುಮಾರಸ್ವಾಮಿ

Date:

HD Kumaraswamy ಮುಸ್ಲಿಮರಿಗೆ ಕಾಂಗ್ರೆಸ್ ಸರಕಾರ 4% ಗುತ್ತಿಗೆ ಮೀಸಲಾತಿ ನೀಡಿರುವುದರ ವಿರುದ್ಧದ ಹೋರಾಟದಲ್ಲಿ ರಾಜ್ಯ ಜೆಡಿಎಸ್ ಮತ್ತು ರಾಜ್ಯ‌ ಬಿಜೆಪಿ ನಡುವೆ ಹೊಂದಾಣಿಕೆ ಇಲ್ಲ, ಗೊಂದಲವಿದೆ ಎನ್ನುವುದು ಸತ್ಯಕ್ಕೆ ದೂರ. ಕೆಲ ಪತ್ರಿಕೆ ಮತ್ತು ಸುದ್ದಿವಾಹಿನಿಗಳಲ್ಲಿ ವರದಿಯಾಗಿರುವ ವರದಿಗಳು ಸತ್ಯಕ್ಕೆ ದೂರ.

ವಿಧಾನಮಂಡಲ ಅಧಿವೇಶನ ಆರಂಭಕ್ಕೆ ಮೊದಲೇ ಬೆಂಗಳೂರಿನಲ್ಲಿ #NDA ‘ಸಮನ್ವಯ ಸಮಿತಿ’ ಸಭೆ ನಡೆದು ಎಲ್ಲಾ ವಿಚಾರಗಳನ್ನೂ ಸಮಗ್ರವಾಗಿ ಚರ್ಚಿಸಲಾಗಿದೆ. ಸರಕಾರದ ವಿರುದ್ಧ ಹೋರಾಟದ ರೂಪುರೇಷೆ ರೂಪಿಸಲಾಗಿತ್ತು. ಆ ಸಭೆಯಲ್ಲಿ ಸ್ವತಃ ನಾನೂ ಭಾಗವಹಿಸಿದ್ದೆ.

ಕಾಂಗ್ರೆಸ್ ಸರಕಾರವು ಕೇವಲ ಚುನಾವಣಾ ಸ್ವಾರ್ಥಕ್ಕೆ, ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ‘ಸಾಮಾಜಿಕ ನ್ಯಾಯದ ಆದರ್ಶ ಪರಿಕಲ್ಪನೆ’ಯಾದ ಮೀಸಲಾತಿ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ. ಮೀಸಲಾತಿಯನ್ನೇ ಓಲೈಕೆ ಅಸ್ತ್ರವನ್ನಾಗಿ ಮಾಡಿಕೊಂಡು ರಾಜ್ಯದ ಜನತೆಯ ದಿಕ್ಕು ತಪ್ಪಿಸುತ್ತಿದೆ. ರಾಷ್ಟ್ರದ ಉದ್ದಗಲಕ್ಕೂ ಕಾಂಗ್ರೆಸ್‌ ಮೀಸಲು ಅರಾಜಕತೆ ಸೃಷ್ಟಿಸುತ್ತಿದೆ.

ಜೆಡಿಎಸ್ – ಬಿಜೆಪಿ ಪಕ್ಷಗಳು ಈಗಾಗಲೇ ಒಟ್ಟಾಗಿ ಅನೇಕ ಜನಪರ ಹೋರಾಟಗಳಲ್ಲಿ ಭಾಗಿಯಾಗಿವೆ, ಮುಂದೆಯೂ ಹೋರಾಡುತ್ತವೆ. ಈ ಬಗ್ಗೆ ರಾಜಿ ಪ್ರಶ್ನೆಯೇ ಇಲ್ಲ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ದುರ್ಬಲವಾಗಿರುವ ಎಲ್ಲಾ ಸಮುದಾಯಗಳಿಗೆ ಸಮಾನ ಅವಕಾಶಗಳು, ಸೌಲಭ್ಯಗಳು ಸಿಗಬೇಕು. ಆದರೆ, ಒಂದು ನಿರ್ದಿಷ್ಟ ಸಮುದಾಯದ ತುಷ್ಟೀಕರಣ, ಬಹು ಸಮುದಾಯಗಳ ತುಚ್ಚೀಕರಣ ನ್ಯಾಯ ಸಮ್ಮತವಲ್ಲ. ಇದು ಸಂವಿಧಾನಕ್ಕೆ ಎಸಗುವ ಅಪಚಾರ.

HD Kumaraswamy ಮೀಸಲು ಧರ್ಮಾಧಾರಿತ ಅಲ್ಲ. ಅದು ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ನಿಂತಿದೆ. ನಿಂತಿರಬೇಕು ಎನ್ನುವುದು ನಮ್ಮ ಜೆಡಿಎಸ್ ಅಚಲ ನಿಲುವು‌ ಎಂದು ಕೇಂದ್ರ ಸಚಿವ ಮತ್ತು ರಾಜ್ಯ ಜೆಡಿಎಸ್ ಪ್ರಮುಖ‌‌ ಎಚ್.ಡಿ.ಕುಮಾರ ಸ್ವಾಮಿ‌ ತಮ್ಮ‌ಸಾಮಾಜಿಕ‌‌ ಜಾಲತಾಣದಲ್ಲಿ‌ ಹೇಳಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...