Sunday, April 27, 2025
Sunday, April 27, 2025

ಶೀಘ್ರ ಬಾಡಿಗೆ ಕರಾರನ್ನ ನವೀಕರಣಗೊಳಿಸಿ- ಪಿ.ಮಂಜುನಾಥ್

Date:

ಶಿವಮೊಗ್ಗ ನಗರದ ಬಸ್ ನಿಲ್ದಾಣದ ಅವರಣದಲ್ಲಿರುವ ಅಂಗಡಿ ಮಳಿಗೆಗಳ ಬಾಡಿಗೆ ಕರಾರು ನವೀಕರಣಗೊಳಿಸುವಂತೆ ಖಾಸಗಿ ಬಸ್ ನಿಲ್ದಾಣ ಅಂಗಡಿ ವರ್ತಕರ ಸಂಘದ ಅಧ್ಯಕ್ಷರಾದ ಪಿ.ಮಂಜುನಾಥ್ ಒತ್ತಾಯಿಸಿದರು.
ಕರ್ನಾಟಕ ಸರ್ಕಾರದ ಸುತ್ತೋಲೆ ಕ್ರ.ಸಂ/ನಆಈ/೨೨೧/ಜಿ.ಇ.ಎಲ್‌ಎಲ್/2009 ದಿನಾಂಕ:26-10-2009 ರಿತ್ಯ ದಿನಾಂಕ : 06-01-2011 ರ ಗುರುವಾರದಂದು ನಡೆದ ಸಭಾ ನಡವಳಿಯ ಅನುಸಾರ ಪ್ರತಿ 12 ವರ್ಷಗಳ ಅಧಿಗೆ ಪ್ರತಿ ೩ ವರ್ಷಗಳಿಗೊಮ್ಮೆ ಕರಾರು ಪತ್ರ ನವೀಕರಣಗೊಳ್ಳಬೇಕಾಗಿರುತ್ತದೆ. ಆದರೆ ಸುಮಾರು ಎರಡು ವರ್ಷದಿಂದ ಬಾಡಿಗೆ ಕರಾರು ನವೀಕರಣಗೊಳಿಸಿದೆ ಇರುವುದು ನಮಗೆ ತೊಂದ್ರೆಯಾಗುತ್ತಿದೆ ಎಂದು ಆರೋಪಿಸಿದರು.
ಕರಾರು ನವೀಕರಣಗೊಂಡರೇ ಸರ್ಕಾರಿ ಕಛೇರಿಗಳಲ್ಲಿ ಹಣಕಾಸು ಸಂಸ್ಥೆಗಳಲ್ಲಿ/ಬ್ಯಾಂಕ್ ಮತ್ತು ಸಹಕಾರ ಸಂಘಗಳಲ್ಲಿ ವ್ಯವಹಾರ ಮಾಡಲು ಅನುಕೂಲವಾಗುತ್ತದೆ. ಇಲ್ಲವೆಂದರೇ ಯಾರು ಕೂಡ ನಮ್ಮಲ್ಲಿ ಹಣದ ವ್ಯವಹಾರನ್ನು ಮಾಡುವುದಿಲ್ಲ. ಇದ್ದರಿಂದ ನಮಗೆ ದಿನನಿತ್ಯ ಹಲವಾರು ಸಾಮಾಗ್ರಿಗಳನ್ನು ತಂದು ಹೂಡಿಕೆ ಮಾಡಲು ಅನಾನೂಕೂಲವಾಗುತ್ತದೆ ಎಂದರು.
ಶೀಘ್ರದಲ್ಲಿ ಕರಾರನ್ನು ನವೀಕರಣಗೊಳಿಸಿ ನಮ್ಮ ವ್ಯಾಪಾರ ವಹಿವಾಟಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಯುಕ್ತರಿಗೆ ಒಂದು ತಿಂಗಳ ಹಿಂದೆಯೇ ಮನವಿ ಸಲ್ಲಿಸಲಾಗಿದೆ. ಆದರೇ ಆಯುಕ್ತರು ಏಕೋ ಈ ಮಳಿಗೆ ಕರಾರು ನವೀಕರಣಗೊಳಿಸಲು ಅಸಡ್ಡೆ ತೋರುತ್ತಿದ್ದಾರೆಂದು ಆರೋಪಿಸಿದರು.
ಮಳಿಗೆ ಕರಾರು ನವೀಕರಣಗೊಂಡರೇ ಸುಮಾರು 15% ಹೆಚ್ಚಳ ಬಾಡಿಗೆ ದೊರೆಯುತ್ತದೆ. ಇದ್ದರಿಂದ ಪಾಲಿಕೆಗೆ ಹೆಚ್ಚಿನ ಅದಾಯ ಕೂಡ ಕ್ರೂಡೀಕರಣವಾಗಲಿದೆ, ಇಷ್ಟೆಲ್ಲ ಅನುಕೂಲವಿದ್ದರೂ ಕೂಡ ಕರಾರು ನವೀಕರಣಗೊಳಿಸಲು ಮೀನಾಮೇಷ ಏಣಿಸುತ್ತಿರುವುದು ಶೋಚನಿಯ ಸಂಗತಿಯಾಗಿದೆ ಎಂದರು.
ಶೀಘ್ರದಲ್ಲಿ ಕರಾರು ನವೀಕರಣಗೊಳಿಸದಿದ್ದರೇ ಮುಂದಿನ ದಿನಗಳಲ್ಲಿ ಬೀದಿಗಿಳಿದು ಹೋರಾಟ ಮಾಡುವುದಾಗಿ ಖಾಸಗಿ ಬಸ್ ನಿಲ್ದಾಣ ಅಂಗಡಿ ವರ್ತಕರ ಸಂಘ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಒಮ್ಮತ ತೀರ್ಮಾನ ಕೈಗೊಳ್ಳಲಾಗಿದ್ದು. ಆಯುಕ್ತರು ವರ್ತಕರ ಸಂಕಷ್ಟ ಅರಿತು. ಕರಾರನ್ನು ನವೀಕರಣಗೊಳಿಸಿ ಕೊಟ್ಟು. ನಮ್ಮ ವ್ಯವಹಾರಕ್ಕೆ ಸಹಕರಿಸಬೇಕು ಎಂದು ಆಗ್ರಹಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

National Defense University ಪಠ್ಯಕ್ರಮದ ರಚನೆ & ಕೌಶಲ್ಯಾಭಿವೃದ್ಧಿಗೆಒತ್ತು-ರಾಷ್ಟ್ರೀಯ ರಕ್ಷಾ ವಿವಿಯಲ್ಲಿ ವೃತ್ತಿ ಸಮಾಲೋಚನೆ ಯಶಸ್ವಿ

National Defense University ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ (RRU), ಶಿವಮೊಗ್ಗ ಕ್ಯಾಂಪಸ್ನಲ್ಲಿ,...

Digital library ಹೊಸ ವಿಷಯ ಕಲಿಕೆ ಸಂಗಡ ಮಕ್ಕಳು ದೈಹಿಕ & ಮಾನಸಿಕ ದೃಢತೆ ಸಾಧಿಸಬೇಕು- ವೀರೇಶ್ ಕ್ಯಾತನಕೊಪ್ಪ

Digital library ಮಕ್ಕಳಿಗೆ ಬೇಸಿಗೆ ಶಿಬಿರಗಳು ಅತ್ಯಂತ ಅವಶ್ಯಕ ಎಂದು ಸೂಗುರು...

CM siddharamaih ಪಹಲ್ಗಾಮ್ ದುರ್ಘಟನೆ‌ ಗುಪ್ತಚರ ವ್ಯವಸ್ಥೆಯ ವೈಫಲ್ಯ- ಮುಖ್ಯಮಂತ್ರಿ ಸಿದ್ಧರಾಮಯ್ಯ

CM siddharamaih ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ...