Monday, February 2, 2026
Monday, February 2, 2026

International Women’s Day ಕವನಗಳು ಸರಳ,ಸಹಜ ಮತ್ತು ಪ್ರಾಸಬದ್ಧವಾಗಿರ ಬೇಕು- ವಿಜಯಾಶ್ರೀಧರ್

Date:

International Women’s Day ಶಿವಮೊಗ್ಗ ಜಿಲ್ಲಾ ಲೇಖಕಿಯರು ಹಾಗೂ ವಾಚಕಿಯರ ಸಂಘದ ವತಿಯಿಂದ ವಿಶ್ವಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.

ಈ ವೇಳೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀಮತಿ ವಿಜಯಾ ಶ್ರೀಧರ್ ಮಾತನಾಡಿದ, ಹೆಸರಾಂತ ಕವಿಗಳಾದ ದ.ರಾ.ಬೇಂದ್ರೆ, ಕುವೆಂಪು, ಜಿ.ಎಸ್.ಶಿವರುದ್ರಪ್ಪ, ನಿಸಾರ್ ಅಹಮದ್ ರವರ ಕವನಗಳ ವೈಶಿಷ್ಟ್ಯತೆಯನ್ನು ಉದಾಹರಿಸುತ್ತಾ, ಕವನಗಳು ಸರಳ, ಸಹಜ ಹಾಗೂ ಪ್ರಾಸಬದ್ಧವಾಗಿರಬೇಕೆಂದು ಕವನ ರಚನೆಯ ಕುರಿತಾಗಿ ತಿಳಿಸಿದರು.

ಗೌರವಾಧ್ಯಕ್ಷೆ ಚಂದ್ರಕಲಾ ಮಾತನಾಡಿ, ತಮಗೆ ಬಾಲ್ಯದಿಂದಲೇ ಕವನ ರಚನೆಯ ಬಗೆಗೆ ಒಲವಿತ್ತು ಎಂದು ತಮ್ಮ ಬಾಲ್ಯದ ಕವನ ರಚನೆಯಲ್ಲಿನ ಆಸಕ್ತಿ ಬಗ್ಗೆ ತಿಳಿಸಿ, ಬಾಲ್ಯದಲ್ಲಿ ಅವರು ಬರೆದ ಸುಂದರ ಕವಿತೆಯೊಂದರ ಕುರಿತು ವಿವರಿಸಿದರು.

ಮುಖ್ಯ ಅತಿಥಿಗಳಾಗಿ ಆಗನಿಸಿದ್ದ ಸುನೀತಾ ರಾವ್ ಮಾತನಾಡಿ, ಮಹಿಳಾ ದಿನಾಚರಣೆ ಪ್ರಾರಂಭವಾದದುದರ ಕುರಿತು ಮಾಹಿತಿ ನೀಡಿದರು. ಹಾಗೂ ಎಲ್ಲಿ ಮಹಿಳಾ ಶೋಷಣೆಯಾದರೂ ಅಲ್ಲಿ ಮಹಿಳೆಯರು ಸಂಘಟಿತರಾಗಬೇಕೆಂಬ ಕಳಕಳಿ ವ್ಯಕ್ತಪಡಿಸಿದರು.

International Women’s Day ಕವಿಗೋಷ್ಠಿಯಲ್ಲಿ ಪ್ರಮುಖರಾದ ಗುಣ.ಎಸ್, ಇಂದಿರಾ, ಗಾಯತ್ರಿ ರಮೇಶ್, ಡಿ.ಬಿ.ನಾಗರತ್ನಮ್ಮ, ನಾಗರತ್ನಮ್ಮ ಸುಬ್ರಮಣ್ಯ, ಸು. ವಿಜಯಲಕ್ಷ್ಮೀ, ಉಷಾ ನಾಗರಾಜ್, ಜಯಲಕ್ಷ್ಮೀ ಚಂದ್ರಹಾಸ, ಸ್ಮಿತಾ ನಂದೀಶ್, ಜಯಶ್ರೀ ಗಣೇಶ್, ವಿಜಯಲಕ್ಷ್ಮೀ ಪಂಡಿತ್, ತಾರಾ ಪ್ರಸಾದ್, ಮಂಜುಳಾ ಉಮೇಶ್, ಹೇಮಾ, ಆಶಾಲತಾ, ದೇವಿ ನಾಗರತ್ನಮ್ಮ, ಕುಮುದಾ ಸುಶೀಲ್, ರಮಾಶಾಸ್ತ್ರಿ, ಸುಮಾ ಮಂಜುನಾಥ್, ರುಕ್ಮಿಣಿ ಆನಂದ್, ಸ್ತ್ರೀ ಸಂವೇದನೆಯ ಕುರಿತಾಗಿ ಕವನಗಳನ್ನು ವಾಚಿಸಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷೆ ಕಾತ್ಯಾಯಿನಿ.ಸಿ.ಎಸ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯದರ್ಶಿ ಮಾಲಾ ರಾಮಚಂದ್ರ ಎಲ್ಲರನ್ನೂ ಸ್ವಾಗತಿಸಿ, ಶ್ರೀರಂಜಿನಿ ದತ್ತಾತ್ರಿ ಕಾರ್ಯಕ್ರಮ ನಿರೂಪಿಸಿ, ರುಕ್ಮಿಣಿ ಆನಂದ್ ವಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...