Friday, March 20, 2026
Friday, March 20, 2026

International Women’s Day ಕವನಗಳು ಸರಳ,ಸಹಜ ಮತ್ತು ಪ್ರಾಸಬದ್ಧವಾಗಿರ ಬೇಕು- ವಿಜಯಾಶ್ರೀಧರ್

Date:

International Women’s Day ಶಿವಮೊಗ್ಗ ಜಿಲ್ಲಾ ಲೇಖಕಿಯರು ಹಾಗೂ ವಾಚಕಿಯರ ಸಂಘದ ವತಿಯಿಂದ ವಿಶ್ವಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.

ಈ ವೇಳೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀಮತಿ ವಿಜಯಾ ಶ್ರೀಧರ್ ಮಾತನಾಡಿದ, ಹೆಸರಾಂತ ಕವಿಗಳಾದ ದ.ರಾ.ಬೇಂದ್ರೆ, ಕುವೆಂಪು, ಜಿ.ಎಸ್.ಶಿವರುದ್ರಪ್ಪ, ನಿಸಾರ್ ಅಹಮದ್ ರವರ ಕವನಗಳ ವೈಶಿಷ್ಟ್ಯತೆಯನ್ನು ಉದಾಹರಿಸುತ್ತಾ, ಕವನಗಳು ಸರಳ, ಸಹಜ ಹಾಗೂ ಪ್ರಾಸಬದ್ಧವಾಗಿರಬೇಕೆಂದು ಕವನ ರಚನೆಯ ಕುರಿತಾಗಿ ತಿಳಿಸಿದರು.

ಗೌರವಾಧ್ಯಕ್ಷೆ ಚಂದ್ರಕಲಾ ಮಾತನಾಡಿ, ತಮಗೆ ಬಾಲ್ಯದಿಂದಲೇ ಕವನ ರಚನೆಯ ಬಗೆಗೆ ಒಲವಿತ್ತು ಎಂದು ತಮ್ಮ ಬಾಲ್ಯದ ಕವನ ರಚನೆಯಲ್ಲಿನ ಆಸಕ್ತಿ ಬಗ್ಗೆ ತಿಳಿಸಿ, ಬಾಲ್ಯದಲ್ಲಿ ಅವರು ಬರೆದ ಸುಂದರ ಕವಿತೆಯೊಂದರ ಕುರಿತು ವಿವರಿಸಿದರು.

ಮುಖ್ಯ ಅತಿಥಿಗಳಾಗಿ ಆಗನಿಸಿದ್ದ ಸುನೀತಾ ರಾವ್ ಮಾತನಾಡಿ, ಮಹಿಳಾ ದಿನಾಚರಣೆ ಪ್ರಾರಂಭವಾದದುದರ ಕುರಿತು ಮಾಹಿತಿ ನೀಡಿದರು. ಹಾಗೂ ಎಲ್ಲಿ ಮಹಿಳಾ ಶೋಷಣೆಯಾದರೂ ಅಲ್ಲಿ ಮಹಿಳೆಯರು ಸಂಘಟಿತರಾಗಬೇಕೆಂಬ ಕಳಕಳಿ ವ್ಯಕ್ತಪಡಿಸಿದರು.

International Women’s Day ಕವಿಗೋಷ್ಠಿಯಲ್ಲಿ ಪ್ರಮುಖರಾದ ಗುಣ.ಎಸ್, ಇಂದಿರಾ, ಗಾಯತ್ರಿ ರಮೇಶ್, ಡಿ.ಬಿ.ನಾಗರತ್ನಮ್ಮ, ನಾಗರತ್ನಮ್ಮ ಸುಬ್ರಮಣ್ಯ, ಸು. ವಿಜಯಲಕ್ಷ್ಮೀ, ಉಷಾ ನಾಗರಾಜ್, ಜಯಲಕ್ಷ್ಮೀ ಚಂದ್ರಹಾಸ, ಸ್ಮಿತಾ ನಂದೀಶ್, ಜಯಶ್ರೀ ಗಣೇಶ್, ವಿಜಯಲಕ್ಷ್ಮೀ ಪಂಡಿತ್, ತಾರಾ ಪ್ರಸಾದ್, ಮಂಜುಳಾ ಉಮೇಶ್, ಹೇಮಾ, ಆಶಾಲತಾ, ದೇವಿ ನಾಗರತ್ನಮ್ಮ, ಕುಮುದಾ ಸುಶೀಲ್, ರಮಾಶಾಸ್ತ್ರಿ, ಸುಮಾ ಮಂಜುನಾಥ್, ರುಕ್ಮಿಣಿ ಆನಂದ್, ಸ್ತ್ರೀ ಸಂವೇದನೆಯ ಕುರಿತಾಗಿ ಕವನಗಳನ್ನು ವಾಚಿಸಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷೆ ಕಾತ್ಯಾಯಿನಿ.ಸಿ.ಎಸ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯದರ್ಶಿ ಮಾಲಾ ರಾಮಚಂದ್ರ ಎಲ್ಲರನ್ನೂ ಸ್ವಾಗತಿಸಿ, ಶ್ರೀರಂಜಿನಿ ದತ್ತಾತ್ರಿ ಕಾರ್ಯಕ್ರಮ ನಿರೂಪಿಸಿ, ರುಕ್ಮಿಣಿ ಆನಂದ್ ವಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ugadi ನಮ್ಮೂರಿನ ಯುಗಾದಿ.ಒಂದು ನೆನಪು…ಲೇ: ಎನ್.ಎಸ್.ಕುಮಾರ್.ನಿವೃತ್ತ ನಿರ್ದೇಶಕರು.( ಶಿಕ್ಷಣ ಇಲಾಖೆ).ಶಿವಮೊಗ್ಗ

Ugadi ಹಬ್ಬ ಎಂದರೆ ಎಲ್ಲರಿಗೂ ಸಡಗರ ಸಂಭ್ರಮ ಅದರಲ್ಲೂ ನಮ್ಮೂರಿನ ಹಬ್ಬದ...

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...