Government Polytechnic Harihara ಜಾಗತಿಕ ಆರ್ಥಿಕ ಕ್ಷೇತ್ರದಲ್ಲಿ ಪ್ರಧಾನವಾಗಿ ಗುರುತಿಸಿಕೊಂಡಿರುವ ಭಾರತದಲ್ಲಿ ಹೂಡಿಕೆ ಮಾಡಲು ಅನೇಕ ರಾಷ್ಟ್ರಗಳು ಮುಂದಾಗಿದ್ದು ಈ ಅವಕಾಶವನ್ನು ಬಳಸಿಕೊಂಡು ಭಾರತದ ಯುವ ಜನತೆ ಉದ್ಯಮಶೀಲತೆಯತ್ತ ಗಮನಹರಿಸಬೇಕಾಗಿದೆ ಎಂದು ಹಿರಿಯ ಪತ್ರಕರ್ತ ಎಚ್. ಬಿ. ಮಂಜುನಾಥ ಅಭಿಪ್ರಾಯ ಪಟ್ಟರು.
ಅವರಿಂದು ಹರಿಹರ ಸರ್ಕಾರಿ ಪಾಲಿಟೆಕ್ನಿಕ್ ನ ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಾ ದೇಶದ ಸುಮಾರು 15600 ಪಾಲಿಟೆಕ್ನಿಕ್ ಐಟಿಐ ಮತ್ತು ಡಿಪ್ಲೋಮೋ ಕಾಲೇಜುಗಳಿಂದ ವಾರ್ಷಿಕ 10 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾಗಿ ಬರುತ್ತಿದ್ದು ಇವರೆಲ್ಲ ನೌಕರಿಯನ್ನೇ ಆರಿಸಿದರೆ ದೇಶದ ನಿವ್ವಳ ಆಂತರಿಕ ಉತ್ಪಾದನೆ ವೃದ್ಧಿಯಾಗುವುದಿಲ್ಲ. ಪಾಲಿಟೆಕ್ನಿಕ್ ಹಾಗೂ ಡಿಪ್ಲೋಮೋ ದಾರರು ಮಧ್ಯಮ ಹಾಗೂ ಸಣ್ಣದಾದರೂ ಪರವಾಗಿಲ್ಲ ಕೈಗಾರಿಕೆಗಳ ಸ್ಥಾಪನೆಗೆ ಮುಂದಾಗಬೇಕು. ಇಂದಿಗೂ ನಮ್ಮ ದೇಶ ಅಮೆರಿಕ ಜರ್ಮನಿ ದಕ್ಷಿಣ ಕೊರಿಯಾ ತೈವಾನ್ ಮುಂತಾದ ದೇಶಗಳಿಂದ ವಾರ್ಷಿಕ ಸಹಸ್ರಾರು ಹಡಗುಗಳಷ್ಟು ಯಂತ್ರೋಪಕರಣಗಳ ಬಿಡಿ ಭಾಗಗಳನ್ನು ಆಮದು ಮಾಡಿಕೊಳ್ಳುತ್ತಿದ್ದು ಇವುಗಳನ್ನು ನಮ್ಮ ಯುವ ಜನತೆ ಭಾರತದಲ್ಲೇ ಉತ್ಪಾದಿಸುವ ಬಗ್ಗೆ ಗಂಭೀರವಾಗಿ ಗಮನಿಸಬೇಕಾಗಿದೆ. ಅನೇಕ ಮುಂದುವರಿದ ರಾಷ್ಟ್ರಗಳ ಯುವ ಜನತೆಯನ್ನು ಗಮನಿಸಿದರೆ ನಮ್ಮ ದೇಶದ ಯುವ ಜನತೆಯಲ್ಲಿ ಬುದ್ಧಿಶಕ್ತಿ ಅಪಾರವಾಗಿದೆ, ಆದರೆ ಅದರ ಬಳಕೆಯಾಗುತ್ತಿಲ್ಲ, ಕಾರಣ ನಮ್ಮ ಯುವ ಜನತೆಗೆ ತಮ್ಮ ಸಾಮರ್ಥ್ಯದ ಅರಿವಿಲ್ಲ ಎಂದರು.
Government Polytechnic Harihara ಕಾಲೇಜಿನ ಪ್ರಾಚಾರ್ಯ ಬಿ ಪ್ರಕಾಶ್ ರವರ ಅಧ್ಯಕ್ಷತೆಯಲ್ಲಿ ಬೋಧಕ ವರ್ಗದ ಜಕಣಾಚಾರ್ಯ ಕಮ್ಮಾರ್, ಶಾಂತಕುಮಾರ್ ನಾಯ್ಡು, ರಾಜು ಎನ್, ಗುರುಸ್ವಾಮಿ ಟಿ ಬಿ, ಶಿವರಾಜ್ ಕೆ ವಿ, ತನ್ನೀರು ಸ್ವಪ್ನಾ, ವಿದ್ಯಾರ್ಥಿ ಸಂಘದ ಕಿರಣ್ ಟಿ ಪಿ, ಆಕಾಶ್ ಬಿ,ಮಾಲತೇಶ್ ಯು ಕೆ,ಭಾರತಿ ಎಂ ಎ,ಮನೋಜ್ ಎಸ್ ಎಸ್ ಮುಂತಾದವರ ಉಪಸ್ಥಿತಿಯಲ್ಲಿ ವಾಣಿಶ್ರೀ ಹಾಗೂ ಕಸ್ತೂರಿ ಪ್ರಾರ್ಥನೆ ಹಾಡಿದರೆ ನಿರ್ಮಲ ಸ್ವಾಗತ ಕೋರಿದರು ಲಕ್ಷ್ಮಿ ನಯನ ನಿತಿನ್ ಸೌಜನ್ಯ ಅನ್ನಪೂರ್ಣ ಐಶ್ವರ್ಯಾ ಕಾರ್ಯಕ್ರಮ ನಿರೂಪಿಸಿದರು,ಅನುಷಾ ವಂದನೆ ಸಲ್ಲಿಸಿದರು.
