Wednesday, March 25, 2026
Wednesday, March 25, 2026

BJP Protest 18 ಶಾಸಕರ ಅಮಾನತು. ಸರ್ಕಾರದಿಂದ ಅಧಿಕಾರ ದುರುಪಯೋಗ. ಜಿಲ್ಲಾ ಬಿಜೆಪಿ‌‌ ಪ್ರತಿಭಟನೆ

Date:

BJP Protest ಮುಸ್ಲಿಮರಿಗೆ ಅಸಂವಿಧಾನಿಕ 4% ಮೀಸಲಾತಿ, SCP-TSP ನಿಧಿಗಳ ದುರ್ಬಳಕೆ, ಹನಿಟ್ರ್ಯಾಪ್ ಹಗರಣ, ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆ, ಸ್ಮಾರ್ಟ್ ಮೀಟರ್ ಹಗರಣ ಈ ರೀತಿಯ ಜನವಿರೋಧಿ ನೀತಿಯನ್ನೇ ತನ್ನ ಸಾಧನೆ ಎನ್ನುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರಜಾಪ್ರಭುತ್ವದ ಧ್ವನಿಯಾಗಿ, ಜನರ ಹಕ್ಕುಗಳಿಗಾಗಿ ಹೋರಾಡುತ್ತಿದ್ದ 18 ಮಂದಿ ಬಿಜೆಪಿ ಶಾಸಕರನ್ನು ಅಮಾನತು ಮಾಡುವ ಮೂಲಕ ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿರುವ ಸರ್ಕಾರದ ಈ ಅಸಂವಿಧಾನಿಕ ನಿರ್ಧಾರ ಹಾಗೂ ರಾಜ್ಯದ ಜನತೆಯ ಮೇಲೆ ತೋರುತ್ತಿರುವ ನಿರ್ಲಕ್ಷ್ಯತೆಯನ್ನು ಖಂಡಿಸಿ, ಭಾರತೀಯ ಜನತಾ ಪಾರ್ಟಿ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಇಂದು ನಡೆದ ಬೃಹತ್ ಜನಾಂದೋಲನ ಹೋರಾಟದಲ್ಲಿ ಶಿವಮೊಗ್ಗ ನಗರ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು.

BJP Protest ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಜಗದೀಶ್, ತೀರ್ಥಳ್ಳಿಯ ಶಾಸಕರಾದ ಅರಗ ಜ್ಞಾನೇಂದ್ರ, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್ ದತ್ತಾತ್ರಿ, ನಿಕಟ ಪೂರ್ವ ಜಿಲ್ಲಾಧ್ಯಕ್ಷರಾದ ಟಿ.ಡಿ ಮೇಘರಾಜ್, ನಗರಾಧ್ಯಕ್ಷರಾದ ಮೋಹನ್ ರೆಡ್ಡಿ ಸೇರಿದಂತೆ ಬಿಜೆಪಿಯ ಪ್ರಮುಖರು, ಜಿಲ್ಲಾ ಹಾಗೂ ನಗರಗಳ ಮೋರ್ಚಾಗಳ ಪದಾಧಿಕಾರಿಗಳು, ನಮ್ಮ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...