S. N. Channabasappa ಶಿವಮೊಗ್ಗ ನಗರ ವಿಧಾನಸಭಾ ವ್ಯಾಪ್ತಿಯ ವಾರ್ಡ್ ನಂ. 2ರ ಅಶ್ವಥ್ ನಗರ ಮತ್ತು ಎಲ್.ಬಿ.ಎಸ್. ನಗರ ಪ್ರದೇಶಗಳಿಗೆ ಶಿವಮೊಗ್ಗ ನಗರ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಮಹಾನಗರ ಪಾಲಿಕೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಸ್ಥಳೀಯ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯರು ಮಳೆಗಾಲದಲ್ಲಿ ಎದುರಿಸುತ್ತಿರುವ ಯುಜಿಡಿ ಸಮಸ್ಯೆ ಮತ್ತು ರಾಜಕಾಲುವೆಯಿಂದ ಮನೆಗಳಿಗೆ ನೀರು ನುಗ್ಗುವ ತೊಂದರೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ನಿರ್ದೇಶನ ನೀಡಿದರು.
S. N. Channabasappa ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.