Sunday, March 29, 2026
Sunday, March 29, 2026

World Health Day ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು- ಬೆನಕಪ್ಪ

Date:

World Health Day ವಿಶ್ವ ಆರೋಗ್ಯ ದಿನದ ಅಂಗವಾಗಿ ಮಾಚೇನಹಳ್ಳಿ ಕೈಗಾರಿಕೆಗಳ ಸಂಘ ಮತ್ತು ಶಿವಮೊಗ್ಗದ ಚಂದ್ರಗಿರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ಮಾಚೇನಹಳ್ಳಿ, ನಿಧಿಗೆ ಮತ್ತು ಜೇಡಿಕಟ್ಟೆ ಕೈಗಾರಿಕಾ ಪ್ರದೇಶಗಳಲ್ಲಿರುವ ಕಾರ್ಖಾನೆಗಳ ಸಿಬ್ಬಂದಿಗಳಿಗೆ ಮತ್ತು ಕಾರ್ಮಿಕರಿಗೆ ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಸ್ ರುದ್ರೇಗೌಡರ ಮಾರ್ಗದರ್ಶನದಂತೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಕಾರ್ಖಾನೆಗಳಲ್ಲಿ ತುರ್ತು ಸಂದರ್ಭಗಳಲ್ಲಿ ಕೈಗೊಳ್ಳಬಹುದಾದ ಪ್ರಥಮ ಚಿಕಿತ್ಸಾ ವಿಧಾನಗಳ ಬಗ್ಗೆ ಜಾಗೃತಿ ಶಿಬಿರಗಳನ್ನು ಆಯೋಜಿಸಲಾಗಿತ್ತು.

ಈ ವೇಳೆ ಮಾತನಾಡಿದ ಮಾಚೇನಹಳ್ಳಿ ಕೈಗಾರಿಕಾ ಅಸೋಸಿಯೇಷನ್ ಅಧ್ಯಕ್ಷ ಬೆನಕಪ್ಪ, ಮನುಷ್ಯನಿಗೆ ಆರೋಗ್ಯ ಅತ್ಯಂತ ಅವಶ್ಯಕ. ಹಾಗಾಗಿ ಆರೋಗ್ಯದ ಬಗ್ಗೆ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು. ಪ್ರಸ್ತುತ ದಿನಮಾನದಲ್ಲಿ ಆರೋಗ್ಯದ ಬಗ್ಗೆ ಎಷ್ಟು ಜಾಗೃತರಾಗಿದ್ದರೂ ಸಾಲದು ಎಂದು ಹೇಳಿದರು.

ಶಿಬಿರದಲ್ಲಿ ಸುಮಾರು 300 ಜನರಿಗೆ ಮಧುಮೇಹ, ರಕ್ತದೊತ್ತಡ, ಇ ಸಿ ಜಿ ಮುಂತಾದ ಆರೋಗ್ಯ ತಪಾಸಣೆಗಳನ್ನು ನಡೆಸಲಾಯಿತು. ಮತ್ತು ಸುಮಾರು 70 ಜನರು ಜಾಗೃತಿ ಶಬಿರದಲ್ಲಿ ಭಾಗವಹಿಸಿದ್ದರು. ಚಂದ್ರಗಿರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಡಾ. ಸಂಗಮೇಶ್ ಮತ್ತು ಡಾ. ಮೇಘಾರವರು ಪ್ರಾತ್ಯಕ್ಷಿಕೆಗಳ ಮೂಲಕ ನೆರೆದವರ ಮನ ಮುಟ್ಟುವಂತೆ ವಿವರಿಸಿದರು.

ಈ ಸಂದರ್ಭದಲ್ಲಿ ಮಾಚೇನಹಳ್ಳಿ ಕೈಗಾರಿಕೆಗಳ ಸಂಘದ ವತಿಯಿಂದ ಚಂದ್ರಗಿರಿ ಆಸ್ಪತ್ರೆಯ ಡಾ. ಸಂಗಮೇಶ್, ಡಾ. ಮೇಘಾ.ವಿ, ಡಾ. ಮೇಘನಾ ಮತ್ತು ಇತರೆ ಸಹಾಯಕ ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು.

World Health Day ಮಾಚೇನಹಳ್ಳಿ ಕೈಗಾರಿಕೆಗಳ ಸಂಘದ ಅಧ್ಯಕ್ಷ ಡಿ.ಜಿ.ಬೆನಕಪ್ಪ, ಖಜಾಂಚಿ ದಿನೇಶ್.ಹೆಚ್.ಎಲ್, ನಿರ್ದೇಶಕರುಗಳಾದ ಸೌರಭ್, ಸಂಜಯ್ ಪಾಟೀಲ್, ಸುರೇಂದ್ರ ಮತ್ತು ವಿವಿಧ ಕಾರ್ಖಾನೆಗಳ ಮಾನವ ಸಂಪನ್ಮೂಲ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kote SeethaRamanjaneya Temple ವೈಭವದಿಂದ ನಡೆದ ಶ್ರೀಆಂಜನೇಯಸ್ವಾಮಿ ರಥೋತ್ಸವ

Kote SeethaRamanjaneya Temple ಪುರಾತನವಾದ ಶ್ರೀ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಪ್ರತಿವರ್ಷದಂತೆ...

Department of Kannada and Culture ಶ್ರೀಅಗ್ನಿಬನ್ನಿರಾಯಸ್ವಾಮಿಯವರ ಇತಿಹಾಸವನ್ನ ನಾವೆಲ್ಲಾ ತಿಳಿದುಕೊಳ್ಳಬೇಕು- ಆನಂದ್.

Department of Kannada and Culture ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು...

Rotary Club Shimoga ಚಿನ್ನ,ಬೆಳ್ಳಿ ಧಾರಣೆ ವ್ಯತ್ಯಾಸಕ್ಕೆ ಜಾಗತಿಕ ಸಮಸ್ಯೆಗಳೇ ಕಾರಣ- ಸೆಂಥಿಲ್ ವೆಲನ್.

Rotary Club Shimoga ಚಿನ್ನ ಮತ್ತು ಬೆಳ್ಳಿ ಕಷ್ಟಕಾಲದಲ್ಲಿ ಅಪತ್ಬಾಂದವ ರೀತಿಯಲ್ಲಿ ವರ್ತಿಸುತ್ತದೆ....

S. N. Channabasappa ಮಾದಕ ದ್ಯವ್ಯ ವ್ಯಸನ ವಿರೋಧಿ ಕ್ರಮಗಳಿಗೆ ವಿಶೇಷ ಕಾರ್ಯಪಡೆ ರಚನೆ ಮಾಡಿ- ಎಸ್.ಎನ್.ಚನ್ನಬಸಪ್ಪ.

S. N. Channabasappa ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧ ಕೃತ್ಯಗಳು ಮತ್ತು ಮಾದಕ...