Kuvempu University ವಿಶ್ವ ವಿದ್ಯಾಲಯ ಆವರಣದಲ್ಲಿ ಕುವೆಂಪು ವಿಶ್ವ ವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಎನ್ ಎಸ್ ಎಸ್ ಶಿಬಿರವನ್ನು ಶ್ರೀ ಸಂತೋಷ್ ಎಮ್.ಎಸ್. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಿವಮೊಗ್ಗ ಇವರು ಉದ್ಘಾಟಿಸಿದರು.
ಮಾನ್ಯ ಕುಲಪತಿಗಳಾದ ಪ್ರೊ.ಶರತ್ ಅನಂತಮೂರ್ತಿ ಅವರು ಅಧ್ಯಕ್ಷತೆ ವಹಿಸಿದ್ದರು. ಶ್ರೀ ಗೋಪಿನಾಥ್ ಎಸ್ ಎಂ, ಪರೀಕ್ಷಾoಗ ಕುಲಸಚಿವರು, ಡಾ. ಎ. ಟಿ. ಪದ್ಮೇಗೌಡ, ರಾ ಸೇ ಯೋ ಸಲಹಾ ಸಮಿತಿ ಸದಸ್ಯರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
Kuvempu University ಕಾರ್ಯಕ್ರಮ ಸಂಯೋಜನಾಧಿಕಾರಿಗಳಾದ ಡಾ. ಶುಭಾ ಮರವಂತೆ ಇವರು ಪ್ರಸ್ತಾವಿಕ ಮತ್ತು ಸ್ವಾಗತ ಮಾಡಿದರು. ಡಾ. ಹಾ.ಮ. ನಾಗಾರ್ಜುನ ಇವರು ವಂದಿಸಿದರು. ವಿ ವಿ ರಾ ಸೇ ಯೋ ಸಲಹಾ ಸಮಿತಿ ಸದಸ್ಯರಾದ ಶ್ರೀಮತಿ ದಿವ್ಯ ಪ್ರವೀಣ್, ಎನ್ ಎಸ್ ಎಸ್ ಅಧಿಕಾರಿಗಳಾದ ಶ್ರೀ ಗಿರಿಧರ್ ಅವರು ಉಪಸ್ಥಿತರಿದ್ದರು. ದಿನಾಂಕ 03/04/2025 ರಿಂದ 09/03/2025 ರವರೆಗೆ ನಡೆಯಲಿರುವ
ಈ ಶಿಬಿರದಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ವಿವಿಧ ಪದವಿ ಕಾಲೇಜುಗಳ 150 ಸ್ವಯಂ ಸೇವಕರು ಮತ್ತು ಸ್ವಯಂ ಸೇವಕಿಯರು ಭಾಗವಹಿಸಿದ್ದಾರೆ.
