Sunday, December 7, 2025
Sunday, December 7, 2025

Rotary Club Shivamogga ಮಕ್ಕಳಲ್ಲಿನ ಕಲಿಕಾ ನ್ಯೂನ್ಯತೆ,ವರ್ತನಾ ವ್ಯತ್ಯಾಸಗಳ ಬಗ್ಗೆ ಪೋಷಕರು ಗಂಭೀರ ಗಮನ ವಹಿಸಬೇಕು- ಡಾ.ರಾಮಪ್ರಸಾದ್

Date:

Rotary Club Shivamogga ಚಿಕ್ಕಂದಿನಿಂದ ಮಕ್ಕಳಲ್ಲಿ ಕಲಿಕಾ ನ್ಯೂನ್ಯತೆ ಹಾಗೂ ವರ್ತನಾ ಸಮಸ್ಯೆಗಳ ಬಗ್ಗೆ ಪೋಷಕರು ಶಿಕ್ಷಕರು ಹೆಚ್ಚು ಗಮನಹರಿಸುತ್ತಿರಬೇಕು ಇದರಿಂದ ಮುಂದೆ ಆಗುವ ದೊಡ್ಡ ಪರಿಣಾಮಗಳನ್ನು ತಡೆಗಟ್ಟಬಹುದು ಎಂದು ಜಿಲ್ಲಾ ಮೇಘನಾ ಆಸ್ಪತ್ರೆಯ ಮನಶಾಸ್ತ್ರ ಮಾನಸಿಕ ತಜ್ಞ ರೋಗದ ವಿಭಾಗದ ಮುಖ್ಯಸ್ಥರಾದ ಡಾಕ್ಟರ್ ರಾಮ್ ಪ್ರಸಾದ್ ಅವರು ಅಭಿಮತ ವ್ಯಕ್ತಪಡಿಸಿದರು. ಅವರು ರೋಟರಿ ಬ್ಲಡ್ ಬ್ಯಾಂಕ್ ಆವರಣದಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಮಿಟ್ ಟೌನ್ ವತಿಯಿಂದ ಆಯೋಜಿಸಲಾಗಿದ್ದ ಆಟಿಸಂ. ಏಡಿ ಎಚ್ ಡಿ. ಕಲಿಕಾ ನ್ಯೂನ್ಯತೆ ಮತ್ತು ವರ್ತನಾ ಸಮಸ್ಯೆಗಳ ಬಗ್ಗೆ ಪೋಷಕರಿಗೆ ಆಯೋಜಿಸಲಾದ ವಿಶೇಷ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. ಅಣುವಂಶಿತಿಯಿಂದ ಪರಿಸರದಿಂದ ಹಾಗೂ ಗರ್ಭಾವಸ್ಥೆಯಲ್ಲಿ ಇದ್ದಾಗ ಆಗುವ ಸಮಸ್ಯೆಗಳಿಂದ ಮಕ್ಕಳ ಬೆಳವಣಿಗೆಯಲ್ಲಿ ಈ ರೀತಿಯಾದ ಸಮಸ್ಯೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ ಇದನ್ನು ಪ್ರಾರ್ಥಮಿಕ ಹಂತದಲ್ಲೇ ಗುರುತು ಹಚ್ಚಿ ಅವರಿಗೆ ನೀಡುವ ತರಪಿಗಳ ಮುಖಾಂತರ ಇದನ್ನು ನಿಯಂತ್ರಿಸಬಹುದು ಎಂದು ನುಡಿದರು. Rotary Club Shivamogga ಇದೇ ಸಂದರ್ಭದಲ್ಲಿ ಹೈದರಾಬಾದ್ ಟೋಟಲ್ ಸೊಲ್ಯೂಷನ್ ಪುನರ್ವಸತಿ ಸೊಸೈಟಿಯ ಪ್ರಖ್ಯಾತ ಮಾನಸಿಕ ತಜ್ಞರಾದ ಡಾಕ್ಟರ್ ಪೂಜಾ ಜಾ ನಾಯರ್. ರವರು ಮಾತನಾಡುತ್ತಾ ಮಕ್ಕಳು ನಾವು ಹೇಳುವ ವಿಷಯದ ಕಡೆ ಗಮನ ಕೊಡುತ್ತಿಲ್ಲ ಸೂಚನೆಗಳನ್ನು ಪಾಲಿಸುತ್ತಿಲ್ಲ ಹಾಗೂ ಹೆಸರಿಗೆ ಪ್ರತಿಕ್ರಿಯೆ ನೀಡುತ್ತಾ ಇಲ್ಲ ಹಾಗೂ ಒಂದೇ ಸ್ಥಳದಲ್ಲಿ ಪೂರನು ಕಷ್ಟವಾಗುತ್ತಿರುವ ಈ ಸಮಸ್ಯೆಗಳನ್ನು ಗುರುತು ಹಚ್ಚಿ ಕೂಡಲೇ ಮಾನಸಿಕ ತಜ್ಞರ ಬಳಿ ಚಿಕಿತ್ಸೆ ಪಡೆದುಕೊಳ್ಳಬೇಕು ಇತ್ತೀಚಿನ ದಿನಗಳಲ್ಲಿ ಇಂತಹ ಸಮಸ್ಯೆಗಳು ಮಕ್ಕಳಲ್ಲಿ ತುಂಬಾ ಕಾಡುತ್ತಿವೆ ಎಂದು ನುಡಿದರು. ಇದೇ ಸಂದರ್ಭದಲ್ಲಿ ಹೈದರಾಬಾದಿನ ಮಕ್ಕಳ ಮಾನಸಿಕ ತಜ್ಞ ಸಂಸ್ಥೆಯ ಉಪಾಧ್ಯಕ್ಷರಾದ ಸುಮಾ ಸಿಂಗ್ ಅವರು ಮಾತನಾಡುತ್ತಾ ಈಗಾಗಲೇ ಹೈದರಾಬಾದಿನಲ್ಲಿ 11 ಸೆಂಟರ್ ಗಳಲ್ಲಿ ಈ ಸಮಸ್ಯೆಗಳಿಗೆ ಚಿಕಿತ್ಸೆ ನೀಡುತ್ತಾ ಇದ್ದೇವೆ ಆದ್ದರಿಂದ ಇಂದು ಪೋಷಕರಿಗೆ ಹಾಗೂ ವೈದ್ಯರಿಗೆ ಇದರ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಿದಾಗ ಇಂತಹ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದು ಎಂದು ನೋಡಿದರು ರೋಟರಿ ಕ್ಲಬ್ ಮಿಟ್ ಟೌನ್ ನ ಅಧ್ಯಕ್ಷ ಸುರೇಶ್ ದುರ್ಗಪ್ಪ ಮಾತನಾಡುತ್ತಾ ಇಂದು ಈ ಜಾಗೃತಿ ಕಾರ್ಯಗಾರಕ್ಕೆ 150ಕ್ಕೂ ಹೆಚ್ಚು ಪೋಷಕರು ಆಗಮಿಸಿರುವುದು ತುಂಬಾ ಸಂತೋಷವಾಗುತ್ತಿದೆ ಈ ಒಂದು ದಿನದ ಕಾರ್ಯಗಾರವನ್ನು ಪೋಷಕರು ಸದುಪಯೋಗ ಪಡಿಸಿಕೊಳ್ಳಬೇಕೆಂದು ನುಡಿದರು. ವೇದಿಕೆಯಲ್ಲಿ ರೋಟರಿ ಮಾಜಿ ಸಹಾಯಕ ಗೌರ್ನರ್ಜಿ. ಜಿ ವಿಜಯಕುಮಾರ್. ಮಾಜಿ ಅಧ್ಯಕ್ಷರು ಹಾಗೂ ಯೋಜನಾ ನಿರ್ದೇಶಕಿ. ರೋ
ವೀಣಾ ಸುರೇಶ್. ಮಾನಸಿಕ ತಜ್ಞ ಡಾಕ್ಟರ್ ಎಸ್ ಟಿ ಅರವಿಂದ್ ಕಾರ್ಯದರ್ಶಿ ಪಹಿಂ ಹುಸೇನ್. ಸಹಕಾರದ ಶ್ರೀ ಕೆವಿಎಲ್ ರಾಜು ಉಪಸ್ಥಿತರಿದ್ದರು ಕಾರ್ಯಗಾರಕ್ಕೆ ವಿವಿಧ ಜಿಲ್ಲೆಗಳಿಂದ ಪೋಷಕರುಗಳು ಆಗಮಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...