BJP Protest ಮುಸ್ಲಿಮರಿಗೆ ಅಸಂವಿಧಾನಿಕ 4% ಮೀಸಲಾತಿ, SCP-TSP ನಿಧಿಗಳ ದುರ್ಬಳಕೆ, ಹನಿಟ್ರ್ಯಾಪ್ ಹಗರಣ, ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆ, ಸ್ಮಾರ್ಟ್ ಮೀಟರ್ ಹಗರಣ ಈ ರೀತಿಯ ಜನವಿರೋಧಿ ನೀತಿಯನ್ನೇ ತನ್ನ ಸಾಧನೆ ಎನ್ನುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರಜಾಪ್ರಭುತ್ವದ ಧ್ವನಿಯಾಗಿ, ಜನರ ಹಕ್ಕುಗಳಿಗಾಗಿ ಹೋರಾಡುತ್ತಿದ್ದ 18 ಮಂದಿ ಬಿಜೆಪಿ ಶಾಸಕರನ್ನು ಅಮಾನತು ಮಾಡುವ ಮೂಲಕ ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿರುವ ಸರ್ಕಾರದ ಈ ಅಸಂವಿಧಾನಿಕ ನಿರ್ಧಾರ ಹಾಗೂ ರಾಜ್ಯದ ಜನತೆಯ ಮೇಲೆ ತೋರುತ್ತಿರುವ ನಿರ್ಲಕ್ಷ್ಯತೆಯನ್ನು ಖಂಡಿಸಿ, ಭಾರತೀಯ ಜನತಾ ಪಾರ್ಟಿ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಇಂದು ನಡೆದ ಬೃಹತ್ ಜನಾಂದೋಲನ ಹೋರಾಟದಲ್ಲಿ ಶಿವಮೊಗ್ಗ ನಗರ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು.
BJP Protest ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಜಗದೀಶ್, ತೀರ್ಥಳ್ಳಿಯ ಶಾಸಕರಾದ ಅರಗ ಜ್ಞಾನೇಂದ್ರ, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್ ದತ್ತಾತ್ರಿ, ನಿಕಟ ಪೂರ್ವ ಜಿಲ್ಲಾಧ್ಯಕ್ಷರಾದ ಟಿ.ಡಿ ಮೇಘರಾಜ್, ನಗರಾಧ್ಯಕ್ಷರಾದ ಮೋಹನ್ ರೆಡ್ಡಿ ಸೇರಿದಂತೆ ಬಿಜೆಪಿಯ ಪ್ರಮುಖರು, ಜಿಲ್ಲಾ ಹಾಗೂ ನಗರಗಳ ಮೋರ್ಚಾಗಳ ಪದಾಧಿಕಾರಿಗಳು, ನಮ್ಮ ಕಾರ್ಯಕರ್ತರು ಉಪಸ್ಥಿತರಿದ್ದರು.