Karnataka Janapada Academy ಕರ್ನಾಟಕ ಜಾನಪದ ಅಕಾಡೆಮಿಯು ದಿನಾಂಕ: 03-04-2025 ರಂದು ಕರ್ನಾಟಕ ಜಾನಪದ ಅಕಾಡೆಮಿ ಕಾರ್ಯಾಲಯದಲ್ಲಿ ಜೀವಮಾನ ಸಾಧನೆಗಾಗಿ 2023 ನೇ ಸಾಲಿನ ಡಾ. ಜೀ.ಶಂ.ಪ ಜಾನಪದ ತಜ್ಞ ಪ್ರಶಸ್ತಿಯನ್ನು ಡಾ. ಕೆ.ಚಿನ್ನಪ್ಪಗೌಡ, ಜಾನಪದ ವಿದ್ವಾಂಸರು ದಕ್ಷಿಣ ಕನ್ನಡ ಜಿಲ್ಲೆ ಹಾಗೂ 2023 ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿ ಪುರಸ್ಕೃತರಾದ ಚಿತ್ರದುರ್ಗ ಜಿಲ್ಲೆಯ ಜನಪದ ಮಹಾಕಾವ್ಯಗಳ ಹಾಡುಗಾರ್ತಿ ಶ್ರೀಮತಿ ಸಿರಿಯಮ್ಮ, ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾನ್ಯ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಇವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಈ ಸರಳ ಸಮಾರಂಭದಲ್ಲಿ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
Karnataka Janapada Academy ಈ ಸಂದರ್ಭದಲ್ಲಿ ಕರ್ನಾಟಕ ಜಾನಪದ ಅಕಾಡೆಮಿಯ ಮಾನ್ಯ ಅಧ್ಯಕ್ಷರಾದ ಶ್ರೀ ಗೊಲ್ಲಹಳ್ಳಿ ಶಿವಪ್ರಸಾದ, ಅಕಾಡೆಮಿ ಸದಸ್ಯರಾದ ಡಾ. ಮಲ್ಲಿಕಾರ್ಜುನ ಕಲಮರಹಳ್ಳಿ ಹಾಗೂ ರಿಜಿಸ್ಟ್ರಾರ್ ರವರಾದ ಶ್ರೀಮತಿ ಎನ್. ನಮ್ರತ ಹಾಗೂ ಪ್ರಶಸ್ತಿ ಪುರಸ್ಕೃತರ ಕುಟುಂಬಸ್ಥರು ಹಾಗೂ ಅಕಾಡೆಮಿ ಸಿಬ್ಬಂದಿ ಉಪಸ್ಥಿತರಿದ್ದರು