Monday, August 3, 2026
Monday, August 3, 2026

Adichunchanagiri Mahasansthan Mutt ಶ್ರೀಕಾಲಭೈರವ ಸ್ವಾಮಿ ದೇಗುಲ ವಾರ್ಷಿಕೋತ್ಸವ, ಸುವರ್ಣ ವರ್ಷೋತ್ಸವ ದಂಪತಿಗಳಿಗೆ ಸನ್ಮಾನ

Date:

Adichunchanagiri Mahasansthan Mutt ಶ್ರೀಕಾಲಭೈರವ ಸ್ವಾಮಿ ದೇಗುಲ ವಾರ್ಷಿಕೋತ್ಸವ, ಸುವರ್ಣ ವರ್ಷೋತ್ಸವ ದಂಪತಿಗಳಿಗೆ ಸನ್ಮಾನ ಶಿವಮೊಗ್ಗದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಗಳವರ ಕೃಪಾಶೀರ್ವಾದಗಳೊಂದಿಗೆ, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಮತ್ತು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.

ಇಲ್ಲಿನ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಸ್ಥಾನದ ವಾರ್ಷಿಕೋತ್ಸವ, ಶ್ರೀ ಆದಿಚುಂಚನಾಗಿರಿ ಮಹಾಸಂಸ್ಥಾನ ಮಠ ಶಿವಮೊಗ್ಗ ಶಾಖೆಯಲ್ಲಿ ನಡೆಯಲಿದ್ದು, ವಿವಾಹವಾಗಿ 50 ವರ್ಷ ಪೂರೈಸಿದ ಆದರ್ಶ ಹಿರಿಯ ದಂಪತಿಗಳಿಗೆ ಸನ್ಮಾನ ಕೂಡ ನಡೆಯುವುದು.

ಏಪ್ರಿಲ್ 11 ರಂದು ಬೆಳಿಗ್ಗೆ 5:30 ರಿಂದ ಶ್ರೀ ಕಾಲಭೈರವೇಶ್ವರಸ್ವಾಮಿ ದೇವಾಲಯದ ವಾರ್ಷಿಕೋತ್ಸವ ಸಮಾರಂಭದ ನಿಮಿತ್ತ ಶ್ರೀ ಕಾಲಬೈರ ವೇಶ್ವರ ಸ್ವಾಮಿಗೆ ಹೋಮ, ಹವನಾದಿಗಳೊಂದಿಗೆ ಕುಂಭಾಭಿಷೇಕ, ಮಹಾಮಂಗಳಾರತಿ, ವಿಶೇಷ ಪೂಜಾ ಕೈಂಕರ್ಯಗಳೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ.

ನಂತರ ಬೆಳಿಗ್ಗೆ 8 ಗಂಟೆಗೆ ಆದರ್ಶ ಹಿರಿಯ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮ ಸಹ ಇದೇ ಸ್ಥಳದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಪೂಜ್ಯರು ಉಪಸ್ಥಿತರಿರುವರು.

50ವರ್ಷ ಪೂರೈಸಿದ ಹಿರಿಯ ದಂಪತಿಗಳನ್ನು ಸನ್ಮಾನಿಸುವ ಅಪರೂಪದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇದಕ್ಕೆ ಈಗಾಗಲೇ ಅರ್ಹ ಹಿರಿಯರನ್ನು ಗುರುತಿಸಿ ಅವರನ್ನು ಆಮಂತ್ರಿಸಲಾಗಿದೆ.

Adichunchanagiri Mahasansthan Mutt ಶ್ರೀಕಾಲಭೈರವ ಸ್ವಾಮಿ ದೇಗುಲ ವಾರ್ಷಿಕೋತ್ಸವ, ಸುವರ್ಣ ವರ್ಷೋತ್ಸವ ದಂಪತಿಗಳಿಗೆ ಸನ್ಮಾನ ಈ ಎಲ್ಲಾ ಕಾರ್ಯಕ್ರಮದಲ್ಲಿ ಜಿಲ್ಲೆಯ ಜನಪ್ರತಿ ನಿದಿಗಳು,ಗಣ್ಯ ವ್ಯಕ್ತಿಗಳು, ಅಧಿಕಾರಿಗಳು, ಪಾಲ್ಗೊಳ್ಳುವರು. ನಗರದ ನಾಗರಿಕರು ಹಾಗೂ ಪೋಷಕ ಬಂಧುಗಳು ಹಾಗೂ ಶ್ರೀ ಮಠದ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಕೊಡಬೇಕಾಗಿ ಕಾರ್ಯಕ್ರಮದ ಆಯೋಜಕರು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...