Wednesday, February 4, 2026
Wednesday, February 4, 2026

Department of School Education & Literacy  ಬಾರೆಹಳ್ಳ ₹3 ಕೋಟಿಯ ತುಂಗಾ ಮೇಲ್ದಂಡೆ ಕಾಮಗಾರಿ ಆರು ತಿಂಗಳಲ್ಲಿ ಪೂರ್ಣಗೊಳಿಸಲು ಸೂಚನೆ- ಮಧು ಬಂಗಾರಪ್ಪ

Date:

Department of School Education & Literacy  ಹಲವು ದಶಕಗಳಿಂದ ಅಭಿವೃದ್ಧಿ ಕಾಣದೇ ಉಳಿದಿದ್ದ ಹಾಗೂ ಶರಾವತಿ ಮುಳುಗಡೆ ಸಂತ್ರಸ್ಥರೇ ಹೆಚ್ಚಿನ ಸಂಖ್ಯೆಯಲ್ಲಿ ವಾಸವಾಗಿರುವ ಪುರದಾಳು ಗ್ರಾಮದ ಬಾರೇಹಳ್ಳ ಜಲಾಶಯದ ಕೋಡಿ ದುರಸ್ತಿ ಮೂರು ಕೋಟಿ ರೂ.ಗಳ ವೆಚ್ಚದ ಕಾಮಗಾರಿಗೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಚಾಲನೆ ನೀಡಿದರು. ಬಾರೇಹಳ್ಳ ಜಲಾಶಯದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಯೋಜನೆಯ ವಿವರ ನೀಡಿದರು.

ಇದರೊಂದಿಗೆ ಹಾಯ್‌ಹೊಳೆಯ ಜಲಾಶಯ ಕಾಮಗಾರಿಯನ್ನು ಮೂರು ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದೆ. ದೇವರಾಜ ಅರಸುರವರು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಈ ಜಲಾಶಯಕ್ಕೆ ಕಾಮಗಾರಿ ನಡೆದಿತ್ತು. ಆ ಅವಧಿಯಿಂದ ಹಲವು ದಶಕಗಳು ಕಳೆದಿದ್ದರೂ ಜಲಾಶಯದ ನಿರ್ವಹಣೆ ಅಥವಾ ಮುಂದುವರೆದ ಕಾಮಗಾರಿ ನಡೆಯದಿರುವುದು ಅತ್ಯಂತ ಬೇಸರದ ಸಂಗತಿಯಾಗಿದೆ ಎಂದ ಅವರು, ತುಂಗಾ ಮೇಲ್ದಂಡೆ ಯೋಜನಾ ಶಾಖೆಯಿಂದ 3 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಮುಂದಿನ ಆರು ತಿಂಗಳ ಅವಧಿಯೊಳಗಾಗಿ ಮುಕ್ತಾಯಗೊಳಿಸಲು ಸೂಚಿಸಲಾಗಿದೆ.

ಮಾಡುವ ಕಾಮಗಾರಿಯೂ ಶಾಶ್ವತವಾಗಿರುವಂತೆ, ಗುಣಮಟ್ಟದ್ದಾಗಿರುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದರು.

ಕಳೆದ ಸಾಲಿನಲ್ಲಿಯೇ ಕೈಗೊಳ್ಳಬೇಕಾಗಿದ್ದ ಕಾಮಗಾರಿ ಕೆಲವು ತಾಂತ್ರಿಕ ಕಾರಣಗಳಿಂದಾಗಿ ವಿಳಂಬವಾಗಿ ಆರಂಭಗೊಳ್ಳುತ್ತಿದೆ. ಈ ಪ್ರದೇಶದ ಜನರ ಕೃಷಿ ಚಟುವಟಿಕೆಗಳಿಗೆ ಅತ್ಯವಶ್ಯಕ ಎಂಬುದನ್ನು ಅರಿತು ಈ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.

ಈ ಭಾಗದ ಜನರಿಗೆ ತುರ್ತು ಅಗತ್ಯವೆನಿಸಬಹುದಾದ ಕೆಲಸ-ಕಾರ್ಯಗಳ ಬಗ್ಗೆ ಮಾಹಿತಿ ನೀಡಿದಲ್ಲಿ ಅವುಗಳನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳುವುದಾಗಿ ಅವರು ಭರವಸೆ ನೀಡಿದರು.

ಈ ಬಾಗದ ಬಹುದಿನಗಳಿಂದ ಇತ್ಯರ್ಥವಾಗದೆ ಉಳಿದಿರುವ ಶರಾವತಿ ಸಂತ್ರಸ್ಥರು ಹಾಗೂ ಬಗರ್‌ಹುಕುಂ ಸಾಗುವಳಿದಾರರ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದು, ಶೀಘ್ರದಲ್ಲಿ ನಿರೀಕ್ಷಿತ ಫಲಿತಾಂಶ ಬರುವ ನಿರೀಕ್ಷೆಯಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ದೇಶದ ಸರ್ವೋಚ್ಚ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಲಾಗಿದ್ದು, ಅದರ ನಿರ್ವಹಣೆಗಾಗಿ ಸಮರ್ಥ ವಕೀಲರೊಬ್ಬರನ್ನು ಸರ್ಕಾರದ ಪರವಾಗಿ ವಾದ ಮಂಡಿಸಲು ನೇಮಿಸಲಾಗಿದೆ. ಅಲ್ಲದೇ ಈ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವೂ ಸಹ ಮಾನವೀಯ ನೆಲೆಯಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಸಮಸ್ಯೆಯನ್ನು ಶಾಶ್ವತ ಪರಿಹಾರಗೊಳಿಸಲು ಯತ್ನಿಸಲಾಗಿದೆ.

ಸದ್ಯದಲ್ಲಿ ಈ ಭಾಗದ ಸರ್ವೇ ಕಾರ್ಯಕ್ಕೆ ಅಧಿಕಾರಿಗಳು ಬಂದಲ್ಲಿ ಅವರಿಗೆ ಎಲ್ಲ ರೀತಿಯ ಸಹಕಾರ ನೀಡುವಂತೆ ಅವರು ಸೂಚಿಸಿದರು.

ಈ ವಿಷಯದಲ್ಲಿ ದೊರೆಯುವ ನ್ಯಾಯಾಲಯದ ತೀರ್ಪಿನಂತೆ ಚಕ್ರಾ, ವರಾಹಿ ಸೇರಿದಂತೆ ವಿವಿಧ ಸಂತ್ರಸ್ಥರಿಗೆ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಸಕಾರಾತ್ಮಕವಾಗಿದ್ದು, ಸಂತ್ರಸ್ತರೂ ಕೂಡ ಸರ್ಕಾರದೊಂದಿಗೆ ತಾಳ್ಮೆಯಿಂದ ವ್ಯವಹರಿಸುವಂತೆ ಮನವಿ ಮಾಡಿದ ಅವರು, ಶೀಘ್ರದಲ್ಲಿ ಸಂತ್ರಸ್ಥರೆಲ್ಲರಿಗೂ ಹಕ್ಕುಪತ್ರ ಕೊಡಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವುದಾಗಿ ಅವರು ತಿಳಿಸಿದರು.

ಸ್ಥಳೀಯ ಜನರ ಅಪೇಕ್ಷೆಯಂತೆ ಅಗತ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಇಲ್ಲಿನ ನಿವಾಸಿಗಳು ದೇವಸ್ಥಾನ, ಸಮುದಾಯಭವನಗಳ ಎಂದು ನಿರ್ಮಾಣಕ್ಕೆ ಸರ್ಕಾರದಿಂದ ಹಣ ಪಡೆಯುವ ಬದಲು ಇಲ್ಲಿನ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಂಕಲ್ಪ ಮಾಡುವಂತೆ, ಆ ಮೂಲಕ ಒಂದು ಸಮುದಾಯ ಸರ್ವಾಂಗೀಣ ವಿಕಾಸಕ್ಕೆ ಮುನ್ನುಡಿ ಬರೆಯುವಂತೆ ಅವರು ಸೂಚಿಸಿದರು.

ಕಳೆದ ಎರಡು ವರ್ಷಗಳ ಅತ್ಯಲ್ಪ ಅವಧಿಯಲ್ಲಿ ಅನೇಕ ಮಹತ್ವದ ಯೋಜನೆಗಳನ್ನು ರೂಪಿಸಿ, ಅನುಷ್ಟಾನಕ್ಕೆ ತರಲಾಗಿದೆ. ಸರ್ಕಾರದ ಮುಂದಿನ ಅವಧಿಯಲ್ಲಿ ಇನ್ನಷ್ಟು ರಚನಾತ್ಮಕ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು

ವಿಶೇಷವಾಗಿ ಶಿಕ್ಷಣ ಇಲಾಖೆಯು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಮಹತ್ವದ ನಿರ್ಣಯ ಕೈಗೊಳ್ಳಲಿದೆ. ಪೋಷಕರು ತಮ್ಮ ಮಕ್ಕಳನ್ನು ದಿನನಿತ್ಯ ಶಾಲೆಗೆ ಕಳುಹಿಸಿಕೊಡಬೇಕಲ್ಲದೇ ಅವರನ್ನು ಶಿಕ್ಷಣದ ಮುಖ್ಯವಾಹಿನಿಯಿಂದ ತಪ್ಪಿಸಿಕೊಳ್ಳದಂತೆ ಎಚ್ಚರಿಕೆ ವಹಿಸಬೇಕು ಎಂದ ಅವರು ಮುಂದಿನ ಶೈಕ್ಷಣಿಕ ಸಾಲಿನಿಂದ ಮಕ್ಕಳ ಹಾಜರಾತಿಗೆ ಅತ್ಯಾಧುನಿಕ (ಚಹರೆ ಗುರುತಿಸುವ ಹಾಜರಾತಿ ವ್ಯವಸ್ಥೆ) ತಂತ್ರಜ್ಞಾನವನ್ನು ಬಳಸಿಕೊಳ್ಳಲು ಉದ್ದೇಶಿಸಲಾಗಿದೆ.

ಇದು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗಲಿದೆ ಎಂದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶ್ರೀಮತಿ ಶಾರದಾ ಪೂರ್ಯಾನಾಯ್ಕ ಅವರು ಮಾತನಾಡಿ, ರಾಜ್ಯದ ಅನೇಕ ಭಾಗಗಳಿಗೆ ಬೆಳಕು ನೀಡುವ ಯೋಜನೆಗಾಗಿ ತಮ್ಮೆಲ್ಲವನ್ನು ಕಳೆದುಕೊಂಡು ಕತ್ತಲಲ್ಲಿರುವ ಸಂತ್ರಸ್ಥರ ನೆರವಿಗೆ ಅಂದಿನ ಮಾಜಿ ಮುಖ್ಯಮಂತ್ರಿಗಳಾಗಿದ್ದ ದಿ.ಎಸ್.ಬಂಗಾರಪ್ಪನವರು ಹಾಗೂ ಸಚಿವರಾಗಿದ್ದ ಕಾಗೋಡು ತಿಮ್ಮಪ್ಪನವರು ನಿರಂತರವಾಗಿ ಶ್ರಮಿಸಿರುವುದನ್ನು ನೆನಪಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯ ಬೋವಿ ಅಭಿವೃದ್ಧಿ ನಿಗಮದ ಅ‍ಧ್ಯಕ್ಷ ರವಿಕುಮಾರ್‌, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಚಂದ್ರಭೂಪಾಲ್‌, ಗ್ರಾ.ಪಂ.ಅ‍ಧ್ಯಕ್ಷೆ ಶ್ರೀಮತಿ ನಾಗವೇಣಿ, ಗ್ರಾ.ಫಂ. ಸದಸ್ಯರು ಸೇರಿದಂತೆ ಹಲವು ಗಣ್ಯರು, ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...