Wednesday, March 25, 2026
Wednesday, March 25, 2026

ಶೀಘ್ರ ಬಾಡಿಗೆ ಕರಾರನ್ನ ನವೀಕರಣಗೊಳಿಸಿ- ಪಿ.ಮಂಜುನಾಥ್

Date:

ಶಿವಮೊಗ್ಗ ನಗರದ ಬಸ್ ನಿಲ್ದಾಣದ ಅವರಣದಲ್ಲಿರುವ ಅಂಗಡಿ ಮಳಿಗೆಗಳ ಬಾಡಿಗೆ ಕರಾರು ನವೀಕರಣಗೊಳಿಸುವಂತೆ ಖಾಸಗಿ ಬಸ್ ನಿಲ್ದಾಣ ಅಂಗಡಿ ವರ್ತಕರ ಸಂಘದ ಅಧ್ಯಕ್ಷರಾದ ಪಿ.ಮಂಜುನಾಥ್ ಒತ್ತಾಯಿಸಿದರು.
ಕರ್ನಾಟಕ ಸರ್ಕಾರದ ಸುತ್ತೋಲೆ ಕ್ರ.ಸಂ/ನಆಈ/೨೨೧/ಜಿ.ಇ.ಎಲ್‌ಎಲ್/2009 ದಿನಾಂಕ:26-10-2009 ರಿತ್ಯ ದಿನಾಂಕ : 06-01-2011 ರ ಗುರುವಾರದಂದು ನಡೆದ ಸಭಾ ನಡವಳಿಯ ಅನುಸಾರ ಪ್ರತಿ 12 ವರ್ಷಗಳ ಅಧಿಗೆ ಪ್ರತಿ ೩ ವರ್ಷಗಳಿಗೊಮ್ಮೆ ಕರಾರು ಪತ್ರ ನವೀಕರಣಗೊಳ್ಳಬೇಕಾಗಿರುತ್ತದೆ. ಆದರೆ ಸುಮಾರು ಎರಡು ವರ್ಷದಿಂದ ಬಾಡಿಗೆ ಕರಾರು ನವೀಕರಣಗೊಳಿಸಿದೆ ಇರುವುದು ನಮಗೆ ತೊಂದ್ರೆಯಾಗುತ್ತಿದೆ ಎಂದು ಆರೋಪಿಸಿದರು.
ಕರಾರು ನವೀಕರಣಗೊಂಡರೇ ಸರ್ಕಾರಿ ಕಛೇರಿಗಳಲ್ಲಿ ಹಣಕಾಸು ಸಂಸ್ಥೆಗಳಲ್ಲಿ/ಬ್ಯಾಂಕ್ ಮತ್ತು ಸಹಕಾರ ಸಂಘಗಳಲ್ಲಿ ವ್ಯವಹಾರ ಮಾಡಲು ಅನುಕೂಲವಾಗುತ್ತದೆ. ಇಲ್ಲವೆಂದರೇ ಯಾರು ಕೂಡ ನಮ್ಮಲ್ಲಿ ಹಣದ ವ್ಯವಹಾರನ್ನು ಮಾಡುವುದಿಲ್ಲ. ಇದ್ದರಿಂದ ನಮಗೆ ದಿನನಿತ್ಯ ಹಲವಾರು ಸಾಮಾಗ್ರಿಗಳನ್ನು ತಂದು ಹೂಡಿಕೆ ಮಾಡಲು ಅನಾನೂಕೂಲವಾಗುತ್ತದೆ ಎಂದರು.
ಶೀಘ್ರದಲ್ಲಿ ಕರಾರನ್ನು ನವೀಕರಣಗೊಳಿಸಿ ನಮ್ಮ ವ್ಯಾಪಾರ ವಹಿವಾಟಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಯುಕ್ತರಿಗೆ ಒಂದು ತಿಂಗಳ ಹಿಂದೆಯೇ ಮನವಿ ಸಲ್ಲಿಸಲಾಗಿದೆ. ಆದರೇ ಆಯುಕ್ತರು ಏಕೋ ಈ ಮಳಿಗೆ ಕರಾರು ನವೀಕರಣಗೊಳಿಸಲು ಅಸಡ್ಡೆ ತೋರುತ್ತಿದ್ದಾರೆಂದು ಆರೋಪಿಸಿದರು.
ಮಳಿಗೆ ಕರಾರು ನವೀಕರಣಗೊಂಡರೇ ಸುಮಾರು 15% ಹೆಚ್ಚಳ ಬಾಡಿಗೆ ದೊರೆಯುತ್ತದೆ. ಇದ್ದರಿಂದ ಪಾಲಿಕೆಗೆ ಹೆಚ್ಚಿನ ಅದಾಯ ಕೂಡ ಕ್ರೂಡೀಕರಣವಾಗಲಿದೆ, ಇಷ್ಟೆಲ್ಲ ಅನುಕೂಲವಿದ್ದರೂ ಕೂಡ ಕರಾರು ನವೀಕರಣಗೊಳಿಸಲು ಮೀನಾಮೇಷ ಏಣಿಸುತ್ತಿರುವುದು ಶೋಚನಿಯ ಸಂಗತಿಯಾಗಿದೆ ಎಂದರು.
ಶೀಘ್ರದಲ್ಲಿ ಕರಾರು ನವೀಕರಣಗೊಳಿಸದಿದ್ದರೇ ಮುಂದಿನ ದಿನಗಳಲ್ಲಿ ಬೀದಿಗಿಳಿದು ಹೋರಾಟ ಮಾಡುವುದಾಗಿ ಖಾಸಗಿ ಬಸ್ ನಿಲ್ದಾಣ ಅಂಗಡಿ ವರ್ತಕರ ಸಂಘ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಒಮ್ಮತ ತೀರ್ಮಾನ ಕೈಗೊಳ್ಳಲಾಗಿದ್ದು. ಆಯುಕ್ತರು ವರ್ತಕರ ಸಂಕಷ್ಟ ಅರಿತು. ಕರಾರನ್ನು ನವೀಕರಣಗೊಳಿಸಿ ಕೊಟ್ಟು. ನಮ್ಮ ವ್ಯವಹಾರಕ್ಕೆ ಸಹಕರಿಸಬೇಕು ಎಂದು ಆಗ್ರಹಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...