Monday, December 15, 2025
Monday, December 15, 2025

Canara Bank Institute For Self-Employment ಟೈಲರಿಂಗ್, ಕುರಿ ಸಾಕಾಣಿಕೆ & ಟ್ಯಾಲಿ ಅಕೌಂಟಿಂಗ್ ಕಲಿಯಬೇಕೆ ? ಉಚಿತ ತರಬೇತಿ‌. ಆಸಕ್ತರಿಗೆ ಇಲ್ಲಿದೆ ಮಾಹಿತಿ

Date:

Canara Bank Institute For Self-Employment ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತಿ ಇರುವ ರೈತರು, ಕಾರ್ಮಿಕರು, ನಿರುದ್ಯೋಗಿ ಯುವಕ ಮತ್ತು ಯುವತಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿರಬೇಕು ಮತ್ತು 8ನೇ ತರಗತಿ ಉತ್ತೀರ್ಣರಾಗಿರಬೇಕು. ಮತ್ತು ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ ಹೊಂದಿದು ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು. ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ.

ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಕೃಷಿ ಉದ್ಯಮಿ ( ಹೈನುಗಾರಿಕೆ, ಕುರಿ, ಎರೆಹುಳು ಗೊಬ್ಬರ ತಯಾರಿಕೆ ) 13 ದಿನಗಳ ತರಬೇತಿ ನೀಡಲಾಗುವುದು . ಈ ತರಬೇತಿಯು 15/04/2025ರಂದು ಆರಂಭಗೊಳ್ಳಲಿದೆ. ಕಂಪ್ಯೂಟರೈಸಡ್ (ಟ್ಯಾಲಿ) 38 ದಿನಗಳ ಅಕೌಂಟಿಂಗ್ ತರಬೇತಿಯು 28/04/2025 ರಿಂದ ಆರಂಭಗೊಳ್ಳಲಿದೆ.

6 ದಿನಗಳ ಕುರಿ ಸಾಕಾಣಿಕೆ ತರಬೇತಿಯು 23/04/2025 ರಿಂದ ಆರಂಭಗೊಳ್ಳಲಿದೆ.

ವಿಭಿನ್ನ ಶೈಲಿಯಾ ಬ್ಲೌಸ್ ಸ್ಟಿಚಿಂಗ್

( ಟೈಲರಿಂಗ್ ) ತರಬೇತಿಯು 6 ದಿನಗಳ ಕಾಲ ನಡೆಯಲಿದ್ದು , ಈ ತರಬೇತಿಯು 23/04/2025 ರಿಂದ ಪ್ರಾರಂಭಗೊಳ್ಳಲಿದೆ.
ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ:
ನಿರ್ದೇಶಕರು,
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ,
ಹೊನ್ನಾಳಿ ರಸ್ತೆ, ಹೊಳಲೂರು-೫೭೭ ೨೧೬ (ಶಿವಮೊಗ್ಗ ತಾಲ್ಲೂಕು)
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 9743429595, 9164411580, 8105378735 9449371579, 9481955721,
ಇವರನ್ನು ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...