Sunday, August 2, 2026
Sunday, August 2, 2026

HD Kumaraswamy ಮುಸ್ಲೀಂ ಮೀಸಲಾತಿ ವಿರುದ್ಧ ರಾಜ್ಯ ಬಿಜೆಪಿಯೊಂದಿಗೆ ಭಿನಾಭಿಪ್ರಾಯವಿಲ್ಲ- ಸಚಿವ ಎಚ್.ಡಿ.ಕುಮಾರಸ್ವಾಮಿ

Date:

HD Kumaraswamy ಮುಸ್ಲಿಮರಿಗೆ ಕಾಂಗ್ರೆಸ್ ಸರಕಾರ 4% ಗುತ್ತಿಗೆ ಮೀಸಲಾತಿ ನೀಡಿರುವುದರ ವಿರುದ್ಧದ ಹೋರಾಟದಲ್ಲಿ ರಾಜ್ಯ ಜೆಡಿಎಸ್ ಮತ್ತು ರಾಜ್ಯ‌ ಬಿಜೆಪಿ ನಡುವೆ ಹೊಂದಾಣಿಕೆ ಇಲ್ಲ, ಗೊಂದಲವಿದೆ ಎನ್ನುವುದು ಸತ್ಯಕ್ಕೆ ದೂರ. ಕೆಲ ಪತ್ರಿಕೆ ಮತ್ತು ಸುದ್ದಿವಾಹಿನಿಗಳಲ್ಲಿ ವರದಿಯಾಗಿರುವ ವರದಿಗಳು ಸತ್ಯಕ್ಕೆ ದೂರ.

ವಿಧಾನಮಂಡಲ ಅಧಿವೇಶನ ಆರಂಭಕ್ಕೆ ಮೊದಲೇ ಬೆಂಗಳೂರಿನಲ್ಲಿ #NDA ‘ಸಮನ್ವಯ ಸಮಿತಿ’ ಸಭೆ ನಡೆದು ಎಲ್ಲಾ ವಿಚಾರಗಳನ್ನೂ ಸಮಗ್ರವಾಗಿ ಚರ್ಚಿಸಲಾಗಿದೆ. ಸರಕಾರದ ವಿರುದ್ಧ ಹೋರಾಟದ ರೂಪುರೇಷೆ ರೂಪಿಸಲಾಗಿತ್ತು. ಆ ಸಭೆಯಲ್ಲಿ ಸ್ವತಃ ನಾನೂ ಭಾಗವಹಿಸಿದ್ದೆ.

ಕಾಂಗ್ರೆಸ್ ಸರಕಾರವು ಕೇವಲ ಚುನಾವಣಾ ಸ್ವಾರ್ಥಕ್ಕೆ, ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ‘ಸಾಮಾಜಿಕ ನ್ಯಾಯದ ಆದರ್ಶ ಪರಿಕಲ್ಪನೆ’ಯಾದ ಮೀಸಲಾತಿ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ. ಮೀಸಲಾತಿಯನ್ನೇ ಓಲೈಕೆ ಅಸ್ತ್ರವನ್ನಾಗಿ ಮಾಡಿಕೊಂಡು ರಾಜ್ಯದ ಜನತೆಯ ದಿಕ್ಕು ತಪ್ಪಿಸುತ್ತಿದೆ. ರಾಷ್ಟ್ರದ ಉದ್ದಗಲಕ್ಕೂ ಕಾಂಗ್ರೆಸ್‌ ಮೀಸಲು ಅರಾಜಕತೆ ಸೃಷ್ಟಿಸುತ್ತಿದೆ.

ಜೆಡಿಎಸ್ – ಬಿಜೆಪಿ ಪಕ್ಷಗಳು ಈಗಾಗಲೇ ಒಟ್ಟಾಗಿ ಅನೇಕ ಜನಪರ ಹೋರಾಟಗಳಲ್ಲಿ ಭಾಗಿಯಾಗಿವೆ, ಮುಂದೆಯೂ ಹೋರಾಡುತ್ತವೆ. ಈ ಬಗ್ಗೆ ರಾಜಿ ಪ್ರಶ್ನೆಯೇ ಇಲ್ಲ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ದುರ್ಬಲವಾಗಿರುವ ಎಲ್ಲಾ ಸಮುದಾಯಗಳಿಗೆ ಸಮಾನ ಅವಕಾಶಗಳು, ಸೌಲಭ್ಯಗಳು ಸಿಗಬೇಕು. ಆದರೆ, ಒಂದು ನಿರ್ದಿಷ್ಟ ಸಮುದಾಯದ ತುಷ್ಟೀಕರಣ, ಬಹು ಸಮುದಾಯಗಳ ತುಚ್ಚೀಕರಣ ನ್ಯಾಯ ಸಮ್ಮತವಲ್ಲ. ಇದು ಸಂವಿಧಾನಕ್ಕೆ ಎಸಗುವ ಅಪಚಾರ.

HD Kumaraswamy ಮೀಸಲು ಧರ್ಮಾಧಾರಿತ ಅಲ್ಲ. ಅದು ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ನಿಂತಿದೆ. ನಿಂತಿರಬೇಕು ಎನ್ನುವುದು ನಮ್ಮ ಜೆಡಿಎಸ್ ಅಚಲ ನಿಲುವು‌ ಎಂದು ಕೇಂದ್ರ ಸಚಿವ ಮತ್ತು ರಾಜ್ಯ ಜೆಡಿಎಸ್ ಪ್ರಮುಖ‌‌ ಎಚ್.ಡಿ.ಕುಮಾರ ಸ್ವಾಮಿ‌ ತಮ್ಮ‌ಸಾಮಾಜಿಕ‌‌ ಜಾಲತಾಣದಲ್ಲಿ‌ ಹೇಳಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...