Friday, July 10, 2026
Friday, July 10, 2026

World Health Day ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು- ಬೆನಕಪ್ಪ

Date:

World Health Day ವಿಶ್ವ ಆರೋಗ್ಯ ದಿನದ ಅಂಗವಾಗಿ ಮಾಚೇನಹಳ್ಳಿ ಕೈಗಾರಿಕೆಗಳ ಸಂಘ ಮತ್ತು ಶಿವಮೊಗ್ಗದ ಚಂದ್ರಗಿರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ಮಾಚೇನಹಳ್ಳಿ, ನಿಧಿಗೆ ಮತ್ತು ಜೇಡಿಕಟ್ಟೆ ಕೈಗಾರಿಕಾ ಪ್ರದೇಶಗಳಲ್ಲಿರುವ ಕಾರ್ಖಾನೆಗಳ ಸಿಬ್ಬಂದಿಗಳಿಗೆ ಮತ್ತು ಕಾರ್ಮಿಕರಿಗೆ ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಸ್ ರುದ್ರೇಗೌಡರ ಮಾರ್ಗದರ್ಶನದಂತೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಕಾರ್ಖಾನೆಗಳಲ್ಲಿ ತುರ್ತು ಸಂದರ್ಭಗಳಲ್ಲಿ ಕೈಗೊಳ್ಳಬಹುದಾದ ಪ್ರಥಮ ಚಿಕಿತ್ಸಾ ವಿಧಾನಗಳ ಬಗ್ಗೆ ಜಾಗೃತಿ ಶಿಬಿರಗಳನ್ನು ಆಯೋಜಿಸಲಾಗಿತ್ತು.

ಈ ವೇಳೆ ಮಾತನಾಡಿದ ಮಾಚೇನಹಳ್ಳಿ ಕೈಗಾರಿಕಾ ಅಸೋಸಿಯೇಷನ್ ಅಧ್ಯಕ್ಷ ಬೆನಕಪ್ಪ, ಮನುಷ್ಯನಿಗೆ ಆರೋಗ್ಯ ಅತ್ಯಂತ ಅವಶ್ಯಕ. ಹಾಗಾಗಿ ಆರೋಗ್ಯದ ಬಗ್ಗೆ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು. ಪ್ರಸ್ತುತ ದಿನಮಾನದಲ್ಲಿ ಆರೋಗ್ಯದ ಬಗ್ಗೆ ಎಷ್ಟು ಜಾಗೃತರಾಗಿದ್ದರೂ ಸಾಲದು ಎಂದು ಹೇಳಿದರು.

ಶಿಬಿರದಲ್ಲಿ ಸುಮಾರು 300 ಜನರಿಗೆ ಮಧುಮೇಹ, ರಕ್ತದೊತ್ತಡ, ಇ ಸಿ ಜಿ ಮುಂತಾದ ಆರೋಗ್ಯ ತಪಾಸಣೆಗಳನ್ನು ನಡೆಸಲಾಯಿತು. ಮತ್ತು ಸುಮಾರು 70 ಜನರು ಜಾಗೃತಿ ಶಬಿರದಲ್ಲಿ ಭಾಗವಹಿಸಿದ್ದರು. ಚಂದ್ರಗಿರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಡಾ. ಸಂಗಮೇಶ್ ಮತ್ತು ಡಾ. ಮೇಘಾರವರು ಪ್ರಾತ್ಯಕ್ಷಿಕೆಗಳ ಮೂಲಕ ನೆರೆದವರ ಮನ ಮುಟ್ಟುವಂತೆ ವಿವರಿಸಿದರು.

ಈ ಸಂದರ್ಭದಲ್ಲಿ ಮಾಚೇನಹಳ್ಳಿ ಕೈಗಾರಿಕೆಗಳ ಸಂಘದ ವತಿಯಿಂದ ಚಂದ್ರಗಿರಿ ಆಸ್ಪತ್ರೆಯ ಡಾ. ಸಂಗಮೇಶ್, ಡಾ. ಮೇಘಾ.ವಿ, ಡಾ. ಮೇಘನಾ ಮತ್ತು ಇತರೆ ಸಹಾಯಕ ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು.

World Health Day ಮಾಚೇನಹಳ್ಳಿ ಕೈಗಾರಿಕೆಗಳ ಸಂಘದ ಅಧ್ಯಕ್ಷ ಡಿ.ಜಿ.ಬೆನಕಪ್ಪ, ಖಜಾಂಚಿ ದಿನೇಶ್.ಹೆಚ್.ಎಲ್, ನಿರ್ದೇಶಕರುಗಳಾದ ಸೌರಭ್, ಸಂಜಯ್ ಪಾಟೀಲ್, ಸುರೇಂದ್ರ ಮತ್ತು ವಿವಿಧ ಕಾರ್ಖಾನೆಗಳ ಮಾನವ ಸಂಪನ್ಮೂಲ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...