Thursday, February 5, 2026
Thursday, February 5, 2026

ಬಿರುಸು ಗಾಳಿ ಮಳೆಗೆ ಹೊಸನಗರ ತಾಲ್ಲೂಕಿನಲ್ಲಿ ಕರಿಮೆಣಸು, ಅಡಿಕೆ ಫಸಲಿಗೆ ಅಪಾರ ಹಾನಿ

Date:

ಹೊಸನಗರ ; ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಮಂಗಳವಾರ ಮಧ್ಯಾಹ್ನ 3;30 ರಿಂದ ವರ್ಷದ ಮೊದಲ ಮಳೆ ಸತತ ಒಂದೂವರೆ ಗಂಟೆಗಳ ಕಾಲ ಬಿರುಗಾಳಿ ಸಹಿತ ಸುರಿದಿದ್ದು ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿದೆ.

ತಾಲ್ಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಹುಂಚ ಹೋಬಳಿ ಕರಿಗೆರಸು ಗ್ರಾಮದ ಹಿಂಡ್ಲೆಮನೆ ನಿವಾಸಿ ರೈತ ಶ್ರೀನಿವಾಸ ಹೆಚ್.ಕೆ ಬಿನ್ ಕೃಷ್ಣಪ್ಪ ಎಂಬುವರಿಗೆ ಸೇರಿದ ಸ.ನಂ.26/1 ಮತ್ತು 24 ರ ಜಮೀನಿನಲ್ಲಿನ ನೂರಾರು ಅಡಿಕೆ ಮರಗಳು ಮತ್ತು ತೆಂಗಿನಮರ ಧರೆಗುರುಳಿದ್ದು ಕಾಳುಮೆಣಸು ಸೇರಿದಂತೆ ಇನ್ನಿತರ ಬೆಳೆ ಹಾನಿಯಾಗಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.

ಬಿರುಗಾಳಿ ಹೊಡೆತಕ್ಕೆ ನೂರಾರು ಅಡಿಕೆ ಗಿಡಗಳು ನೆಲಕ್ಕೆ ಬಿದ್ದಿವೆ. ಇದರಿಂದ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಲಕ್ಷಾಂತರ ರೂ. ಸಾಲ ಮಾಡಿ ಬೆಳೆದ ಬೆಳೆ ಬಿರುಗಾಳಿಗೆ ಸಿಲುಕಿದ್ದು ಸಂಪೂರ್ಣ ತೋಟವೇ ನಾಶವಾಗಿದೆ ಎಂದು ರೈತ ಶ್ರೀನಿವಾಸ ಅಳಲನ್ನು ತೋಡಿಕೊಂಡಿದ್ದಾರೆ.

ಪರಿಹಾರಕ್ಕೆ ಒತ್ತಾಯ :

ಈ ಭಾಗದಲ್ಲಿ ಬೀಸಿದ ಬಿರುಗಾಳಿಗೆ ಅಡಿಕೆ, ತೆಂಗು ಬೆಳೆ ಹಾಳಾಗಿದ್ದು, ಸಂಬಂಧಿಸಿದ ಇಲಾಖೆ ಬೆಳೆ ನಷ್ಟವಾಗಿರುವ ರೈತರಿಗೆ ಹೆಚ್ಚಿನ ಪರಿಹಾರ ಧನ ವಿತರಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇನ್ನೂ ಈ ಭಾಗದಲ್ಲಿ ಏಕಾಏಕಿ ಬಂದ ಭಾರಿ ಗಾಳಿ, ಮಳೆಗೆ ನೂರಾರು ಕಾಡು ಜಾತಿಯ ಮರಗಳು ಬಿದ್ದ ಪರಿಣಾಮ ಹಲವು ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು ವಿದ್ಯುತ್ ಸಂಪರ್ಕ ಸಂಪೂರ್ಣ ಸ್ಥಗಿತಗೊಂಡಿದೆ. ಹಲವೆಡೆ ಮನೆಗಳ ಮೇಲ್ಛಾವಣಿ ಹಾರಿಹೋದ ಬಗ್ಗೆ ವರದಿಯಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...