S.N.Chennabasappa ಆಹಾರ ಗುಣಮಟ್ಟವನ್ನು ಹೆಚ್ಚಿಸುವ ಹಾಗೂ ಗ್ರಾಹಕರಿಗೆ ಸುರಕ್ಷಿತ ಆಹಾರ ಒದಗಿಸುವ ಉದ್ದೇಶದಿಂದ ಶಿವಮೊಗ್ಗದ ಮಥುರ ಪ್ಯಾರಡೈಸ್ ನಲ್ಲಿ ಕರ್ನಾಟಕ ಸರ್ಕಾರ ಮತ್ತು ಆಹಾರ ಸುರಕ್ಷಿತ ಮತ್ತು ಔಷಧಿ ಆಡಳಿತ ಇಲಾಖೆಯ ವತಿಯಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಆಹಾರ ಉದ್ಯಮಿದಾರರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೇಲ್ವಿಚಾರಕರಿಗೆ ಹಮ್ಮಿಕೊಳ್ಳಲಾಗಿದ್ದ ‘ಆಹಾರ ಸುರಕ್ಷತಾ ಮತ್ತು ಗುಣಮಟ್ಟದ ತರಬೇತಿ’ ಕಾರ್ಯಕ್ರಮವನ್ನು ಶಿವಮೊಗ್ಗ ನಗರ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಉದ್ಘಾಟಿಸಿ, ಮಾತನಾಡಿದರು.
S.N.Chennabasappa ಕಾರ್ಯಕ್ರಮದಲ್ಲಿ ಶಿವಮೊಗ್ಗ ಹೋಟೆಲ್ ಮಾಲೀಕರ ಸಂಘದ ಪದಾಧಿಕಾರಿಗಳು ಮತ್ತು ಆಹಾರ ಉದ್ಯಮದಲ್ಲಿ ತೊಡಗಿಸಿಕೊಂಡಿರುವ ಶಿವಮೊಗ್ಗ ಜಿಲ್ಲೆಯ ಉದ್ಯಮಿದಾರರು ಉಪಸ್ಥಿತರಿದ್ದರು.