Dinesh Gundu Rao ಗೃಹ ಆರೋಗ್ಯ ಯೋಜನೆಯನ್ನು ಪ್ರಾಯೋಗಿಕವಾಗಿ ಕೋಲಾರ ಜಿಲ್ಲೆಯಲ್ಲಿ ಪ್ರಾರಂಭಿಸಲಾಗಿದ್ದು, ಉತ್ತಮ ಸ್ಪಂದನೆ ವ್ಯಕ್ತವಾದ ಹಿನ್ನೆಲೆ ಏಪ್ರಿಲ್ ತಿಂಗಳ ಮೊದಲ ವಾರದಲ್ಲಿ ರಾಜ್ಯಾದ್ಯಂತ ಜಾರಿ ಮಾಡಲಾಗುವುದು.
ಜನರ ಮನೆ ಬಾಗಿಲಿಗೆ ಆರೋಗ್ಯ ಸಿಬ್ಬಂದಿಗಳು ಭೇಟಿ ನೀಡಿ, ರಕ್ತದೊತ್ತಡ, ಮಧುಮೇಹ, ಕ್ಯಾನ್ಸರ್ ಸೇರಿದಂತೆ ಮಾನಸಿಕ ಕಾಯಿಲೆಗಳ ಬಗ್ಗೆಯೂ ತಪಾಸಣೆ ನಡೆಸಲಿದ್ದಾರೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ