Saturday, December 6, 2025
Saturday, December 6, 2025

CM Siddharamaiah ಪದಕ ಪಡೆದವರು ಬೇರೆಯವರಿಗೆ ಪ್ರೇರಣೆಯಾಗಬೇಕು- ಸಿದ್ಧರಾಮಯ್ಯ

Date:

CM Siddharamaiah ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಕೆ, ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧ ಹೊಂದಿದೆ.

ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ , ಶಾಂತಿ ಪಾಲನೆ ಉತ್ತಮವಾಗಿರಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಮೂರು ವರ್ಷಗಳಿಂದ ಬಾಕಿ ಉಳಿದಿದ್ದ ಮುಖ್ಯಮಂತ್ರಿಗಳ ಪದಕವನ್ನು ಈ ಬಾರಿ ಒಟ್ಟಾಗಿ ವಿತರಿಸಿ ಅವರು ಮಾತನಾಡುತ್ತಿದ್ದರು.

ಎಲ್ಲಾ ಪದಕ ಪುರಸ್ಕೃತರಿಗೂ ಅಭಿನಂದನೆಗಳು. ನಿಮ್ಮ‌ ಶ್ರಮ ಮತ್ತು ಸೇವೆ ಶ್ಲಾಘನೀಯ.ತಂತ್ರಜ್ಞಾನದ ಬೆಳವಣಿಗೆಯಿಂದ ಸೈಬರ್ ಅಪರಾಧಗಳು ವ್ಯಾಪಕವಾಗಿ ಹೆಚ್ವುತ್ತಿವೆ. ಅದೇ ತಂತ್ರಜ್ಞಾನದ ಸಾಧ್ಯತೆಗಳನ್ನು ಬಳಸಿಕೊಂಡು ಸೈಬರ್ ಅಪರಾಧಗಳನ್ನು ನಿಗ್ರಹಿಸಬೇಕು.
ಮಾದಕ ವಸ್ತು ಮುಕ್ತ ರಾಜ್ಯ ಮಾಡುವುದು ನನ್ನ ಗುರಿ. ಇದಕ್ಕಾಗಿ ಬಹಳಷ್ಟು ಶ್ರಮಿಸಬೇಕು. ಪೊಲೀಸರು ಮಾದಕ ವಸ್ತು ಜಾಲವನ್ನು ಬೇರು ಸಮೇತ ಕಿತ್ತಾಕಲು ಪಣ ತೊಡಬೇಕು.

ಪದಕಗಳನ್ನು ಪಡೆದವರು ಬೇರೆಯವರಿಗೆ ಪ್ರೇರಣೆ ಆಗಬೇಕು. ಸಿಎಂ ಪದಕ ಪಡೆಯಲು ದಕ್ಷತೆ, ಪ್ರಾಮಾಣಿಕತೆಯಿಂದ ವೃತ್ತಿಪರತೆ ತೋರಿಸಬೇಕು.
ಕಳೆದ ಎರಡು ವರ್ಷಗಳಲ್ಲಿ ಅಪರಾಧಗಳ ಸಂಖ್ಯೆ ಇಳಿಮುಖ ಆಗುತ್ತಿದೆ. ಇದು ಇನ್ನಷ್ಟು ಕಡಿಮೆ ಆಗಬೇಕು ಕಿವಿಮಾತು ಹೇಳಿದರು.

ಜರ್ಮನಿ ದೇಶದ ಪ್ರಧಾನಿಗಳು, ಪ್ರತಿನಿಧಿಗಳು ರಾಜ್ಯದ ಪೊಲೀಸ್ ಕೌಶಲ್ಯ ಮತ್ತು ವೃತ್ತಿಪರತೆಯನ್ನು ಶ್ಲಾಘಿಸಿದ್ದಾರೆ. ಇದು ಹೆಮ್ಮೆಯ ವಿಷಯ.

CM Siddharamaiah ಪೊಲೀಸರ ಅಗತ್ಯ ಮತ್ತು ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಸದಾ ಸಿದ್ಧ ಇದೆ. ನಾವು ನಿರಂತರವಾಗಿ ನಿಮ್ಮ ಜೊತೆಗಿರುತ್ತವೆ. ಆದರೆ ಕರ್ತವ್ಯಲೋಪವನ್ನು ಮಾತ್ರ ಸಹಿಸುವುದಿಲ್ಲ. ಪೊಲೀಸ್ ಬೀಟ್ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.

ಗೂಂಡಾಗಿರಿ, ರೌಡಿಸಂ ಪೂರ್ಣ ಮಟ್ಟ ಹಾಕಿ. ಅಗತ್ಯ ಸಹಕಾರ, ಸವಲತ್ತುಗಳನ್ನು ಕೊಡಲು ಸರ್ಕಾರ ಸಿದ್ಧವಿದೆ. ಮೊನ್ನೆಯ ಬಜೆಟ್ ನಲ್ಲಿ ಇಲಾಖೆ ಮತ್ತು ಸಿಬ್ಬಂದಿಯ ಅನುಕೂಲಕ್ಕೆ ಘೋಷಿಸಿರುವ ಎಲ್ಲವನ್ನೂ ಜಾರಿ ಮಾಡಲಾಗುವುದು ಎಂದು‌ ಸಿದ್ಧರಾಮಯ್ಯ ತಿಳಿಸಿದರು.

ಕೋರಮಂಗಲ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ ಪದಕ ವಿಜೇತ ಪೊಲೀಸ್ ಸಿಬ್ಬಂದಿಗಳಿಗೆ ಗೌರವಿಸಿ ಮುಖ್ಯಮಂತ್ರಿಗಳು ಮಾತನಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...