Thursday, March 19, 2026
Thursday, March 19, 2026

Adichunchanagiri Education Trust ವಿದ್ಯಾರ್ಥಿಗಳಲ್ಲಿನ ಪ್ರತಿಭೆ ಅಭಿವ್ಯಕ್ತಿಗೆ ಬೇಸಿಗೆ ಶಿಬಿರಗಳು ಸಹಕಾರಿ- ಶ್ರೀಸಾಯಿನಾಥಶ್ರೀ

Date:

Adichunchanagiri Education Trust ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಶಾಖೆಯ ಗುರುಪುರದ ಬಿಜಿಎಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಿಣ್ಣರ ಬೇಸಿಗೆ ಶಿಬಿರವನ್ನು ಶ್ರೀ ಆದಿಚುಂಚನಗಿರಿ ಶಿವಮೊಗ್ಗ ಶಾಖೆಯ ಪೂಜ್ಯ ಶ್ರೀ ಶ್ರೀ ಸಾಯಿನಾಥ ಸ್ವಾಮೀಜಿ ಉದ್ಘಾಟಿಸಿ ಆಶೀರ್ವಚನ ನೀಡಿದರು, ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ಪ್ರತಿಭೆ ಇರುತ್ತದೆ,ಪ್ರತಿಭೆಗೆ ತಕ್ಕ ಪ್ರೋತ್ಸಾಹ ದೊರೆತಲ್ಲಿ, ಬೇಸಿಗೆ ಶಿಬಿರದಂತಹ ಕಾರ್ಯಕ್ರಮದಲ್ಲಿ ತಮ್ಮ ಪ್ರತಿಭೆ ತೋರ್ಪಡಿಸಲು ಇಂತಹ ಕಾರ್ಯಕ್ರಮಗಳು ಸಹ ಕಾರಿಯಾಗುತ್ತವೆ ಎಂದರು. ಕಾರ್ಯಕ್ರಮದಲ್ಲಿ ಮಕ್ಕಳದೇ ಕಲರವ:
ಈ ಕಾರ್ಯಕ್ರಮದಲ್ಲಿ ಮಕ್ಕಳ ಉಡುಗೆ-ತೊಡುಗೆ ಹಾವಾ-ಭಾವ, ಹೊಸದೊಂದು ಲೋಕವನ್ನು, ಮಕ್ಕಳ ಪ್ರಪಂಚವನ್ನು ತೆರೆದಿಟ್ಟಿತ್ತು.
Adichunchanagiri Education Trust ಗುರುಪುರದ ಬಿಜಿಎಸ್ ಶಾಲೆಯ ನರ್ಸರಿ ಮತ್ತು ಪ್ರಾಥಮಿಕ ಶಾಲೆಯ ಎಲ್ಲಾ ಮಕ್ಕಳಿಗೆ ವಿಶೇಷ ಬೇಸಿಗೆ ಶಿಬಿರ ಆಯೋಜಿಸಲಾಗಿದ್ದು, ಅಲ್ಲಿ ಚಿತ್ರಕಲೆ, ಸಂಗೀತ-ನೃತ್ಯ ವೇದಿಕ್ ಮ್ಯಾಥೆಮೇಟಿಕ್ಸ್, ಯೋಗ,ಧ್ಯಾನ, ಕ್ಯಾಲಿ ಗ್ರಫಿ ಬರವಣಿಗೆಗಳು,ಒಂಟೆ, ಎತ್ತಿನಗಾಡಿ, ಈಜು, ದೇಶೀಯ ಕ್ರೀಡೆಗಳನ್ನು ಒಳಗೊಂಡ ಮಕ್ಕಳ ಕಲಿಕೆಯನ್ನು ವೀಕ್ಷಿಸಿದ ಶ್ರೀಗಳು, ಕಾರ್ಯಕ್ರಮ ರೂಪಿಸಿದ ಬಿಜಿಎಸ್ ಶಿಕ್ಷಕ ವೃಂದವನ್ನು ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿನಾಸಂ ನ ಇಂದು ಡಿ., ಶಾಲಾ ಕಾಲೇಜಿನ ಪ್ರಾಂಶುಪಾಲರಾದ ಸುರೇಶ ಎಸ್. ಹೆಚ್. ಶಿಕ್ಷಕರು, ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು, ಪೋಷಕರು ಇನ್ನೂ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...